ಬ್ರಿಟನ್‌ ಉಗ್ರ ದಾಳಿ: 7 ಮಂದಿ ಸೆರೆ, 3ಕ್ಕೆ ಇಳಿದ ಮೃತರ ಸಂಖ್ಯೆ


Team Udayavani, Mar 23, 2017, 11:30 AM IST

Britain Terror attack-700.jpg

ಲಂಡನ್‌ :  ಬ್ರಿಟಿಷ್‌ ಪಾರ್ಲಿಮೆಂಟ್‌ ಬಳಿ ನಿನ್ನೆ ಬುಧವಾರ ನಡೆದಿದ್ದ ಉಗ್ರ ದಾಳಿಗೆ ಸಂಬಂಧಪಟ್ಟು ಬ್ರಿಟಿಷ್‌ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಈ ಬಂಧನಗಳು ಲಂಡನ್‌ ಮತ್ತು ಬರ್ಮಿಂಗಂ ನಲ್ಲಿ ನಡೆದಿವೆ. 

ಈ ಉಗ್ರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಈ ಮೊದಲು ಐದು ಎಂದು ಹೇಳಲಾಗಿತ್ತು. ಇದೀಗ ಮೃತರ ಸಂಖ್ಯೆ ಮೂರು ಎಂದು ತಿಳಿಸಲಾಗಿದೆ.

ಉಗ್ರ ದಾಳಿಯನ್ನು ಅನುಸರಿಸಿ ನಡೆಸಲಾದ ಬಂಧನ ಸತ್ರದಲ್ಲಿ ಪೊಲೀಸರು ಒಟ್ಟು ಆರು ವಿಳಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಏಳು ಮಂದಿಯನ್ನು ಬಂಧಿಸಿರುವುದಾಗಿ ಉಗ್ರ ನಿಗ್ರಹ ದಳದ ಮುಖ್ಯಸ್ಥರಾಗಿರುವ ಪ್ರಭಾರ ಡೆಪ್ಯುಟಿ ಕಮಿಷಶನರ್‌ ಮಾರ್ಕ್‌ ರೌಲೇ ತಿಳಿಸಿದ್ದಾರೆ. 

ಉಗ್ರ ದಾಳಿಯಲ್ಲಿ ಗಾಯಗೊಂಡವರ ಪೈಕಿ 29 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಇತರ ಏಳು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ರೌಲೇ ಮಾಧ್ಯಮಕ್ಕೆ ತಿಳಿಸಿದ್ದಾರೆ. 

ಗುಂಡಿನ ಪ್ರತಿದಾಳಿಯಲ್ಲಿ ಹತನಾಗಿರುವ ದಾಳಿಕೋರರನ್ನು ತಾವು ಬಲ್ಲೆವು ಎಂದು ಹೇಳಿರುವ ಬ್ರಿಟಿಷ್‌ ಪೊಲೀಸರು, ಆತನ ಹೆಸರನ್ನು ಬಹಿರಂಗಪಡಿಸಿಲ್ಲ. 

ಅಂತಾರಾಷ್ಟ್ರೀಯ ಭಯೋತ್ಪಾದನೆಯಿಂದ ಪ್ರೇರಿತನಾದ ಶಂಕಿತ ಭಯೋತ್ಪಾದಕನು ಸಂಸತ್‌ ಭವನದ ಬಳಿಯ ಸೇತುವೆ ಮೇಲೆ ಪಾದಚಾರಿಗಳನ್ನು ಇರಿದು ಗಾಯಗೊಳಿಸಿ ಬಳಿಕ ಸಂಸತ್‌ ಸಂಕೀರ್ಣ ಸಮೀಪ ಪೊಲೀಸ್‌ ಅಧಿಕಾರಿಯೋರ್ವರನ್ನು ಇರಿದು ಕೊಂದು ಬಳಿಕ ಸ್ಕಾಟ್ಲಂಡ್‌ ಯಾರ್ಡ್‌ ಅಧಿಕಾರಿಗಳ ಗುಂಡೇಟಿಗೆ ಹತನಾಗಿದ್ದ. 

ಬ್ರಿಟನ್‌ ಪ್ರಧಾನಿ ತೆರೆಸಾ ಮೇ ಅವರು ಈ ಭಯೋತ್ಪಾದನೆ ಕೃತ್ಯವನ್ನು ಅತ್ಯುಗ್ರವಾಗಿ ಖಂಡಿಸಿದ್ದು ಇದು ವಿಕ್ಷಿಪ್ತ ಮನಸ್ಸಿನ ವ್ಯಕ್ತಿಯ ಅನೀತಿಯುತ ಕೃತ್ಯವಾಗಿದೆ ಎಂದು ಹೇಳಿದ್ದಾರೆ. ಉಗ್ರ ದಾಳಿ ನಡೆದ ತಾಣವು ಆಕಸ್ಮಿಕವಾದುದಲ್ಲ; ಉದ್ದೇಶಪೂರ್ವಕವಾದದ್ದು ಎಂದು ಮೇ ಅವರು 10 ಡೌನಿಂಗ್‌ ಸ್ಟ್ರೀಟ್‌ನಲ್ಲಿನ ತಮ್ಮ ಕಾರ್ಯಾಲಯದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಹೇಳಿದ್ದಾರೆ. 

ಉಗ್ರ ದಾಳಿ ನಡೆದಿದ್ದ ವೇಳೆ ಬ್ರಿಟನ್‌ ಸಂಸತ್ತಿನ ಕೆಳಮನೆಯಾಗಿರುವ ಹೌಸ್‌ ಆಫ್ ಕಾಮನ್ಸ್‌ ಕಲಾಪನಿರತವಾಗಿತ್ತು. ದಾಳಿ ಸುದ್ದಿ ತಿಳಿದೊಡನೆಯೇ ಕಲಾಪವನ್ನು ಅಮಾನತುಗೊಳಿಸಿ ಸಂಸದರನ್ನು ಸಂಸತ್ತಿನೊಳಗೇ ಹಲವು ತಾಸುಗಳ ಕಾಲ ಉಳಿದುಕೊಳ್ಳುವಂತೆ ಕೇಳಿಕೊಳ್ಳಲಾಯಿತು. 

ಇಂದು ಗುರುವಾರ ಎಂದಿನಂತೆ ಬ್ರಿಟನ್‌ ಸಂಸತ್‌ ಕಲಾಪ ನಡೆಯಲಿದೆ ಎಂದು ಪ್ರಧಾನಿ ಮೇ ಹೇಳಿದ್ದಾರೆ. 

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಈ ಭಯೋತ್ಪಾದನ ಕೃತ್ಯವನ್ನು ಖಂಡಿಸಿದ್ದು  ಬ್ರಿಟನ್‌ ಜನತೆಗೆ ನಮ್ಮ ಸಹಾನುಭೂತಿ, ಬೆಂಬಲ ಇದೆ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.