ಕೇಳ್ರಪ್ಪೋ ಕೇಳಿ, ನಾಳೆಯಿಂದ ಭೂಮಿಯ ಅವಸಾನ ಆರಂಭ?


Team Udayavani, Sep 22, 2017, 1:20 PM IST

EOW.jpg

ವಾಷಿಂಗ್ಟನ್‌: ಭಾರತದಲ್ಲಿ ಎಲ್ಲರೂ ನವರಾತ್ರಿಯ ಸಂಭ್ರಮದಲ್ಲಿದ್ದರೆ, ಅಮೆರಿಕದ ಕ್ರಿಶ್ಚಿಯನ್‌ ಸಂಖ್ಯಾ ರಹಸ್ಯ ಶಾಸ್ತ್ರಜ್ಞರೊಬ್ಬರು ‘ಕೊನೇ ರಾತ್ರಿ’ಯ ಬಗ್ಗೆ ಮಾತನಾಡಿ ಎಲ್ಲರ ಎದೆಬಡಿತವನ್ನೂ ಹೆಚ್ಚಿಸಿದ್ದಾರೆ!

ಹೌದು, ಅವರ ಪ್ರಕಾರ ನಾಳೆಯಿಂದ (ಶನಿವಾರ) ಭೂಮಿಯ ಅವಸಾನ ಆರಂಭ. ಜೆರುಸಲೇಂನ ಆಗಸದಲ್ಲಿ ಶನಿವಾರ ರಾತ್ರಿ ನಕ್ಷತ್ರಪುಂಜವೊಂದು ಕಾಣಿಸಿಕೊಳ್ಳಲಿದ್ದು, ಅದು ಜಗತ್ತಿನ ಅಂತ್ಯದ ಸೂಚಕವಾಗಿರಲಿದೆ ಎಂದು ಸ್ವಘೋಷಿತ ಸಂಶೋಧನಾ ಮತ್ತು ತನಿಖಾ ತಜ್ಞ ಡೇವಿಡ್‌ ಮೀಡ್‌ ಎಂಬವರು ಘೋಷಿಸಿದ್ದಾರೆ. ಅವರ ಹೇಳಿಕೆ ಹೊರಬರುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್‌ ಆಗಿದ್ದು, ಶನಿವಾರವೇ ಪ್ರಳಯವಾಗಲಿದೆ ಎಂಬ ವದಂತಿಗಳು ಹಬ್ಬತೊಡಗಿವೆ.

ಡೇವಿಡ್‌ ಹೇಳುವುದೇನು?: ಶನಿವಾರ ಅಂದರೆ ಸೆ.23, 2017ರಂದು ತಾರಾಪುಂಜವೊಂದು ಜೆರುಸಲೇಂನ ಆಗಸದಲ್ಲಿ ಕಾಣಿಸಿಕೊಳ್ಳಲಿದೆ. ತದನಂತರ ಭೂಮಿಗೆ ಗ್ರಹಣ ಹಿಡಿದಂತೆಯೇ ಸರಿ. ಅದರ ಪರಿಣಾಮ, ಅಕ್ಟೋಬರ್‌ ತಿಂಗಳಾಂತ್ಯದಲ್ಲಿ ಇಡೀ ಜಗತ್ತು 7 ವರ್ಷಗಳ ಕ್ಲೇಶಾವಸ್ಥೆಗೆ (ಟ್ರಿಬ್ಯುಲೇಷನ್‌ ಪೀರಿಯಡ್‌) ತಿರುಗಲಿದ್ದು, ಅಂದಿನಿಂದ ಭೂಮಿಯಲ್ಲಿ ಸರಣಿ ದುರಂತಗಳು ಸಂಭವಿಸಿ, ಕೊನೆಗೊಂದು ದಿನ ಇಡೀ ಭೂಮಿಯೇ ಹೇಳಹೆಸರಿಲ್ಲದಂತೆ ನಾಶವಾಗಿ ಹೋಗಲಿದೆ. ನಿಬಿರು ಎಂಬ ಹೆಸರಿನ ಗ್ರಹವೊಂದು (ಇಂಥ ಗ್ರಹವೇ ಇಲ್ಲ ಎಂದು ನಾಸಾ ಸ್ಪಷ್ಟಪಡಿಸಿದೆ) ಭೂಮಿಯತ್ತ ಚಲಿಸುತ್ತಿದೆ. ಈ ವರ್ಷಾಂತ್ಯದ ವೇಳೆಗೆ ನಿಬಿರು ಭೂಮಿಯನ್ನು ದಾಟಿ ಹೋದ ಕ್ಷಣದಿಂದ, ಭೂಕಂಪಗಳು, ಜ್ವಾಲಾಮುಖೀ ಸ್ಫೋಟ, ಸುನಾಮಿಯಂಥ ಪ್ರಾಕೃತಿಕ ವಿಕೋಪಗಳು ಬಂದರೆಗಲಿವೆ. ಅದು ಮಹಾಪ್ರಳಯವಾಗಿ ಪರಿವರ್ತಿತಗೊಂಡು, ಭೂಮಿಯ ಅವಸಾನಕ್ಕೆ ಕಾರಣವಾಗಲಿದೆ ಎನ್ನುವುದು ಡೇವಿಡ್‌ ಮೀಡ್‌ನ‌ ವಾದವಾಗಿದೆ.

ಮಾಧ್ಯಮಗಳ ಮೇಲೆ ಕಿಡಿ
ಈ ಎಲ್ಲ ವಿಚಾರಗಳನ್ನು ಡೇವಿಡ್‌ ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ. ಜತೆಗೆ, ತಮ್ಮ ಭವಿಷ್ಯವಾಣಿಯನ್ನು ಮಾಧ್ಯಮಗಳು ತಿರುಚಿವೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ವೈಭವೀಕರಿಸಿ, ಶನಿವಾರವೇ ಪ್ರಳಯವಾಗಲಿದೆ ಎಂದು ಸುಳ್ಳು ಸುದ್ದಿ ಪ್ರಕಟಿಸಿವೆ ಎಂದಿದ್ದಾರೆ ಡೇವಿಡ್‌. ವಿಶೇಷವೆಂದರೆ, ನೀವು ಎಲ್ಲಿಯವರು ಎಂಬ ಮಾಧ್ಯಮದವರ ಪ್ರಶ್ನೆಗೆ ಡೇವಿಡ್‌, ‘ಅತಿದೊಡ್ಡ ವಿಪತ್ತು ವಲಯದ ಹೃದಯಭಾಗದವನು’ ಎಂದು ಇರ್ಮಾ ಚಂಡಮಾರುತವನ್ನು ಪ್ರಸ್ತಾಪಿಸುತ್ತಾ ಹೇಳಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.