ಮೆಕ್ಸಿಕೋ ಕಂಪನ


Team Udayavani, Sep 21, 2017, 9:33 AM IST

21STATE-19.jpg

ಮೆಕ್ಸಿಕೋ: ಭಾರಿ ತೀವ್ರತೆಯ ಭೂಕಂಪಕ್ಕೆ ಮೆಕ್ಸಿಕೊ ಅಕ್ಷರಶಃ ತತ್ತರಿಸಿದೆ. ಬುಧವಾರ ಇದ್ದಕ್ಕಿದ್ದಂತೆ ಒಂದು  ನಿಮಿಷದಷ್ಟು ಸಮಯ 7.1 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ನೋಡ ನೋಡುತ್ತಿದ್ದಂತೆ ಮೆಕ್ಸಿಕೋ ಚಿತ್ರಣವೇ ಬದಲಾಗಿಹೋಗಿದೆ. ನೂರಾರು ಕಟ್ಟಡಗಳು ಧರೆಗುರುಳಿದ್ದು, ಪರಿಣಾಮ 21 ಶಾಲಾ ಮಕ್ಕಳು ಸೇರಿ 250ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಮನೆ, ಶಾಲೆ ಹಾಗೂ ವಾಣಿಜ್ಯ ಸೇರಿ ಅನೇಕ ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿವೆ. ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗಳು ಹಾನಿಗೀಡಾಗಿವೆ.

ಸ್ಥಳೀಯ ಕಾಲಮಾನ ಅಪರಾಹ್ನ 1.15ರ ಸುಮಾರಿಗೆ ಭೂಮಿ ಕಂಪಿಸಿದ್ದು, 1985ರ ಬಳಿಕ ಭಾರಿ ಹಾನಿ ಮಾಡಿದ ಭೂಕಂಪ ಇದಾಗಿದೆ.  ಎಂದು ಮೆಕ್ಸಿಕೋದ ಭೂವಿಜ್ಞಾನ ಮತ್ತು ಅಧ್ಯಯನ ಸಂಸ್ಥೆ ತಿಳಿಸಿದೆ. 1985ರಲ್ಲಿ ಸಂಭವಿಸಿದ್ದ ಭೂಕಂಪವನ್ನು ನೆನಪು ಮಾಡಿಕೊಂಡ ದಿನವೇ ಮತ್ತೂಂದು ಭಾರಿ ದುರಂತ ನಡೆದು ಹೋಗಿದೆ.

ರಕ್ಷಣಾ ಕಾರ್ಯ ಚುರುಕು: ಭೂಕಂಪದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಿಸುವ ಕೆಲಸ ಚುರುಕಾಗಿ ಸಾಗಿದೆ. ಪೊಲೀಸರು, ಅಗ್ನಿಶಾಮಕ ಪಡೆ, ವಿಪತ್ತು ನಿರ್ವಹಣ ಪಡೆ ಹಾಗೂ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಕುಸಿದುಬಿದ್ದಿರುವ ಕಟ್ಟಡಗಳ ಕೆಳಗೆ ಇನ್ನಷ್ಟು ಮಂದಿ ಸಿಲುಕಿಕೊಂಡಿದ್ದು, ಅವರನ್ನು ಸುರಕ್ಷಿತವಾಗಿ ಹೊರಕ್ಕೆ ಎತ್ತುವ ಕಾರ್ಯ ನಡೆಯುತ್ತಿದೆ. ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವಶೇಷಗಳ ಎಡೆಯಲ್ಲಿ ಇನ್ನೂ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕುಸಿದು ಬಿದ್ದ ಶಾಲಾ ಕಟ್ಟಡ: ಕಂಪನದ ತೀವ್ರತೆಗೆ ಮೆಕ್ಸಿಕೋ ದಕ್ಷಿಣದಲ್ಲಿರುವ ಎನ್ರಿಕ್‌ ರೆಬ್ಸಮೆನ್‌ ಪ್ರಾಥಮಿಕ ಶಾಲಾ ಕಟ್ಟಡ ಕುಸಿದುಬಿದ್ದ ಪರಿಣಾಮ ಮುದ್ದು ಮಕ್ಕಳು ಹಾಗೂ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆ.

ಈಗಾಗಲೇ ನಾಲ್ವರು ವಯಸ್ಕರು ಹಾಗೂ 21 ಮಕ್ಕಳ ಮೃತದೇಹವನ್ನು ಹೊರ ತೆಗೆಯಲಾಗಿದೆ. ಇನ್ನೂ 28 ಮಕ್ಕಳು ಸಹಿತ 40 ಮಂದಿ ಅವಶೇಷದ ಅಡಿಯಲ್ಲಿ ಸಿಲುಕಿಕೊಂಡಿದ್ದು, ಶೋಧಕಾರ್ಯ ನಡೆಯುತ್ತಿದೆ. ಗಾಯಾಳು 11 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳ ಕೆಳಕ್ಕೆ ಉಸಿರಾಟಕ್ಕೆ ತೊಂದರೆ ಆಗದಂತೆ ಆಮ್ಲಜನಕವನ್ನು ಟ್ಯೂಬ್‌ಗಳ ಮೂಲಕ ಕೆಳಕ್ಕೆ ಬಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಕ್ಸಿಕೊ ಅಧ್ಯಕ್ಷ ಎನ್ರಿಕ್‌ ಪೆನ ನಿಯೆಟೋ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಎಲ್ಲೆಲ್ಲಿ ಸಾವು-ನೋವು?
ಪುಯೆಬ್ಲಾ, ಮೊರೆಲಾಸ್‌, ಮೆಕ್ಸಿಕೋ ನಗರ ಹಾಗೂ ಗುಎರ್ರೆರೋ ಭಾಗಗಳಲ್ಲಿ ಕಟ್ಟಡಗಳು ಕುಸಿದಿವೆ. ಇದರಿಂದ ಈ ಪ್ರದೇಶಗಳಲ್ಲಿಯೇ ಹೆಚ್ಚೆಚ್ಚು ಸಾವು ಸಂಭವಿಸಿದೆ ಎಂದು ಗೃಹ ಸಚಿವ ಮಿಗುಯೆಲ್‌ ಒಸೋರಿಯೊ ಚಾಂಗ್‌ ತಿಳಿಸಿದ್ದಾರೆ.

ವಿಮಾನ ಹಾರಾಟ ಸ್ಥಗಿತ
ಭೂಕಂಪದ ಮುನ್ಸೂಚನೆ ಸಿಗುತ್ತಿದ್ದಂತೆ ಮೆಕ್ಸಿಕೋ ವಿಮಾನ ನಿಲ್ದಾಣ ಸ್ತಬ್ಧಗೊಂಡಿತ್ತು. ಎಲ್ಲ ವಿಮಾನ ಗಳ ಹಾರಾಟವನ್ನೂ ಮೂರ್‍ನಾಲು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು. ಅಲ್ಲದೇ, ಮೆಕ್ಸಿಕೋ ತಲುಪಬೇಕಿದ್ದ ವಿಮಾನಗಳ ಮಾರ್ಗವನ್ನೂ ಬದಲಿಸುವಂತೆ ಸೂಚನೆ ನೀಡಲಾಗಿತ್ತು.

ಎಲ್ಲೆಲ್ಲೂ  ಹುಡುಕಾಟ, ಪರದಾಟ
ಕಟ್ಟಡಗಳು ಕುಸಿದಿದ್ದರಿಂದ ಮೆಕ್ಸಿಕೋ ನಗರದಲ್ಲಿ ತಮ್ಮವರಿಗಾಗಿ ಜನ ಹುಡಕಾಟ ನಡೆಸುತ್ತಿದ್ದರೆ, ಗಾಯಾಳುಗಳ ಸಂಬಂಧಿಕರು ಚಿಕಿತ್ಸೆಗಾಗಿ ಅಲೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅನೇಕರು ನಾಪತ್ತೆಯಾದ ಮಕ್ಕಳು, ಅಪ್ಪ-ಅಮ್ಮ, ಸಂಬಂಧಿಕರ ಹುಡುಕಾಟದಲ್ಲಿರುವುದು ಕತ್ತಲಾದರೂ ಕಂಡು ಬರುತ್ತಲೇ ಇತ್ತು. ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳಲ್ಲಿ ತಮ್ಮವರ ವಿವರ ನೀಡಿ, ರಕ್ಷಣೆ ಕೋರಿ ಸಂದೇಶಗಳು ಹರಿದಾಡುತ್ತಿವೆ. ಕಟ್ಟಡದಡಿ ಸಿಲುಕಿರುವರ ಬಗ್ಗೆ ಮಾಹಿತಿ ನೀಡಿ ರಕ್ಷಿಸುವಂತೆ ಕೋರಿಕೊಳ್ಳುತ್ತಿದ್ದಾರೆ.

1985ರ ಭೂಕಂಪ; ಕರಾಳ ಘಟನೆ
ಮೆಕ್ಸಿಕೋ ಇಂಥ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿದ್ದು ಇದೇ ಮೊದಲಲ್ಲ. 1985ರಲ್ಲಿ ಇಂಥದ್ದೇ ಭಾರೀ ಪ್ರಮಾಣದಲ್ಲಿ ಭೂಕಂಪ ಸಂಭವಿಸಿತ್ತು. ಅಂದು ಬರೋಬ್ಬರಿ 10,000 ಮಂದಿ ಸಾವಿಗೀಡಾಗಿದ್ದರು. ಸೆಪ್ಟೆಂಬರ್‌ 7ರಂದು ಮೆಕ್ಸಿಕೋದ ಓಕ್ಸಕಾ ಮತ್ತು ಚಿಯಾಪಾಸ್‌ ಸುತ್ತ 8.1 ತೀವ್ರತೆಯ ಭೂಕಂಪ ಸಂಭವಿಸಿತ್ತು. 12 ದಿನ ಕಳೆಯುವಷ್ಟರಲ್ಲೇ ಮತ್ತೆ ಭೂಮಿ ಕಂಪಿಸಿ ಸಾವು-ನೋವು ಸಂಭವಿಸಿದೆ. ಅಂದು 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಭಾರತ ಸಹಾಯಕ್ಕೆ ಸಿದ್ಧವಿದೆ. ಮೆಕ್ಸಿಕೋ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. 
 ನರೇಂದ್ರ ಮೋದಿ, ಪ್ರಧಾನಿ

ಮೆಕ್ಸಿಕೋ ಜನತೆಯನ್ನು ದೇವರು ಕಾಪಾಡಲಿ. ನಿಮ್ಮೊಂದಿಗೆ ನಾವಿದ್ದೇವೆ. ಆತಂಕಪಡಬೇಕಿಲ್ಲ. ನಿಮಗೆ ಬೇಕಾದುದನ್ನು ನಾವು ಪೂರೈಸುತ್ತೇವೆ.
ಡೊನಾಲ್ಡ್‌ ಟ್ರಂಪ್‌, ಅಮೆರಿಕ ಅಧ್ಯಕ್ಷ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.