ಮಾನಸ ಸರೋವರ ಯಾತ್ರಿಗಳಿಗೆ ಡ್ರ್ಯಾಗನ್‌ ಬೆದರಿಕೆ!


Team Udayavani, Jun 28, 2017, 3:45 AM IST

kailash-1.jpg

ಬೀಜಿಂಗ್‌: ಸಿಕ್ಕಿಂ ಗಡಿಯಲ್ಲಿ ಭಾರತೀಯ ಯೋಧರ ಜತೆ ತಳ್ಳಾಟ ನಡೆಸಿ, ಪ್ರಚೋದಿಸುವ ವಿಫ‌ಲ ಯತ್ನ ನಡೆಸಿದ್ದ ಚೀನಾ ಈಗ ರಾಗ ಬದಲಿಸಿ, ಭಾರತೀಯ ಸೈನಿಕರ ಮೇಲೆಯೇ ಗೂಬೆ ಕೂರಿಸಿದೆ. ಅಷ್ಟೇ ಅಲ್ಲ, ಕೈಲಾಶ್‌ ಮಾನಸರೋವರ ಪ್ರವಾಸದಲ್ಲಿರುವ ನೂರಾರು ಯಾತ್ರಿಗಳನ್ನೇ ಬಂಧಿಯಾಗಿಸಿಕೊಂಡಿದೆ.

“ಭಾರತೀಯ ಯೋಧರೇ ಗಡಿಯಿಂದಾಚೆ ನುಗ್ಗಲು ಯತ್ನಿಸಿದ್ದರು. ನಮ್ಮ ಯೋಧರು ಅವರನ್ನು ತಡೆದಿದ್ದಾರೆ’ ಎಂದು ಆರೋಪಿಸಿರುವ ಚೀನಾ, “ಭಾರತ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಯಿಸಿಕೊಳ್ಳದೇ ಇದ್ದಲ್ಲಿ ಕೈಲಾಶ್‌ ಮಾನಸರೋವರ ಯಾತ್ರಿಗಳಿಗೆ ಪ್ರವೇಶ ಅವಕಾಶವನ್ನೇ ನೀಡಲು ಸಾಧ್ಯವಿಲ್ಲ’ ಎಂದು ಖಡಾಖಂಡಿತ ಅಭಿಪ್ರಾಯ ವ್ಯಕ್ತಪಡಿಸಿದೆ. ಯಾತ್ರಿಗಳ ಸಂಪರ್ಕ ಸೇತುವಾದ ನಾಥು ಲಾ ಪ್ರವೇಶ ದ್ವಾರವನ್ನೇ ಸಂಪೂರ್ಣ ಬಂದ್‌ ಮಾಡಿ, ಈ ಮೂಲಕ ಭಾರತಕ್ಕೆ ಪರೋಕ್ಷ ಬೆದರಿಕೆ ಹಾಕಿದೆ.

ಸಿಕ್ಕಿಂ ಸೆಕ್ಟರ್‌ ವ್ಯಾಪ್ತಿಯಲ್ಲಿನ ಕೈಲಾಶ್‌ ಮಾನಸರೋವರದ ಯಾತ್ರಿಗಳನ್ನು ಕಳೆದ ಹತ್ತು ದಿನಗಳ ಅವಧಿಯಲ್ಲಿ ನಾಥು ಲಾ ದ್ವಾರದ ಮೂಲಕ ಪ್ರವೇಶಿಸದಂತೆ ತಡೆದು ತೊಂದರೆ ಉಂಟು ಮಾಡಿದ್ದ ಚೀನಾ ಯೋಧರು, ಬಳಿಕ ಭಾರತೀಯ ಗಡಿಯಿಂದಾಚೆ ನುಗ್ಗುವ ಯತ್ನ ನಡೆಸಿದ್ದರು. ಎರಡು ಸೇನಾ ನೆಲೆಗಳ ಮೇಲೂ ದಾಳಿ ನಡೆಸಿದ್ದರು. ಇದನ್ನು ತಡೆಯಲು ಹೋದ ಭಾರತೀಯ ಯೋಧರ ಜೊತೆಗೆ ತಳ್ಳಾಟ ನಡೆಸಿದ್ದರು. ಈ ದೃಶ್ಯಗಳನ್ನು ಕೆಲ ಯೋಧರು ಕ್ಯಾಮೆರಾದಲ್ಲಿ ಸೆರೆ ಹಿಡಿದುಕೊಂಡಿದ್ದರು.

ನಾಥು ಲಾ ಪ್ರವೇಶ ದ್ವಾರವನ್ನೇ ಬಂದ್‌ ಮಾಡಿದ್ದರಿಂದ ಸಾಕಷ್ಟು ಮಂದಿ ಯಾತ್ರಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಸದ್ಯಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆ ಇಲ್ಲವಾದ್ದರಿಂದ ಯಾತ್ರಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಚೀನಾ ರಾಜತಾಂತ್ರಿಕ ಪ್ರತಿಭಟನೆ
ಭಾರತೀಯ ಯೋಧರೇ ನಿಯಮ ಉಲ್ಲಂ ಸಿ ಗಡಿಯಿಂದಾಚೆ ಬಂದಿರುವುದರ ವಿರುದ್ಧ ರಾಜತಾಂತ್ರಿಕ ಪ್ರತಿಭಟನೆ ವ್ಯಕ್ತಪಡಿಸಿರುವ ಚೀನಾ, ಕೂಡಲೇ ಗಡಿಯಲ್ಲಿ ನಿಯೋಜಿಸಲಾದ ಸೇನಾ ಪಡೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಒತ್ತಡ ಹೇರಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್‌, “ಭಾರತೀಯ ಯೋಧರ ಈ ಅಕ್ರಮವನ್ನು ನಾವು ಗಂಭೀರವಾಗಿ ಪರಿಗಣಿಸಿ, ಸೂಕ್ತ ರೀತಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ. ಗಡಿ ನಿಯಮ ಮೀರಿ ನುಗ್ಗುವ ಯತ್ನ ಕಂಡೂ ಕಾಣದಂತೆ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಪ್ರಾದೇಶಿಕ ಸಾರ್ವಭೌಮತ್ವ ಕಾಪಾಡಿಕೊಳ್ಳುವ ಕೆಲಸವನ್ನು ನಮ್ಮ ಯೋಧರು ಮಾಡಿದ್ದಾರೆ. ಭಾರತ ತಕ್ಷಣ ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳಲಿ. ಸೌಹಾರ್ದ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾದಲ್ಲಿ ತಕ್ಷಣ ನಾವೂ ಯೋಧರ ನಿಯೋಜನೆಯನ್ನು ಸಡಿಲಗೊಳಿಸುತ್ತೇವೆ. ಗಡಿ ರಕ್ಷಣೆಯ ಜವಾಬ್ದಾರಿ ನಿರ್ವಹಿಸುವಲ್ಲಿ ನಮ್ಮ ಯೋಧರು ಬದ್ಧತೆ ತೋರಿದ್ದಾರಷ್ಟೇ ಎಂದು ಕ್ರಮ ಸಮರ್ಥಿಸಿಕೊಂಡಿದ್ದಾರೆ.

ಮುಂದಿನ ಹಂತದಲ್ಲಿ ಭಾರತ ಹೇಗೆ ಪ್ರತಿಕ್ರಿಯಿಸಲಿದೆ ಎನ್ನುವುದನ್ನು ನೋಡಿಕೊಂಡು ನಾವು ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ. ಗಡಿಯಲ್ಲಿ ರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುತ್ತೇವೆ. ಸಮಸ್ಯೆ ಬಗೆಹರಿಸಿಕೊಳ್ಳಲು ಭಾರತೀಯ ವಿದೇಶಾಂಗ ಸಚಿವಾಲಯದ ಜತೆ ಸಂಪರ್ಕದಲ್ಲಿ ಇದ್ದೇವೆ.
-ಲು ಕಾಂಗ್‌, ಚೀನಾ ವಿದೇಶಾಂಗ ಸಚಿವಾಲಯ ವಕ್ತಾರ

ಟ್ರಂಪ್‌-ಮೋದಿ ಮಾತುಕತೆ ಪರಿಣಾಮ
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಚೀನಾ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜತೆಗಿನ ಮಾತುಕತೆ ಬೆನ್ನಿಗೇ ಭಾರತಕ್ಕೆ ಎಚ್ಚರಿಕೆ ಸಂದೇಶವೊಂದು ರವಾನಿಸಿದೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದೊಂದು “ಭೂ-ರಾಜಕೀಯ ತಂತ್ರ’ ಎನ್ನುವ ಅರ್ಥದಲ್ಲಿ ವರದಿ ಮಾಡಿ ಎಚ್ಚರಿಸಿವೆ. ಟ್ರಂಪ್‌ ಜತೆಗಿನ ಮಾತುಕತೆ ಚೀನಾದೊಂದಿಗಿನ ಬಾಂಧವ್ಯಕ್ಕೂ ಧಕ್ಕೆಯಾಗಬಹುದು. ಭಾರತಕ್ಕೆ ಇದೇ ತೊಡಕಾಗಿ ಪರಿಣಮಿಸಬಹುದು ಎಂದೆಲ್ಲಾ ವರದಿ ಮಾಡಿವೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.