ಜ್ಯೇಷ್ಠ ಮಾಸದ ಸೂಪರ್‌ ಮೂನ್‌


Team Udayavani, Jun 14, 2022, 6:20 AM IST

ಜ್ಯೇಷ್ಠ ಮಾಸದ ಸೂಪರ್‌ ಮೂನ್‌

ಇಂದು ಜೂನ್‌ 14. ಜ್ಯೇಷ್ಠ ಮಾಸದ ಹುಣ್ಣಿಮೆ. ಇಂದೇ ಸೂಪರ್‌ ಮೂನ್‌. ಚಂದ್ರ ಭೂಮಿಯ ಸುತ್ತ 28 ದಿನಗಳಿಗೊಮ್ಮೆ ಸುತ್ತುವ ತಿರುಗಾಟದಲ್ಲಿ ಇಂದು ಪೆರಿಜಿಯಲ್ಲಿ, ಅಂದರೆ ಭೂಮಿಗೆ ಸಮೀಪ ಸರಾಸರಿ ದೂರಕ್ಕಿಂತ ಸುಮಾರು 30 ಸಾವಿರ ಕಿ. ಮೀ. ಹತ್ತಿರ. ಚಂದ್ರ ತನ್ನ ದೀರ್ಘ‌ ವೃತ್ತಾಕಾರದ ಪಥದಲ್ಲಿ 28 ದಿನಗಳಿಗೊಮ್ಮೆ ಭೂಮಿಗೆ ಸಮೀಪ, ಪೆರಿಜಿಯಲ್ಲಿ ಹಾಗೂ ದೂರದ ಅಪೊಜಿಯಲ್ಲಿ ಬರುವುದು ವಾಡಿಕೆ. ಈ ಪೆರಿಜಿಗೆ ಬಂದಾಗ ಹುಣ್ಣಿಮೆಯಾದರೆ ಸೂಪರ್‌ ಚಂದ್ರ ಹತ್ತಿರ ಬರುವುದರಿಂದ ಈ ದಿನ ಚಂದ್ರ ನಮಗೆ ಸುಮಾರು 15 ಅಂಶ ಗಾತ್ರದಲ್ಲಿ ದೊಡ್ಡದಾಗಿ 25 ಅಂಶ ಹೆಚ್ಚಿನ ಬೆಳಕಿನಿಂದ ಗೋಚರಿಸುತ್ತದೆ. ಚಂದ್ರ ಭೂಮಿಗಳ ಸರಾಸರಿ ದೂರ 3 ಲಕ್ಷದ 84 ಸಾವಿರ ಕಿ.ಮೀ. ಆದರೆ ಇಂದು 3 ಲಕ್ಷದ 57 ಸಾವಿರ.

ಈಗ ಜ್ಯೇಷ್ಠ ಮಾಸ
ಭಾರತೀಯರ ಮಾಸಗಳ ಕಲ್ಪನೆ ಬಲು ಚಂದ. ಹುಣ್ಣಿಮೆಯ ಚಂದ್ರ ಆ ದಿನ ಯಾವ ನಕ್ಷತ್ರದ ಜತೆಗಿರುವನೋ ಆ ನಕ್ಷತ್ರದ ಹೆಸರನ್ನು ಆ ತಿಂಗಳಿಗೆ ನಮ್ಮ ಹಿರಿಯರು ಇಟ್ಟಿರುವುದು ಅವರ ಆಕಾಶ ವೀಕ್ಷಣಾ ಪ್ರೌಢ ಜ್ಞಾನವನ್ನು ತಿಳಿಸುತ್ತದೆ. ಇಂದು ವೃಶ್ಚಿಕ ರಾಶಿಯ ಸುಂದರ ನಕ್ಷತ್ರ ಜ್ಯೇಷ್ಠ, ಅಂಟಾರಸ್‌ನ ಪಕ್ಕದಲ್ಲಿ ಚಂದ್ರ ಉದಯಿಸುತ್ತದೆ. ಹಾಗಾಗಿ ಈ ತಿಂಗಳಿನ ಹೆಸರು ಜ್ಯೇಷ್ಠ ಮಾಸ.

ಅದೇನು ಕಾಕತಾಳೀಯವೋ, ಸತ್ಯ ದರ್ಶನವೋ ತಿಳಿಯದು. ನಮ್ಮ ಭಾರತೀಯ ಪೂರ್ವಿಕರು 27 ನಕ್ಷತ್ರಗಳಲ್ಲಿ ಈ ಅಂಟಾರಸ್‌ ಅನ್ನು ಜ್ಯೇಷ್ಠ ಎಂದು ನಾಮಕರಣ ಅದು ಹೇಗೆ ಮಾಡಿದರೋ ತಿಳಿಯದು. ಜ್ಯೇಷ್ಠ ಅಂದರೆ ಹಿರಿದು, ದೊಡ್ಡದು ಎಂದರ್ಥ.

ಇಂದಿನ ಖಗೋಳ ವಿಜ್ಞಾನವೂ ಈಗ ಬರಿಗಣ್ಣಿಗೆ ಕಾಣುವ ನಕ್ಷತ್ರಗಳಲ್ಲಿ ಈ ಅಂಟಾರಸ್‌ ತುಂಬಾ ದೊಡ್ಡದೆಂದು ಸಾರಿದ್ದಾರೆ. ಈ ನಕ್ಷತ್ರ ನಮ್ಮ ಸೂರ್ಯನ ವ್ಯಾಸಕ್ಕಿಂತ ಸುಮಾರು 700 ಪಟ್ಟು ದೊಡ್ಡದು. ಹಾಗಾಗಿ ಸೂರ್ಯನಿಗಿಂತ ಕೋಟಿ ಕೋಟಿ ಪಟ್ಟು ದೊಡ್ಡದು.

ಭೂಮಿಗೆ ಚಂದ್ರ ಹತ್ತಿರ ಬಂದಾಗಲೆಲ್ಲಾ ಸಮುದ್ರದ ಭರತ ಇಳಿತಗಳ ಅಬ್ಬರ ಜೋರು. ಇದೀಗ ಮುಂಗಾರೂ ಅಬ್ಬರಿಸುವ ಸೂಚನೆ. ಇದರೊಂದಿಗೆ ಹುಣ್ಣಿಮೆ ಹಾಗೂ ಸೂಪರ್‌ಮೂನ್‌ಗಳಿಂದ ಸಮುದ್ರದ ತೆರೆಗಳ ನರ್ತನ ಈ ದಿನ ಜೋರಿರಬಹುದು. ಎಲ್ಲೆಲ್ಲೂ ಪ್ರಕೃತಿಯ ನರ್ತನವೇ. ನಾವು ಪ್ರೇಕ್ಷಕರು ಮಾತ್ರ.

– ಡಾ| ಎ. ಪಿ. ಭಟ್‌ ಉಡುಪಿ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.