ಟ್ರಂಪ್‌ ಶ್ವೇತ ಭವನದೊಳಗೆ ಸುರಕ್ಷಿತರಲ್ಲ: ಮಾಜಿ ಸೀಕ್ರೆಟ್‌ ಏಜಂಟ್‌


Team Udayavani, Mar 18, 2017, 4:49 PM IST

Trump-700.jpg

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಶ್ವೇತ ಭವನದೊಳಗೇ ಸುರಕ್ಷಿತರಾಗಿಲ್ಲ. ಶ್ವೇತ ಭವನದ ಮೇಲೆ ಒಂದೊಮ್ಮೆ ಭಯೋತ್ಪಾದಕ ದಾಳಿ ನಡೆದಲ್ಲಿ  ಸೀಕ್ರೆಟ್‌ ಸರ್ವಿಸ್‌ ದಳಕ್ಕೆ  ಕೂಡ ಟ್ರಂಪ್‌ ಅವರನ್ನು ರಕ್ಷಿಸಲು ಸಾಧ್ಯವಾಗದು ಎಂದು ಅಮೆರಿಕದ ಮಾಜಿ ಸೀಕ್ರೆಟ್‌ ಸರ್ವಿಸ್‌ ಏಜಂಟ್‌ ಡ್ಯಾನ್‌ ಬಾಂಗಿನೋ ಎಚ್ಚರಿಸಿದ್ದಾರೆ.

ಈಚೆಗೆ ವ್ಯಕ್ತಿಯೋರ್ವ ಅತ್ಯಂತ ಬಿಗಿ ಭದ್ರತೆಯ ಶ್ವೇತ ಭವನ ಆವರಣದ ಗೋಡೆ ಹಾರಿ ಒಳಬಂದು ಸುಮಾರು 15 ನಿಮಿಷಗಳ ಕಾಲ ಶ್ವೇತ ಭವನ ಆವರಣದ ತುಂಬೆಲ್ಲ ಓಡಾಡಿದ್ದು ಅದಾಗಿ ವಾರದ ಬಳಿಕ ಡ್ಯಾನ್‌ ಬಾಂಗಿನೋ  ಅವರು ಈ ಎಚ್ಚರಿಕೆಯನ್ನು ಕೊಟ್ಟಿರುವುದು ಗಮನಾರ್ಹವಾಗಿದೆ.

“ಆಗಂತುಕನು ಶ್ವೇತ ಭವನ ಆವರಣದ ಗೋಡೆ ಹಾರಿ ಒಳಪ್ರವೇಶಿಸಿ ಬಳಿಕ ಹಲವು ಹಂತಗಳ ಎಚ್ಚರಿಕೆಯ ಗಂಟೆ ಸದ್ದು ಮಾಡಿದೆ. ಈ ಆಗಂತುಕನನ್ನು  ಶ್ವೇತ ಭವನದ ಭದ್ರತಾ ಅಧಿಕಾರಿಗಳು ಕಂಡಿದ್ದಾರೆ. ಆದರೂ ಅವರು ಇದನ್ನು ಶ್ವೇತ ಭವನಕ್ಕೆ ಒದಗಿರುವ ಅಪಾಯದ ಮುನ್ನೆಚ್ಚರಿಕೆ ಎಂದು ತಿಳಿದಿಲ್ಲ; ಇದು ನಿಜಕ್ಕೂ ಒಂದು ದೊಡ್ಡ ಸಂಗತಿ’ ಎಂದು ಡ್ಯಾನ್‌ ಹೇಳಿರುವುದನ್ನು ಫಾಕ್ಸ್‌ ನ್ಯೂಸ ವರದಿ ಮಾಡಿದೆ.

ಬಾಂಗಿನೋ ಅವರು ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮಾ ಮತ್ತು ಜಾರ್ಜ್‌ ಡಬ್ಲ್ಯು ಬುಶ್‌ ಅವರಿಗೆ ಸೇವೆ ಸಲ್ಲಿಸಿದ್ದ ಸೀಕ್ರೆಟ್‌ ಸರ್ವಿಸ್‌ ಏಜಂಟ್‌ ಆಗಿದ್ದರು. 

“ಶ್ವೇತ ಭವನದ ಆವರಣ ಗೋಡೆ  ಹಾರಿ ಒಳ ಪ್ರವೇಶಿಸಿದ ಒಬ್ಬ ವ್ಯಕ್ತಿಯನ್ನು ಮಟ್ಟ ಹಾಕಲು ಸೀಕ್ರೆಟ್‌ ಸರ್ವಿಸ್‌ಗೆ ಸಾಧ್ಯವಾಗಿಲ್ಲ ಎಂದಾದರೆ 40 ಭಯೋತ್ಪಾದಕರು ಶ್ವೇತ ಭವನದ ಮೇಲೆ ದಾಳಿ ಮಾಡಿದರೆ ಅವರದನ್ನು ಹೇಗೆ ನಿಭಾಯಿಸಲು ಸಾಧ್ಯ ? ನನ್ನನ್ನು ನೀವು ನಂಬುವುದಾದರೆ, ನಾನು ಹೇಳುತ್ತೇನೆ, ಭಯೋತ್ಪಾದಕರು ಈಗಾಗಲೇ ಆ ರೀತಿಯಲ್ಲಿ  ಶ್ವೇತ ಭವನದ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದಾರೆ’ ಎಂದು ಬಾಂಗಿನೋ ಹೇಳಿದರು. 

26ರ ಹರೆಯದ ಕ್ಯಾಲಿಫೋರ್ನಿಯದ ಜೊನಾಥನ್‌ ಟಿ ಟ್ರಾನ್‌ ಎಂಬಾತ ಶ್ವೇತಭವನದ ಪೂರ್ವ ಭಾಗದಲ್ಲಿರುವ ಎಕ್ಸಿಕ್ಯುಟಿವ್‌ ಅವೆನ್ಯೂ ಮತ್ತು ಟ್ರೆಜರಿ ಡಿಪಾರ್ಟ್‌ಮೆಂಟ್‌ ಸಂಕೀರ್ಣದ ಬಳಿಯಿಂದ, ಗೋಡೆ ಹಾರಿ ಒಳಬಂದಿದ್ದ ರಾತ್ರಿ 11.21ರ ಹೊತ್ತಿಗೆ ಮತ್ತು ಆತ ಬಂಧಿಸಲ್ಪಟ್ಟ 11.38ರ ಹೊತ್ತಿಗೆ ಟ್ರಂಪ್‌ ಅವರು ಶ್ವೇತ ಭವನದ ತಮ್ಮ ನಿವಾಸದಲ್ಲಿದ್ದರು.

ಒಬಾಮಾ ಅವರು ಅಮೆರಿಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲೂ ಶ್ವೇತಭವನದ ಆವರಣದ ಗೋಡೆ ಹಾರಿ ಆಗಂತುಕರು ಒಳಬಂದ ಹಲವು ಪ್ರಕರಣಗಳು ನಡೆದಿದ್ದು ಆ ಮೂಲಕ ಶ್ವೇತ ಭವನದ ಭದ್ರತಾ ಲೋಪಗಳು ಬಹಿರಂಗವಾಗಿದ್ದವು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.