ಪಾಕ್‌ಗೆ ನೆರವು ಕಟ್‌; ನೆರೆರಾಷ್ಟ್ರಕ್ಕೆ ಅಮೆರಿಕ ಚಾಟಿಯೇಟು


Team Udayavani, Jul 22, 2017, 7:30 AM IST

PAK-2201.gif

ವಾಷಿಂಗ್ಟನ್‌/ಹೊಸದಿಲ್ಲಿ: ನಿಮ್ಮ ನೆಲದಲ್ಲಿ ಉಗ್ರರು ನೆಲೆಯೂರಲು ಅವಕಾಶ ಕೊಡಬೇಡಿ ಎಂದು ಪದೇ ಪದೇ ಎಚ್ಚರಿಸುತ್ತಿದ್ದರೂ, ಕ್ಯಾರೇ ಎನ್ನದೆ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ಥಾನಕ್ಕೆ ಇದೀಗ ಅಮೆರಿಕ ಸರಿಯಾಗಿಯೇ ಚಾಟಿ ಬೀಸಿದೆ. 

ಉಗ್ರರ ವಿರುದ್ಧ ಕಠಿನ ಕ್ರಮ ಕೈಗೊಳ್ಳದಿದ್ದರೆ ಸುಮ್ಮನಿರಲ್ಲ ಎಂದು ಇದುವರೆಗೆ ಬಾಯಿ ಮಾತಲ್ಲಷ್ಟೇ ಹೇಳುತ್ತಾ ಬಂದಿದ್ದ ಅಮೆರಿಕ, ಈಗ ನುಡಿದಂತೆ ನಡೆಯುವ ಮೂಲಕ ಪಾಕ್‌ಗೆ ಅತಿದೊಡ್ಡ ಆಘಾತ ತಂದಿದೆ.

ಹೌದು, 2016ರ ವಿತ್ತೀಯ ವರ್ಷದಲ್ಲಿ ಪಾಕಿಸ್ಥಾನಕ್ಕೆ ನೀಡಬೇಕಿದ್ದ 350 ದಶಲಕ್ಷ ಡಾಲರ್‌(2,254.50 ಕೋಟಿ ರೂ.) ಅನ್ನು ಅಮೆರಿಕದ ರಕ್ಷಣಾ ಇಲಾಖೆ ತಡೆಹಿಡಿದಿದೆ. ಹಖನಿ ನೆಟ್‌ವರ್ಕ್‌ ವಿರುದ್ಧ ತೃಪ್ತಿದಾಯಕ ಕ್ರಮ ಕೈಗೊಳ್ಳದೇ ಇದ್ದಿದ್ದಕ್ಕೆ ಹಣಕಾಸು ನೆರವನ್ನು ನಿಲ್ಲಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಸಚಿವ ಜಿಮ್‌ ಮ್ಯಾಟಿಸ್‌ ಶುಕ್ರವಾರ ಹೇಳಿದ್ದಾರೆ.

“ಈ ಬಾರಿ ಪಾಕಿಸ್ಥಾನಕ್ಕೆ ನಾವು ಹಣಕಾಸು ನೆರವು ಬಿಡುಗಡೆ ಮಾಡುವುದಿಲ್ಲ. ಹಖನ್‌ ನೆಟ್‌ವರ್ಕ್‌ ವಿರುದ್ಧ ಪಾಕಿಸ್ಥಾನವು ಸೂಕ್ತ ಕ್ರಮ ಕೈಗೊಂಡಿದೆ ಎನ್ನುವುದಕ್ಕೆ ಸೂಕ್ತ ಪುರಾವೆಗಳು ದೊರೆತಿಲ್ಲದ ಕಾರಣ ಈ ನಿರ್ಧಾರ ಕೈಗೊಂಡಿದ್ದೇವೆ’ ಎಂದು ಮ್ಯಾಟಿಸ್‌ ಖಾರವಾಗಿಯೇ ನುಡಿದಿದ್ದಾರೆ. 2016ರಲ್ಲಿ ಅಮೆರಿಕವು ಪಾಕ್‌ಗೆ 900 ದಶಲಕ್ಷ ಡಾಲರ್‌(5,797 ಕೋಟಿ ರೂ.) ನೀಡಬೇಕಿತ್ತು. ಆ ಪೈಕಿ 550 ದಶಲಕ್ಷ ಡಾಲರ್‌(3,542 ಕೋಟಿ ರೂ.) ಅನ್ನು ಈಗಾಗಲೇ ಒದಗಿಸಲಾಗಿದೆ. ಉಳಿದ ಮೊತ್ತವನ್ನು ಇದೀಗ ತಡೆಹಿಡಿಯಲಾಗಿದೆ.

ಇತ್ತ ಅಮೆರಿಕದಿಂದ ನೆರವು ಪಡೆದುಕೊಂಡು, ಅತ್ತ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ಥಾನದ ವಿರುದ್ಧ ಇತ್ತೀಚೆಗೆ ಅಮೆರಿಕದ ಸಂಸದರಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಪಾಕ್‌ಗೆ ನೆರವು ನೀಡುವುದನ್ನು ನಿಲ್ಲಿಸಬೇಕು ಎಂದೂ ಆಗ್ರಹಿಸಿದ್ದರು.

ಕದನ ವಿರಾಮ ಉಲ್ಲಂಘನೆ
ಪಾಕ್‌ ಪಡೆಯು ಶುಕ್ರವಾರ ಜಮ್ಮು-ಕಾಶ್ಮೀರದ ನೌಗಾಮ್‌ ವಲಯದಲ್ಲಿ ಕದನ ವಿರಾಮ ಉಲ್ಲಂ ಸಿದೆ. ಎಲ್‌ಒಸಿಯುದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಾಕ್‌ನ ದಾಳಿಗೆ ಭಾರತೀಯ ಸೈನಿಕರೂ ಪ್ರತ್ಯುತ್ತರ ನೀಡುತ್ತಿದ್ದಾರೆ  ಎಂದು ಸೇನೆ ತಿಳಿಸಿದೆ. ಇದು ನೌಗಾಮ್‌ ವಲಯದಲ್ಲಿ 24 ಗಂಟೆ ಗಳಲ್ಲಿ ನಡೆದ 3ನೇ ದಾಳಿ ಆಗಿದೆ. 9 ದಿನಗಳಲ್ಲಿ ಪಾಕ್‌ 6 ಬಾರಿ ಕದನ ವಿರಾಮ ಉಲ್ಲಂ ಸಿದೆ.

ಸಚಿವೆ ಸುಷ್ಮಾ ಹೇಳಿಕೆಗೆ ಚೀನ ಕ್ಯಾತೆ
ಚೀನವು ಸಿಕ್ಕಿಂ ಗಡಿಯಲ್ಲಿ ಯಥಾಸ್ಥಿತಿ ಉಲ್ಲಂ ಸಿದೆ ಎಂದು ಸಂಸತ್‌ನಲ್ಲಿ ಗುರುವಾರ ಸಚಿವೆ ಸುಷ್ಮಾ ಸ್ವರಾಜ್‌ ನೀಡಿದ ಹೇಳಿಕೆಗೆ ಚೀನ ಕೆಂಡಕಾರಿದೆ. ಸಚಿವೆ ಸುಷ್ಮಾ ಅವರು ಸಂಸತ್‌ನಲ್ಲೇ ಸುಳ್ಳು ಹೇಳಿದ್ದಾರೆ ಎಂದು ಚೀನದ ಗ್ಲೋಬಲ್‌ ಟೈಮ್ಸ್‌ ಆರೋಪಿಸಿದೆ. ಅಲ್ಲದೆ, ಚೀನದ ಗಡಿಯನ್ನು ಭಾರತ ಅತಿಕ್ರಮಿಸಿಕೊಂಡಿದ್ದು ನಗ್ನ ಸತ್ಯ. ಭಾರತದ ಸೇನಾಶಕ್ತಿಯು ಚೀನಗಿಂತ ಬಹಳಷ್ಟು ದುರ್ಬಲ ವಾಗಿದೆ. ನಮ್ಮ ಭೂಮಿಯಲ್ಲಿ ಒಂದಿಂಚನ್ನೂ ವಶಪಡಿಸಿ ಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದೂ ಹೇಳಿದೆ.

ಬೋಫೋರ್ಸ್‌ ಗನ್‌ಗೆ ಮೇಡ್‌ ಇನ್‌ ಜರ್ಮನಿ ಲೇಬಲ್‌
ಚೀನದಲ್ಲಿ ಉತ್ಪಾದಿಸಿದ ಬಿಡಿಭಾಗಗಳ ಮೇಲೆ “ಮೇಡ್‌ ಇನ್‌ ಜರ್ಮನಿ’ ಎಂದು ಅಚ್ಚು ಹಾಕಿ, ಅವುಗಳನ್ನು ಭಾರತ ಸೇನೆ ಬಳಸುವ ಬೊಫೋರ್ಸ್‌ ಗನ್‌ಗಳಿಗೆ ಅಳವಡಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ದಿಲ್ಲಿ ಮೂಲದ ಸಿಧ್‌ ಸೇಲ್ಸ್‌ ಸಿಂಡಿಕೇಟ್‌ ಎಂಬ ಕಂಪೆ‌ನಿ ಈ ಕೃತ್ಯದಲ್ಲಿ ತೊಡಗಿದ್ದು, ಕಂಪೆ‌ನಿ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ ಧನುಶ್‌ ಗನ್‌ಗಳಿಗೆ ಅಳವಡಿಸಲು ಚೀನ ಉತ್ಪಾದಿತ ಕಳಪೆ ಬಿಡಿಭಾಗಗಳನ್ನು ಪೂರೈಸುತ್ತಿದ್ದ ಜಬಲ್ಪುರದ ಗನ್ಸ್‌ ಕ್ಯಾರೇಜ್‌ ಫ್ಯಾಕ್ಟರಿ ವಿರುದ್ಧವೂ ಕ್ರಿಮಿನಲ್‌ ಸಂಚು, ವಂಚನೆ ಮತ್ತು ನಕಲು ಮಾಡಿರುವ ಪ್ರಕರಣ ದಾಖಲಿಸಲಾಗಿದೆ.
 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.