ಶಿಖರಾರೋಹಣ 2ನೇ ಆವೃತ್ತಿ ಬಿಡುಗಡೆ ಇಂದು


Team Udayavani, Feb 10, 2018, 12:37 PM IST

m6-shikharo.jpg

ಮೈಸೂರು: ಪ್ರಧಾನ ಮಂತ್ರಿಗಳಾಗಿ ಎಚ್‌.ಡಿ.ದೇವೇಗೌಡರ ಸಾಧನೆ ಕುರಿತಂತೆ ಹೊರತರಲಾಗಿರುವ ಸಾಧನೆಯ ಶಿಖರಾರೋಹಣ ಎರಡನೇ ಆವೃತ್ತಿ ಶನಿವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ ಎಂದು ಜೆಡಿಎಸ್‌ ಮುಖಂಡರಾದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್‌ ಭವನದಲ್ಲಿ ಸಂಜೆ 4.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಇತಿಹಾಸ ತಜ್ಞರಾದ ವಿಶ್ರಾಂತ ಕುಲಪತಿ ಡಾ.ಬಿ.ಷೇಕ್‌ ಅಲಿ ಅಧ್ಯಕ್ಷತೆವಹಿಸಲಿದ್ದಾರೆ. ಎಚ್‌.ಡಿ.ದೇವೇಗೌಡ ಹಾಗೂ ಚೆನ್ನಮ್ಮ ದೇವೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಸಾಧನೆಗೆ ಅಕ್ಷರ ರೂಪ: ಪುಸ್ತಕ ರಚನೆಕಾರರಲ್ಲಿ ಒಬ್ಬರಾದ ಸಾಹಿತಿ ಡಾ.ಪ್ರಧಾನ್‌ ಗುರುದತ್ತ ಮಾತನಾಡಿ, ಕೇವಲ 10 ತಿಂಗಳು 11 ದಿನಗಳ ಕಾಲ ಪ್ರಧಾನಮಂತ್ರಿಯಾಗಿದ್ದ ದೇವೇಗೌಡರು, ರಾಷ್ಟ್ರದ ಅನೇಕ ಜ್ವಲಂತ ಸಮಸ್ಯೆಗಳನ್ನು ನಿವಾರಿಸಿ ಸಾಧನೆ ಮಾಡಿದ್ದಾರೆ.

ಅವರೊಂದಿಗೆ ನಾನು ಮತ್ತು ಡಾ.ಸಿ.ನಾಗಣ್ಣ ಅವರು 40 ರಿಂದ 50 ಸಂದರ್ಶನ ಮಾಡಿ ಅವರ ಅಭಿಪ್ರಾಯಗಳಿಗೆ ಅಕ್ಷರ ರೂಪ ನೀಡಿದ್ದೇವೆ. ದೇವೇಗೌಡರು ಹೇಳುತ್ತಿದ್ದ ಒಂದೊಂದು ಮಾಹಿತಿಯಲ್ಲೂ ಖಚಿತತೆ ಇತ್ತು. ದಿನಾಂಕಗಳ ಸಹಿತ ವಿವರಿಸುತ್ತಿದ್ದರು.

ಅವರೊಬ್ಬ ಮಾನವ ಕಂಪ್ಯೂಟರ್‌ ಇದ್ದಂತೆ, ದೇವೇಗೌಡರು ಕೊಟ್ಟ ಮಾಹಿತಿಗಳನ್ನು ಧೂತವಾಸದಿಂದ ಖಚಿತಪಡಿಸಿಕೊಂಡೇ ಪ್ರಕಟಿಸಿದ್ದೇವೆ. ಇದರಲ್ಲಿ ನಮ್ಮದು ಅಳಿಲು ಸೇವೆ ಎಂದು ಹೇಳಿದರು. 24 ಅಧ್ಯಾಯವನ್ನು ಒಳಗೊಂಡ 400 ಪುಟದ ಈ ಗ್ರಂಥದಲ್ಲಿ ದೇವೇಗೌಡರು ತಮ್ಮ ಸಾಧನೆಯನ್ನು ಹೇಳಿಕೊಂಡಿದ್ದಾರೆಯೇ ಹೊರತು, ಯಾರ ಬಗ್ಗೆಯೂ ಆರೋಪ ಮಾಡಿಲ್ಲ ಎಂದರು. 

ದೋಷ ಸರಿಪಡಿಸಿ 2ನೇ ಆವೃತ್ತಿ: ಬೆಂಗಳೂರಿನಲ್ಲಿ ಮೊದಲ ಆವೃತ್ತಿ ಬಿಡುಗಡೆಯಾದ ಒಂದೇ ವಾರದಲ್ಲಿ 2 ಸಾವಿರ ಪ್ರತಿಗಳು ಮಾರಾಟವಾಗಿದೆ. ಹೀಗಾಗಿ ಮೊದಲ ಆವೃತ್ತಿಯಲ್ಲಿನ ಕೆಲ ಸಣ್ಣಪುಟ್ಟ ಮುದ್ರಣ ದೋಷಗಳನ್ನು ಸರಿಪಡಿಸಿ, ಪ್ರಧಾನಿಯಾಗಿ ಕರ್ನಾಟಕಕ್ಕೆ ಅವರ ಕೊಡುಗೆ ಎಂಬ ಅಧ್ಯಾಯವನ್ನು ಸೇರಿಸಿ 2ನೇ ಆವೃತ್ತಿ ಹೊರತಂದಿದ್ದೇವೆ ಎಂದರು. ಜೆಡಿಎಸ್‌ ನಗರ ಅಧ್ಯಕ್ಷ ಕೆ.ಟಿ.ಚೆಲುವೇಗೌಡ, ನಗರಪಾಲಿಕೆ ಸದಸ್ಯರಾದ ಆರ್‌.ಲಿಂಗಪ್ಪ, ಎಸ್‌.ಬಿ.ಎಂ.ಮಂಜು ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಸಾಧನೆಯ ಶಿಖರಾರೋಹಣ ಗ್ರಂಥವನ್ನು ಡಾ.ಪ್ರಧಾನ್‌ ಗುರುದತ್ತ ಮತ್ತು ಡಾ.ಸಿ.ನಾಗಣ್ಣ ಅವರೇ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ಬರೆಯುತ್ತಿದ್ದು, ಮೂರು ತಿಂಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಾಗುವುದು. ಎಚ್‌.ಡಿ.ಕುಮಾರಸ್ವಾಮಿ ಅವರ 20 ತಿಂಗಳ ಸಾಧನೆಯನ್ನು ದಾಖಲಿಸಲು ಬಹಳಷ್ಟು ಸಾಹಿತಿಗಳು ಮುಂದೆ ಬಂದಿದ್ದಾರೆ. ಆದರೆ, ಕುಮಾರಸ್ವಾಮಿ ಅವರಿಗೆ ಸಮಯ ಇಲ್ಲದಿರುವುದರಿಂದ ಆ ಕೆಲಸ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಾಧನೆಯ ಪುಸ್ತಕವನ್ನೂ ಹೊರತರಲಾಗುವುದು.
-ಪ್ರೊ.ಕೆ.ಎಸ್‌.ರಂಗಪ್ಪ, ಜೆಡಿಎಸ್‌ ಮುಖಂಡರು

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.