ಕೊಟ್ಟ ಮಾತಿನಂತೆ ರಾಜೀನಾಮೆ ಕೊಟ್ಟ ಪ್ರಚಂಡ
Team Udayavani, May 25, 2017, 2:16 AM IST
ಕಾಠ್ಮಂಡು: ಅಧಿಕಾರ ಹಂಚಿಕೆ ಕುರಿತು ಮಾಡಿಕೊಂಡ ಒಪ್ಪಂದಕ್ಕೆ ತಲೆಬಾಗಿ ನೇಪಾಳದ ಪ್ರಧಾನಿ ಪ್ರಚಂಡ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಮೈತ್ರಿ ಪಕ್ಷವಾದ ನೇಪಾಳ ಕಾಂಗ್ರೆಸ್ನ ಮುಖ್ಯಸ್ಥರಾದ ಶೇರ್ ಬಹದ್ದೂರ್ ದೇಬ ಅವರಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಹುದ್ದೆ ತ್ಯಾಗ ಮಾಡಿದ್ದಾರೆ.
ಮಂಗಳವಾರ ಸಂಸತ್ತಿನಲ್ಲಿ ಭಾಷಣ ಮಾಡುವಾಗಲೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಹೊಸದಾಗಿ ಚುನಾವಣೆ ನಡೆಯುವರೆಗೆ ಅಧಿಕಾರವನ್ನು ಸಮಾನವಾಗಿ ಹಂಚಿಕೊಳ್ಳಲು ಕಳೆದ ವರ್ಷದ ಆಗಸ್ಟ್ನಲ್ಲಿ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದು, ಅದಕ್ಕೆ ಬದ್ಧವಾಗಿ ಪ್ರಚಂಡ ನಡೆದುಕೊಂಡಿದ್ದಾರೆ. ಇನ್ನು 10 ದಿನಗಳಲ್ಲಿ ಹೊಸ ಪ್ರಧಾನಿ ಶೇರ್ ಬಹದ್ದೂರ್ ದೇಬ ಅವರು ಸಂಸತ್ನಲ್ಲಿ ಬಹುಮತ ಸಾಬೀತು ಮಾಡಬೇಕಿದೆ. ಇದೇ ವೇಳೆ 1997ರಿಂದ ಈಚೆಗೆ ನೇಪಾಳದಲ್ಲಿ ಅತಿ ಹೆಚ್ಚು ರಾಜಕೀಯ ಅಸ್ಥಿರತೆ ಕಾಣಿಸಿಕೊಂಡಿದ್ದು, ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿಲ್ಲ. ಹೀಗಾಗಿ ಇಲ್ಲಿ ಯಾವ ಪಕ್ಷವೂ 5 ವರ್ಷಗಳ ಪೂರ್ಣ ಆಡಳಿತ ನಡೆಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ