ಪಾಕ್‌ಗೆ ಮತ್ತೆ ಮುಖಭಂಗ


Team Udayavani, Sep 17, 2017, 6:05 AM IST

pak.jpg

ವಿಶ್ವಸಂಸ್ಥೆ: ತನ್ನ ನೆಲದಲ್ಲಿ ರಕ್ತಪಿಪಾಸುಗಳನ್ನು ಪೋಷಿಸಿ ಬೆಳೆಸುತ್ತಿದ್ದರೂ ಮತ್ತೂಂದು ದೇಶದ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸುವ ಪಾಕಿಸ್ಥಾನಕ್ಕೆ ಶನಿವಾರ ಭಾರತವು ಕಟು ಪದಗಳ ಮೂಲಕವೇ ನೈತಿಕತೆಯ ಪಾಠ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾವಿಸಿ, ಚಪ್ಪಾಳೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದ ಪಾಕಿಸ್ಥಾನವನ್ನು ಭಾರತವು ಸರಿಯಾಗಿಯೇ ಝಾಡಿಸಿದೆ.

“ನಮ್ಮ ಆಂತರಿಕ ವಿಚಾರದಲ್ಲಿ ಎಳ್ಳಷ್ಟೂ ಹಸ್ತಕ್ಷೇಪ ಮಾಡುವ ಅಧಿಕಾರ ನಿಮಗಿಲ್ಲ. ಭವಿಷ್ಯದಲ್ಲಿ ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ’ ಎಂದು ಹೇಳಿ ವಿಶ್ವಸಮುದಾಯದ ಮುಂದೆಯೇ ಪಾಕಿಸ್ಥಾನಕ್ಕೆ ಭಾರತ ತೀವ್ರ ಮುಖಭಂಗ ಮಾಡಿದೆ.

ಇದು ನಡೆದದ್ದು ಜಿನೇವಾದ ವಿಶ್ವಸಂಸ್ಥೆ ಕಚೇರಿಯಲ್ಲಿ. ಮುಸ್ಲಿಂ ರಾಷ್ಟ್ರಗಳ ಒಕ್ಕೂಟವಾದ ಇಸ್ಲಾ ಮಿಕ್‌ ಸಹಕಾರ ಸಂಘ (ಒಐಸಿ)ದ ಪರ ಪಾಕ್‌ ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ಹಿಂಸಾಚಾರವನ್ನು ಪ್ರಸ್ತಾ ವಿಸಿತ್ತು. ಕಾಶ್ಮೀರದಲ್ಲಿನ ಸ್ವದೇಶಿ ಚಳವಳಿಗೆ ಭಾರತ ತೊಂದರೆ ಉಂಟುಮಾಡುತ್ತಿದೆ. ಅಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಿದ್ದು, ಅದನ್ನು ತಡೆಯುವ ಅಗತ್ಯವಿದೆ ಎಂದೆಲ್ಲ  ಆರೋಪಗಳ ಪಟ್ಟಿ ಮುಂದಿಟ್ಟು ಭಾರತವನ್ನು ಹೀಗಳೆಯಲು ಯತ್ನಿಸಿತ್ತು.

ಇದಕ್ಕೆ “ಭಾರತದ ಪ್ರತಿಕ್ರಿಯಿಸುವ ಹಕ್ಕು’ ನಿಯಮದಡಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ರಾಯಭಾರ ಕಚೇರಿಯ ಕಾರ್ಯದರ್ಶಿ ಸುಮಿತ್‌ ಸೇs…, “ಜಮ್ಮು ಮತ್ತು ಕಾಶ್ಮೀರ ಎನ್ನುವುದು ಭಾರತದ ಅವಿಭಾಜ್ಯ ಹಾಗೂ ಎಂದೂ ಪ್ರತ್ಯೇಕಿಸಲಾಗದ ಅಂಗ. ಹೀಗಾಗಿ, ಅಲ್ಲಿನ ಎಲ್ಲ ಸಂಗತಿಗಳೂ ನಮ್ಮ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡಲು ನೀವ್ಯಾರು’ ಎಂದು ಕೇಳುವ ಮೂಲಕ ಪಾಕಿಸ್ಥಾನದ ಬಾಯಿ ಮುಚ್ಚಿಸಿದರು. ಅಲ್ಲದೆ, “ಒಐಸಿ ನೀಡಿರುವ ಹೇಳಿಕೆಯಲ್ಲಿ ಸತ್ಯಕ್ಕೆ ದೂರವಾದ ಅಂಶಗಳೇ ತುಂಬಿವೆ. ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಹಾದಿ ತಪ್ಪಿಸುವಂಥ ಉಲ್ಲೇಖಗಳನ್ನು ಮಾಡಲಾಗಿದೆ. ಇವೆಲ್ಲವನ್ನೂ ಭಾರತವು ಖಂಡತುಂಡವಾಗಿ ನಿರಾಕರಿಸುತ್ತದೆ. ಅಷ್ಟಕ್ಕೂ, ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಯಾವ ಅಧಿಕಾರವೂ ಒಐಸಿ ಗಿಲ್ಲ. ಈಗ ಮಾತ್ರವಲ್ಲ, ಭವಿಷ್ಯದಲ್ಲೂ ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ ಎಂದು ನಾವು ಒಐಸಿಗೆ ಹೇಳಬಯಸುತ್ತೇವೆ’ ಎಂದರು.

ಏನಿದು ಒಐಸಿ?: ಇಸ್ಲಾಮಿಕ್‌ ಸಹಕಾರ ಸಂಸ್ಥೆ (ಆರ್ಗನೈಸೇಷನ್‌ ಆಫ್ ಇಸ್ಲಾಮಿಕ್‌ ಕೋ- ಆಪರೇಷನ್‌) ಎನ್ನುವುದು 57 ರಾಷ್ಟ್ರಗಳು ಸೇರಿ ರಚಿಸಿದ ಒಂದು ಗುಂಪು. ಇದರ ಸದಸ್ಯ ರಾಷ್ಟ್ರಗಳ ಪೈಕಿ ಪಾಕಿಸ್ಥಾನವೂ ಒಂದಾಗಿದೆ.

ಪಾಕಿಸ್ಥಾನದ ಆರೋಪ ಏನಾಗಿತ್ತು ?
– ಕಾಶ್ಮೀರದ ಸ್ವದೇಶಿ ಚಳವಳಿಗೆ ಕಪ್ಪು ಚುಕ್ಕೆ ತರಲು ಭಾರತ ಯತ್ನಿಸುತ್ತಿದೆ
– ಬಹುಸಂಖ್ಯಾತ ಕಾಶ್ಮೀರಿಗರನ್ನು ಅಲ್ಪಸಂಖ್ಯಾಕರಿರುವ ಪ್ರದೇಶಕ್ಕೆ ಬದಲಿಸುವ ಮೂಲಕ ಭಾರತ ಸರಕಾರವು ಕಾಶ್ಮೀರದ ಜನಸಂಖ್ಯಾ ಸ್ಥಿತಿಯನ್ನೇ ಬದಲಿಸಲು ಹೊರಟಿದೆ
– ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಡಿವಾಣ ಹಾಕಬೇಕು
– ಎಲ್‌ಒಸಿಯಲ್ಲಿ ಭಾರತೀಯ ಸೇನಾ ಪಡೆ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದನ್ನು ತಡೆಯಬೇಕು

ಭಾರತದ ಪ್ರತಿಕ್ರಿಯೆಯೇನು?
– ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಪ್ರತ್ಯೇಕಿಸಲು ಅಸಾಧ್ಯವಾದ ಅಂಗ
– ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಯಾವ ಅಧಿಕಾರವೂ ಒಐಸಿಗಿಲ್ಲ
– ಒಐಸಿ ಹೇಳಿಕೆಯಲ್ಲಿರುವುದು ಸುಳ್ಳು ಮತ್ತು ಹಾದಿ ತಪ್ಪಿಸುವ ಅಂಶಗಳೇ
– ಭವಿಷ್ಯದಲ್ಲಿ ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಿ

ಇಬ್ಬರು ಉಗ್ರರ ಹತ್ಯೆ
ಶ್ರೀನಗರ
: ಪಾಕ್‌ ಕಡೆಯಿಂದ ಕಾಶ್ಮೀರದೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿರುವ ಭಾರತೀಯ ಸೇನೆ, ಒಳನುಸುಳುವಿಕೆ ಪ್ರಯತ್ನವನ್ನು ತಡೆದಿದೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್‌ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡ ಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ಹೇಳಿದ್ದಾರೆ.
 

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.