ತೈಲ ಬಿಟ್ಟು , ಮಂಗಳನತ್ತ ಅರಬ್‌ ಲಗ್ಗೆ?


Team Udayavani, Oct 23, 2017, 6:35 AM IST

mangala.jpg

ದುಬಾೖ: ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ) ಎಂದರೆ ತೈಲೋದ್ಯಮಕ್ಕೆ ಹೆಸರುವಾಸಿ. ಜತೆಗೆ ಅದ್ದೂರಿ ಮತ್ತು ವೈಭವೋಪೇತ ಕಟ್ಟಡಗಳ ನಿರ್ಮಾಣಕ್ಕೂ ಎತ್ತಿದ ಕೈ. ಬದಲಾಗಿರುವ ಕಾಲ ಸ್ಥಿತಿಯಲ್ಲಿ ಅರಬ್‌ ರಾಷ್ಟ್ರ ಯುಎಇ ತೈಲೋದ್ಯಮ ಕ್ಷೇತ್ರದ ಬಗ್ಗೆ ಈಗಾಗಲೇ ಪೂರಕವಲ್ಲದ ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ಆಯ್ಕೆಯ ಕ್ಷೇತ್ರವನ್ನು ಬದಲಾವಣೆ ಮಾಡಿಕೊಂಡಿದೆ. 

ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ಖಾತೆಯನ್ನು ಸೃಷ್ಟಿಸಿ, ಅದಕ್ಕೆ ಸಚಿವರನ್ನೇ ನೇಮಕ ಮಾಡಿದೆ. ಅಮೆರಿಕ ಮತ್ತಿತರ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಈ ಕ್ಷೇತ್ರದಲ್ಲಿ ಸಂಶೋಧನೆ ನಡೆಯುತ್ತಿದ್ದರೂ ಸರಕಾರದ ಮಟ್ಟದಲ್ಲಿ ಅಧಿಕೃತವಾಗಿ ಬೆಂಬಲ ನೀಡಿದ್ದು ವಿಶ್ವದಲ್ಲಿ ಇದೇ ಮೊದಲು.

ಅಮೆರಿಕದ ನಾಸಾ ಮಂಗಳ ಗ್ರಹದ ಮೇಲ್ಮೆ„ಯಲ್ಲಿ ಮಾನ ವನ ವಾಸಕ್ಕೆ ಯೋಗ್ಯವಾದ ಅಂಶಗಳ ಬಗ್ಗೆ ಸಂಶೋಧನೆ ನಡೆಸುತ್ತಿರುವಂತೆಯೇ 2117ರ ವೇಳೆಗೆ ಅಲ್ಲಿ 6 ಲಕ್ಷ ಮಂದಿಗೆ ಅನು ಕೂಲವಾಗುವಂಥ ನಗರ ನಿರ್ಮಾಣದ ಗುರಿಯನ್ನು ಯುಎಇ ಹಾಕಿಕೊಂಡಿದೆ. ಅದಕ್ಕಾಗಿಯೇ ಒಮರ್‌ ಬಿನ್‌ ಸುಲ್ತಾನ್‌ ಅಲ್‌ ಒಲಾಮ (27) ಅವರನ್ನು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ಖಾತೆಯ ಸಚಿವರನ್ನಾಗಿ ನೇಮಿಸಿದೆ.

ಮಂಗಳನಲ್ಲಿ ನೆಲೆಯೂರಲು ಅಮೆರಿಕ, ಚೀನ, ರಷ್ಯಾ, ಐರೋಪ್ಯ ಒಕ್ಕೂಟ ರಾಷ್ಟ್ರಗಳು ಈಗಾಗಲೇ ಪ್ರಯತ್ನ ನಡೆಸುತ್ತಿವೆ. ಅದಕ್ಕಿಂತ ಭಿನ್ನವಾಗಿ ಅಲ್ಲಿ ತನ್ನ ಛಾಪು ಮೂಡಿಸಲು ಮುಂದಾಗಿದೆ ಯುಎಇ. ಸ್ಪೇಸ್‌ ಎಕ್ಸ್‌ನ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಅಮೆರಿಕದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್ನ ಸಂಸ್ಥೆಯೂ ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಿದೆ.

ತೈಲದಿಂದ ಮಂಗಳನತ್ತ: ತೈಲೋದ್ಯಮ ಕ್ಷೇತ್ರದಲ್ಲಿ 2014ರಲ್ಲಿ ಉಂಟಾದ ತಾತ್ಕಾಲಿಕ ಹಿನ್ನಡೆ ಅರಬ್‌ ರಾಷ್ಟ್ರ ಹಾಕಿಕೊಂಡಿರುವ ಮಂಗಳನಲ್ಲಿ ನಗರ ನಿರ್ಮಾಣ ಯೋಜನೆಗೆ ಕೊಂಚ ಬ್ರೇಕ್‌ ನೀಡಿತ್ತು. ತೈಲ ಕ್ಷೇತ್ರದಲ್ಲಿ ಉಂಟಾದ ಬೆಲೆ ಕುಸಿತದ ಬಿಕ್ಕಟ್ಟು ಅಲ್ಲಿನ ಆರ್ಥಿಕತೆ ಮೇಲೆ ಬೀರಿರುವ ನೇತ್ಯಾತ್ಮಕ ಪರಿಣಾಮ ಇನ್ನೂ ಮುಕ್ತಾಯ ಕಂಡಿಲ್ಲ. ಇದರ ಹೊರತಾಗಿಯೂ ಅರಬ್‌ ರಾಷ್ಟ್ರವು ಮಂಗಳ ಗ್ರಹದಲ್ಲಿನ ಪ್ರಸ್ತಾವಿತ ಯೋಜನೆ ಬಗ್ಗೆ ವಿವಿಧ ಕಂಪೆನಿಗಳಲ್ಲಿ ಹೂಡಿಕೆ ಮಾಡುತ್ತಿದೆ. 

ಬಾಹ್ಯಾಕಾಶ ಕ್ಷೇತ್ರವನ್ನು ಒಂದು ಕೈಗಾರಿಕೆ ಎಂದು ಪರಿಗಣಿಸಿರುವ ಯುಎಇ ಸರಕಾರ, ಇದುವರೆಗೆ ಈ ಉದ್ದೇಶಕ್ಕಾಗಿ 32,500 ಕೋಟಿ ರೂ.ಗಳಿಗಿಂತಲೂ ಹೆಚ್ಚಿನ ಮೊತ್ತವನ್ನು ವಿನಿಯೋಗ ಮಾಡಿದೆ. ಅದರಲ್ಲಿ ನಾಲ್ಕು ಉಪಗ್ರಹಗಳನ್ನು ಈಗಾಗಲೇ ಉಡಾಯಿಸಿದೆ. ಇದೇ ಉದ್ದೇಶಕ್ಕಾಗಿ 2018ರಲ್ಲಿ ಮತ್ತೂಂದು ಉಪಗ್ರಹವನ್ನು ಹಾರಿ ಬಿಡಲಾಗುತ್ತದೆ.

ಬಾಹ್ಯಾಕಾಶದಲ್ಲಿ ಹೂಡಿಕೆ ಅಥವಾ ಸ್ಪೇಸ್‌ ಮೈನಿಂಗ್‌ ಎಂಬ ಹೊಸ ಕ್ಷೇತ್ರದಲ್ಲಿ ಅಮೆರಿಕದ ಶ್ರೀಮಂತ ಕುಳಗಳಾದ ಸ್ಪೇಸ್‌ ಎಕ್ಸ್‌ನ ಎಲಾನ್‌ ಮಸ್ಕ್ ಮತ್ತು ಅಮೆಜಾನ್‌ನ ಜೆಫ್ ಬೆಜೋಸ್‌ ಕೂಡ ಆಸಕ್ತಿ ತೋರಿಸಿ, ಅಲ್ಲಿನ ಸರಕಾರದ ಜತೆಗೆ ಪಾಲುದಾರಿಕೆ ಪಡೆದುಕೊಳ್ಳುವತ್ತ ಮುಂದಾಗಿದ್ದಾರೆ. ಅಮೆರಿಕದ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಗೋಲ್ಡ್‌ಮನ್‌ ಸ್ಯಾಶ್‌ ಈ ಕ್ಷೇತ್ರದ ಬಗ್ಗೆ ಸಿದ್ಧಪಡಿಸಿರುವ ಟಿಪ್ಪಣಿ ಪ್ರಕಾರ “ಈ ಕ್ಷೇತ್ರ ಊಹಿಸಿದ್ದಕ್ಕಿಂತಲೂ ವಾಸ್ತವಿಕವಾಗಿರಬಹುದು. ನೀರನ್ನು ಇಂಧನವನ್ನಾಗಿಸಿಕೊಳ್ಳುವ ಪ್ರಸ್ತಾವ ಕೂಡ ಕ್ರಾಂತಿಯನ್ನು ಎಬ್ಬಿಸಬಹುದು’ ಎಂದು ಪ್ರತಿಪಾದಿಸಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.