ವೀಸಾ ನೀತಿ ಉಲ್ಲಂಘನೆ: ಟಿಸಿಎಸ್‌, ಇನ್ಫೋಸಿಸ್‌ ವಿರುದ್ಧ ಅಮೆರಿಕ ಕಿಡಿ


Team Udayavani, Apr 24, 2017, 11:01 AM IST

24-PTI-8.jpg

ವಾಷಿಂಗ್ಟನ್‌: ಎಚ್‌-1ಬಿ ವೀಸಾ ವಿಚಾರಕ್ಕೆ ಸಂಬಂಧಿಸಿ ಭಾರತದ ಐಟಿ ದಿಗ್ಗಜರಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಮತ್ತು ಇನ್ಫೋಸಿಸ್‌ ಕಂಪೆನಿಗಳ ವಿರುದ್ಧ ಅಮೆರಿಕ ಗಂಭೀರ ಆರೋಪ ಮಾಡಿದೆ. ಈ ಎರಡೂ ಕಂಪೆನಿಗಳು ಲಾಟರಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಟಿಕೆಟ್‌ಗಳನ್ನು ಹಾಕಿ ಹೆಚ್ಚೆಚ್ಚು ವೀಸಾ ಪಡೆಯುವ ಹುನ್ನಾರ ನಡೆಸಿವೆ ಎನ್ನುವುದು ಅಮೆರಿಕದ ಆರೋಪ. ಈ ಹಿನ್ನೆಲೆಯಲ್ಲಿ ಇದೀಗ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತ “ಅರ್ಹತೆ  ಆಧಾರಿತ ವಲಸೆ ನೀತಿ’ ಜಾರಿಗೆ ಮುಂದಾಗಿದೆ.

ಎಚ್‌-1 ಬಿ ವೀಸಾ ವಿಚಾರದಲ್ಲಿ ಕಳೆದ ವಾರ ಶ್ವೇತಭವನದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ನೂತನ ವೀಸಾ ನೀತಿ ಜಾರಿಯ ಬಳಿಕ ಬೇಡಿಕೆ ಸಾಕಷ್ಟು ಹೆಚ್ಚುತ್ತಿದೆ. ಭಾರಿ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. ಕಾರಣ ಲಾಟರಿ ಪ್ರಕ್ರಿಯೆ ಮೂಲಕ ನಿರ್ಧರಿಸಲು ಅತ್ಯಾಧುನಿಕ ಆ್ಯಪ್‌ ಅಭಿವೃದ್ಧಿಪಡಿಸಲಾಧಿಗುತ್ತಿದೆ ಎಂದು ಅಧಿಕೃತವಾಗಿಯೇ ಹೇಳಿದ್ದರು.

ಇದೀಗ ವೈಟ್‌ಹೌಸ್‌ ಹಿರಿಯ ಅಧಿಕಾರಿಯೊಬ್ಬರು, ಎಚ್‌-1ಬಿ ವೀಸಾ ಪಡೆದುಕೊಳ್ಳಲಿಕ್ಕಾಗಿ ಟಾಟಾ, ಇನ್ಫೋಸಿಸ್‌, ಕಾಗ್ನೆ„ಝೆಂಟ್‌ ಕಂಪೆನಿಗಳು ಹೆಚೆಚ್ಚು ಟಿಕೆಟ್‌ಗಳನ್ನು ಹಾಕಿವೆ. ಹೆಚ್ಚು ವೀಸಾಗಳಿಗಾಗಿ ಬೇಡಿಕೆ ಇಟ್ಟಿವೆ ಎಂದಿದ್ದಾರೆ. ಎಚ್‌-1ಬಿ ವೀಸಾಗಾಗಿ ಮುಗಿಬಿದ್ದಿರುವ ಭಾರತದ ಈ ಕಂಪೆನಿಗಳ ಸಿಬಂದಿ ಅಮೆರಿಕದಲ್ಲಿ ವರ್ಷಕ್ಕೆ ಅಂದಾಜು 38.79 ಲಕ್ಷ ರೂ.ನಿಂದ 42.02 ಲಕ್ಷ ರೂ. ವೇತನ ಪಡೆದುಕೊಳ್ಳುಧಿತ್ತಾರೆ. ಇನ್ನು ಸಿಲಿಕಾನ್‌ವ್ಯಾಲಿ ಸಾಫ್ಟ್ ವೇರ್‌ ಎಂಜಿನಿಯರ್‌ಗಳು ಹೆಚ್ಚಾ ಕಡಿಮೆ 96.97 ಲಕ್ಷ ರೂ. ವೇತನ ಪಡೆದುಕೊಳ್ಳುತ್ತಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

38 ಭಾರತೀಯರು ವಶಕ್ಕೆ: ಏತನ್ಮಧ್ಯೆ, ವೀಸಾ ಅವಧಿ ಮುಗಿದರೂ ಅಲ್ಲೇ ಇದ್ದ ಹಾಗೂ ಅಕ್ರಮವಾಗಿ ಕೆಲಸ ಮಾಡುತ್ತಿದ್ದ 38 ಮಂದಿ ಭಾರತೀಯರನ್ನು ಬ್ರಿಟನ್‌ನ ವಲಸೆ ಅಧಿಕಾರಿಗಳು ರವಿವಾರ ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ 9 ಮಂದಿ ಮಹಿಳೆಯರೂ ಸೇರಿದ್ದಾರೆ. ಲೈಸೆಸ್ಟರ್‌ನ ಉಡುಪು ತಯಾರಿಕಾ ಕಂಪೆನಿ ಮೇಲೆ ದಾಳಿ ನಡೆಸಿ, ಇವರನ್ನು ವಶಕ್ಕೆ ಪಡೆಯಲಾಗಿದೆ.

ಟಿಸಿಎಸ್‌ನಿಂದ 11,500 ಮಂದಿ ಸ್ಥಳೀಯರ ನೇಮಕ
ಎಚ್‌-1ಬಿ ವೀಸಾ ಸಮಸ್ಯೆಯಿಂದ ಪಾರಾಗಲು ಟಿಸಿಎಸ್‌ 2016-17ನೇ ಸಾಲಿನಲ್ಲಿ ದೇಶದಿಂದಾಚೆ ಬರೋಬ್ಬರಿ 11,500 ಮಂದಿಯನ್ನು  ನೇಮಕ ಮಾಡಿಕೊಂಡಿದೆ. ಸ್ಥಳೀಯರ ಉದ್ಯೋಗಕ್ಕೆ ಆದ್ಯತೆ ನೀಡಬೇಕೆಂದು ಸರಕಾರ ಹೇಳಿರುವ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಬಿ-ಸ್ಕೂಲ್‌ ಮತ್ತು ಎಂಜಿನಿಯರಿಂಗ್‌ ಪದವೀಧರರನ್ನೇ ಹೆಚ್ಚಾಗಿ ನೇಮಕ ಮಾಡಲಾಗಿದೆ. 

11,500 ಜನರನ್ನು ಅಮೆರಿಕದಲ್ಲಿ ನೇಮಕ ಮಾಡಿಕೊಂಡಿದ್ದೇವೆ. ಕ್ಯಾಂಪಸ್‌ಗಳಿಂದ ಎಂಜಿನಿಯರ್‌ಗಳನ್ನು ಹಾಗೂ ಅಮೆರಿಕದ ಪ್ರಮುಖ 10 ಉದ್ಯಮ ತರಬೇತಿ ಶಾಲೆಗಳಿಂದ ಅನೇಕರನ್ನು ನೇಮಕ ಮಾಡಿಕೊಂಡಿದ್ದೇವೆ.
ರಾಜೇಶ್‌ ಗೋಪಿನಾಥನ್‌, ಟಿಸಿಎಸ್‌ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.