ಅರ್ಧ ಗಂಟೇಲಿ ಹಲ್ವಾ ರೆಡಿ!


Team Udayavani, Sep 20, 2017, 2:36 PM IST

20-Z-5.jpg

ಸ್ಪಂಜಿನಷ್ಟು ಮೆತ್ತಗಿರುವ, ಕಣಕಣದಲ್ಲೂ ಸಿಹಿಯನ್ನೇ ತುಂಬಿಕೊಂಡಿರುವ ತಿನಿಸು ಹಲ್ವಾ. ಎಲ್ಲರಿಗೂ ಹೆಚ್ಚಾಗಿ ಗೊತ್ತಿರುವುದು ಕ್ಯಾರೆಟ್‌ ಹಲ್ವಾದ ರುಚಿಯಷ್ಟೇ. ಸೇಬು, ಬಾದಾಮಿ, ಬಾಳೆ ಹಣ್ಣಿನ ಹಲ್ವಾಗಳನ್ನೂ ಮಾಡಬಹುದು. ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ತಯಾರಾಗುವ ಸ್ವಾದಿಷ್ಟ ತಿನಿಸು ಎಂಬುದು ಹಲ್ವಾಕ್ಕೆ ಇರುವ ಪ್ಲಸ್‌ ಪಾಯಿಂಟ್‌. ಇನ್ನು ತಡವೇಕೆ? ಹಲ್ವಾ ಮಾಡುವುದು ಹೇಗೆ ಎಂಬುದನ್ನು ಕಲಿ(ತಿಳಿ)ಯೋಣ ಬನ್ನಿ

1. ಕ್ಯಾರೆಟ್‌ ಹಲ್ವಾ:
ಬೇಕಾಗುವ ಪದಾರ್ಥಗಳು: ಕ್ಯಾರೆಟ್‌- 1/2 ಕೆ.ಜಿ., ತುಪ್ಪ- 3 ಕಪ್‌, ಮಿಲ್ಕ್ಮೇಡ್‌- 2 ಕಪ್‌, ಸಕ್ಕರೆ- 1 ಕಪ್‌, ಏಲಕ್ಕಿ ಪುಡಿ- 1 ಚಮಚ, ದ್ರಾಕ್ಷಿ ಗೋಡಂಬಿ- 3 ಚಮಚ.

ಮಾಡುವ ವಿಧಾನ: ದಪ್ಪ ತಳದ ಪಾತ್ರೆಯಲ್ಲಿ 2 ಚಮಚ ತುಪ್ಪ ಹಾಕಿ, ಕ್ಯಾರೆಟ್‌ ತುರಿ ಹಾಕಿ ಹುರಿಯಿರಿ. ಸ್ವಲ್ಪ ನೀರು ಹಾಕಿ ಹದವಾಗಿ ಬೇಯಿಸಿ. ಇದಕ್ಕೆ ಮಿಕ್ಕ ತುಪ್ಪ, ಮಿಲ್ಕ್ಮೇಡ್‌ ಹಾಕಿ ಕೂಡಿಸಿ. ನಂತರ ಏಲಕ್ಕಿ ಪುಡಿ, ದ್ರಾಕ್ಷಿ, ಗೋಡಂಬಿ ಹಾಕಿ ಕೂಡಿಸಿ ಸಕ್ಕರೆಯ ಅಗತ್ಯ ಇದ್ದಲ್ಲಿ ಸೇರಿಸಿ ಕೂಡಿಸುತ್ತಿರಿ. ಮಿಶ್ರಣವು ತಳ ಬಿಡುತ್ತಾ ಬಂದಾಗ ಕೆಳಗಿಳಿಸಿ.

2. ಸೇಬಿನ ಹಲ್ವಾ
ಬೇಕಾಗುವ ಪದಾರ್ಥಗಳು: ಸೇಬು- 6, ತುಪ್ಪ- 1 ಕಪ್‌, ವೆನಿಲ್ಲಾ ಎಸೆನ್ಸ್‌- 1 ಚಮಚ, ಸಕ್ಕರೆ- 1 ಕಪ್‌, ಬಾದಾಮಿ- ಗೋಡಂಬಿ- ಪಿಸ್ತಾ ಚೂರುಗಳು- ತಲಾ ಅರ್ಧ ಚಮಚ.

ಮಾಡುವ ವಿಧಾನ: ಮೊದಲು  ಸೇಬಿನ ಸಿಪ್ಪೆ, ಬೀಜ ತೆಗೆದು ಸಣ್ಣದಾಗಿ ಹೆಚ್ಚಿಕೊಳ್ಳಿ, ದಪ್ಪ ತಳದ ಪಾತ್ರೆಗೆ ತುಪ್ಪ ಹಾಕಿ. ತುಪ್ಪ ಕರಗಿದ ನಂತರ ಸೇಬಿನ ಚೂರುಗಳನ್ನು ಹಾಕಿ ಮೆದುವಾಗುವವರೆಗೂ ಫ್ರೆ„ ಮಾಡಿ. ಇದಕ್ಕೆ ಒಂದು ಕಪ್‌ ನೀರು ಹಾಕಿ ಬೇಯಲು ಬಿಡಿ. ಬೆಂದ ನಂತರ ಸಕ್ಕರೆ ಹಾಕಿ ಕೂಡಿಸಿ. ಮಿಶ್ರಣ ಹೊಂದಿಕೊಂಡು ಗಟ್ಟಿಯಾದಾಗ ವೆನಿಲ್ಲಾ ಎಸೆನ್ಸ್‌ ಹಾಕಿ ಕೂಡಿಸಿ. ಮಿಶ್ರಣವು ತಳಬಿಡುತ್ತಾ ಬಂದಾಗ ಡ್ರೆ„ಫ‌ೂ›ಟ್ಸ್‌ ಚೂರುಗಳನ್ನು ಹಾಕಿ ಕೂಡಿಸಿ, ಈಗ ಪೌಷ್ಟಿಕವಾದ ಆ್ಯಪಲ್‌ ಹಲ್ವಾ ತಯಾರು.  

3. ಬಾದಾಮ್‌ ಹಲ್ವಾ

ಬೇಕಾಗುವ ಪದಾರ್ಥಗಳು: ಬಾದಾಮಿ- 100 ಗ್ರಾಂ, ತುಪ್ಪ- 2 ಕಪ್‌, ಸಕ್ಕರೆ- 2 ಕಪ್‌, ಏಲಕ್ಕಿ ಪುಡಿ- 1 ಚಮಚ.

ಮಾಡುವ ವಿಧಾನ: ಬಾದಾಮಿಯನ್ನು ಬಿಸಿನೀರಲ್ಲಿ ನೆನೆಸಿ ಅರ್ಧ ಗಂಟೆ ನೆನೆಸಿ, ನಂತರ ಅದರ ಸಿಪ್ಪೆ ತೆಗೆದು, ಬಾದಾಮಿಯನ್ನು ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ದಪ್ಪ ತಳದ ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ, ರುಬ್ಬಿದ ಬಾದಾಮಿ ಪೇಸ್ಟ್‌ ಹಾಕಿ ಕೂಡಿಸಿ. ಇದಕ್ಕೆ ಸಕ್ಕರೆ ಹಾಕಿ, ಬಾದಾಮಿ ಪೇಸ್ಟ್‌ನೊಂದಿಗೆ ಬೆರೆಯುವವರೆಗೆ ಕೂಡಿಸಿ. ಮಿಶ್ರಣ ಗಟ್ಟಿಯಾಗುತ್ತಾ ಬಂದಾಗ ಉಳಿದ ತುಪ್ಪವನ್ನು ಸೇರಿಸಿ, ಕಲಸುತ್ತಿರಿ. ನಂತರ ಮಿಶ್ರಣ ತಳಬಿಡುತ್ತಾ ಬಂದಾಗ ಏಲಕ್ಕಿ ಪುಡಿ ಸೇರಿಸಿ ಕೆಳಗಿಳಿಸಿ. ರುಚಿಕರವಾದ ಬಾದಾಮ್‌ ಹಲ್ವಾ ರೆಡಿ.

4. ಬಾಳೆಹಣ್ಣಿನ ಹಲ್ವಾ

ಬೇಕಾಗುವ ಪದಾರ್ಥಗಳು: ಚಿರೋಟಿ ರವೆ- 1 ಕಪ್‌, ಬಾಳೆಹಣ್ಣು- 3, ತುಪ್ಪ- 1 ಕಪ್‌, ಸಕ್ಕರೆ-1 ಕಪ್‌, ಏಲಕ್ಕಿ ಪುಡಿ- ಸ್ವಲ್ಪ, ದ್ರಾಕ್ಷಿ$ ಗೋಡಂಬಿ- 2 ಚಮಚ.
ಮಾಡುವ ವಿಧಾನ: ರವೆಯನ್ನು ಘಮ್ಮೆನ್ನುವ ವಾಸನೆ ಬರುವವರೆಗೆ ಹುರಿದುಕೊಳ್ಳಿ. ಬಾಳೆಹಣ್ಣನ್ನು ಸಣ್ಣದಾಗಿ ಹೆಚ್ಚಿಕೊಳ್ಳಿ. ಬಾಣಲೆಗೆ ಸ್ವಲ್ಪ ತುಪ್ಪ ಹಾಕಿ ಹುರಿದಿಟ್ಟುಕೊಂಡ ರವೆ ಹಾಕಿ ಮತ್ತೆ ಸ್ವಲ್ಪ ಹುರಿಯಿರಿ. ಇದಕ್ಕೆ ಹೆಚ್ಚಿದ ಬಾಳೆಹಣ್ಣನ್ನು ಹಾಕಿ ಕೂಡಿಸಿ. ನಂತರ ಇದಕ್ಕೆ ಒಂದು ಕಪ್‌ ಬಿಸಿಹಾಲು ಹಾಕಿ. ದ್ರಾಕ್ಷಿ- ಗೋಡಂಬಿ ಹಾಕಿ ಸಕ್ಕರೆ ಸೇರಿಸಿ ಚೆನ್ನಾಗಿ ಕೂಡಿಸಿ. ಸಕ್ಕರೆ ಕರಗಿ ರವೆ, ಬಾಳೆಹಣ್ಣಿನ ಮಿಶ್ರಣಕ್ಕೆ ಹೊಂದಿಕೊಂಡಾಗ ಏಲಕ್ಕಿ ಪುಡಿ ಸೇರಿಸಿ, ಕೆಳಗಿಳಿಸಿ. 

ಶ್ರುತಿ ಕೆ. ಎಸ್‌., ತುರುವೇಕೆರೆ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.