ಪ್ರವಾಹಕ್ಕೆ ಕಂಗಾಲು: ನೇಪಾಲದಲ್ಲಿ 115 ಮಂದಿ ಸಾವು
Team Udayavani, Aug 16, 2017, 8:30 AM IST
ಕಠ್ಮಂಡು: ಕಳೆದೊಂದು ವಾರದಿಂದ ನೇಪಾಲವನ್ನು ಕಾಡುತ್ತಿರುವ ಭಾರೀ ಪ್ರಮಾಣದ ನೆರೆ ಹಾಗೂ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 115ಕ್ಕೇರಿದೆ. ಪ್ರತ್ಯೇಕ ಘಟನೆಗಳಲ್ಲಿ ನಾಪತ್ತೆಯಾದವರ ಪೈಕಿ 40ಕ್ಕೂ ಹೆಚ್ಚು ಮಂದಿಯ ಸುಳಿವು ಇನ್ನೂ ಸಿಕ್ಕಿಲ್ಲ. ಅಲ್ಲದೆ, ಹಿಮಾಲಯದ ತಪ್ಪಲು ಪ್ರದೇಶ ಗಳಲ್ಲಿ ಸುರಿದ ಕುಂಭದ್ರೋಣ ಮಳೆಗೆ ಅಪಾಯಕ್ಕೆ ಸಿಲುಕಿರುವ ಆರು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬ್ರಿಟ್ನಾನಗರ ಜೋಗಬಾನಿ ಗಡಿಯಲ್ಲಿ ಮಂಗಳವಾರ 7 ಮಂದಿ ಶವವನ್ನು ಪ್ರವಾಹದಿಂದ ಹೊರಗೆತ್ತಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಗಳಿವೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿದ್ದಾಗಿ ವರದಿ ಮಾಡಿದೆ.
ಚೀನ ನೆರವು: ನೆರೆ ರಾಷ್ಟ್ರ ಚೀನ ಪ್ರವಾಹ ಪೀಡಿತ ಪ್ರದೇಶಗಳಿಗೆಂದು 6.41 ಕೋಟಿ ರೂ. ಪರಿಹಾರ ನೀಡುತ್ತಿರುವುದಾಗಿ ತಿಳಿಸಿದೆ. ನೇಪಾಲ ಪ್ರತಿನಿಧಿಗಳ ಜತೆ ಚರ್ಚಿಸಲಾಗಿದ್ದು, ಸಹಕಾರ ಬೇಕಿದ್ದಲ್ಲಿ ನೀಡುವುದಾಗಿ ಹೇಳಲಾಗಿದೆ.
ಭಾರತದಿಂದ 30 ಆ್ಯಂಬುಲೆನ್ಸ್ ಗಿಫ್ಟ್
ಪ್ರವಾಹದಿಂದ ತತ್ತರಿಸಿರುವ ನೇಪಾಲದ ಸಹಾಯಕ್ಕೆ ಭಾರತ, ಚೀನ ಮುಂದಾಗಿವೆ. ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಿರುವ ಭಾರತೀಯ ರಾಯಭಾರ ಕಚೇರಿ, ಸಂಕಷ್ಟದಲ್ಲಿರು ವವರ ನೆರವಿಗಾಗಿ 30 ಆ್ಯಂಬುಲೆನ್ಸ್ ಕಳುಹಿಸಿದ್ದಾಗಿ ತಿಳಿಸಿದೆ. ರಾಯಭಾರಿ ಮಂಜೀವ್ ಸಿಂಗ್ ಪುರಿ ಅವರು ಎಲ್ಲ ಆ್ಯಂಬುಲೆನ್ಸ್ಗಳನ್ನು ಅಗತ್ಯವಿರುವ ಆಸ್ಪತ್ರೆಗೆಗಳಿಗೆ ನೀಡಿದ್ದಾರೆ. ಅಲ್ಲದೇ, 57.3 ದಶಲಕ್ಷ ಮೌಲ್ಯದ ನೇಪಾಲಿ ರೂ. ಚೆಕ್ಗಳನ್ನು ವಿತರಿಸಲಾಗಿದೆ. ಸೂರಿಲ್ಲದ ವರಿಗೆ ಚಾದರ ವಿತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ