ಮಳೆಯೆಂದರೆ ಬರೀ ನೀರಲ್ಲ…


Team Udayavani, Jul 14, 2017, 3:50 AM IST

GettyImages.jpg

ಜೋರು ಮಳೆ ಬಂದಾಗ, ಹರಿಯುವ ನೀರಿನಲ್ಲಿ ಕಾಗದದ ದೋಣಿಯನ್ನು ತೇಲಿ ಬಿಡುತ್ತಿದ್ದೆವು. ಈಗ ಆ ದೋಣಿಯನ್ನು ಮಾಡುವುದು ಹೇಗೆ ಯಾರಿಗಾದರೂ ನೆನಪಿದೆಯಾ? ಒಮ್ಮೆ ನಿಮ್ಮ ನೆನಪಿನ ಶಕ್ತಿಯನ್ನು ಚೆಕ್‌ ಮಾಡ್ಕೊಳ್ಳಿ !

ಮಳೆಯೆಂದರೆ ಬರೀ ನೀರಲ್ಲ… ಇನ್ನೇನು? ಮಳೆ ಬರುವಾಗ ನೀರು ಬರುತ್ತದಲ್ಲ … ಹೌದು. ಮಳೆ ಬಂದರೆ ನೀರಾಗುತ್ತದೆ, ಹಾಗೆಯೇ ಮಳೆ ಬಾರದಿದ್ದರೆ ನೀರಿಲ್ಲ ಅಲ್ವಾ? ಮೇ ಅಥವಾ ಜೂನಲ್ಲಿ ಮೊದಲ ಮಳೆ ಬಂದಾಗ ಅದರ ಜೊತೆಗೆ ಒಂದಿಷ್ಟು ಬಾಲ್ಯದ ನೆನಪುಗಳು ಸಹ ಬರುತ್ತವೆ. ನೆನಪುಗಳು ನೆನಪಿಗೆ ಬಂದಾಗ ಈ ಬಾಲ್ಯ ಮತ್ತೆ ಬರಬಾರದೇ ಎಂದು ಅನಿಸುವುದು ಸಹಜ… ಮಳೆ ಬರುವಾಗ, ಮಳೆಯಲ್ಲಿ ಕಳೆದ ದಿನಗಳು ನೆನಪಿಗೆ ಬರುವುದುಂಟು. ನೆನಪಿಗೆ ಬಂದ ಕೆಲವೊಂದು ಬಾಲ್ಯದ ನೆನಪುಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

ಕೆಲವರಿಗೆ ಜನವರಿ ಹೊಸ ವರ್ಷವಾದರೆ, ಇನ್ನೂ ಕೆಲವರಿಗೆ ಯುಗಾದಿಯೇ ಹೊಸ ವರ್ಷ. ಶಾಲಾ ಮಕ್ಕಳಿಗೆ ಮಾತ್ರ ಜೂನ್‌ ಹೊಸ ವರ್ಷ ಎಂದರೆ ತಪ್ಪಾಗಲಾರದು.  ಆಗಲೇ ಶುರುವಾಗುವ ಶಾಲಾ-ಕಾಲೇಜುಗಳು, ಕೆಲವರು ಹೋದ ಶಾಲೆಗೆ ಮತ್ತೆ ಹೋದರೆ, ಇನ್ನೂ ಕೆಲವರು ಬೇರೆ ಶಾಲೆಗೆ ಹೀಗೆ. ಮೊದಲ ದಿನ ಹೊಸ ಬಟ್ಟೆ, ಹೊಸ ಕೊಡೆ, ಹೊಸ ಬ್ಯಾಗ್‌, ಹೊಸ ಶೂ, ಹೊಸ ಪುಸ್ತಕಗಳು- ಹೀಗೆ ಎಲ್ಲಾ ಹೊಸತನ್ನು ಧರಿಸಿ ಅಕ್ಕಪಕ್ಕಪಕ್ಕದ ಮನೆಯ ಮಕ್ಕಳೆಲ್ಲ ಕೈ ಕೈ ಹಿಡಿದುಕೊಂಡು ಹೋಗುವ ದಿನಗಳಿದ್ದವು. ಆಗ ಅದರ ಮಜಾನೆ ಬೇರೆ. ಎಷ್ಟು ಒಳ್ಳೆಯ ಬಾಲ್ಯ ಅಲ್ವಾ? ಅನುಭವಿಸಿದವರಿಗಷ್ಟೇ ಗೊತ್ತು ಬಾಲ್ಯದ ಮಜಾ.

ಮಳೆ ಎಂದರೆ ಎಲ್ಲರಿಗೂ ಖುಷಿ ಅಲ್ವಾ? ಮಳೆಯಲ್ಲಿ ನೆನೆಯುವುದೆಂದರೆ ಅದೇನೋ ತುಂಬಾ ಖುಷಿ. ಆದರೆ ಮಳೆ ಬರುವಾಗ ಮನೆಯಿಂದ ಹೊರಗೆ ಹೋಗಲು ಬಿಡಬೇಕಲ್ಲ… ಮಳೆಯಲ್ಲಿ ನೆನೆದರೆ ಶೀತ ಆಗುತ್ತದೆ, ಜ್ವರ ಬರುತ್ತದೆ ಎಂಬ ಹಲವಾರು ಕಾರಣಗಳು. ಆದರೂ ಸಹ ದೊಡ್ಡವರ ಕಣ್ಣು ತಪ್ಪಿಸಿ ಅಥವಾ ಬೇಕೆಂದೇ ಕೊಡೆ ಬಿಟ್ಟು ಹೋಗಿ ಮಳೆಯಲ್ಲಿ ನೆನೆದದ್ದು ಇದೆ. ಮೈಯÇÉಾ ಪೂರ್ತಿ ಒ¨ªೆಯಾದರೂ ಇನ್ನೂ ಮಳೆಯಲ್ಲಿ ನೆನೆಯಬೇಕೆಂಬ ಆಸೆ… ಮನೆಯೊಳಗಡೆ ಬರಲು ಮಳೆ ನಿಲ್ಲಲೇಬೇಕು, ಇಲ್ಲವಾದರೆ ಮಕ್ಕಳೆಲ್ಲ ಮನೆಯ ಹೊರಗಡೆ ಮಳೆಯಲ್ಲಿ ಆಟವಾಡುತ್ತಿರುತ್ತವೆ!

ಜೋರು ಮಳೆ ಬಂದಾಗ, ಹರಿಯುವ ನೀರಿನಲ್ಲಿ ಕಾಗದದ ದೋಣಿಯನ್ನು ತೇಲಿ ಬಿಡುತ್ತಿ¨ªೆವು. ಈಗ ಆ ದೋಣಿಯನ್ನು ಮಾಡುವುದು ಹೇಗೆ ಯಾರಿಗಾದರೂ ನೆನಪಿದೆಯಾ? ಒಮ್ಮೆ ನಿಮ್ಮ ನೆನಪಿನ ಶಕ್ತಿಯನ್ನು ಚೆಕ್‌ ಮಾಡ್ಕೊಳ್ಳಿ… ಇನ್ನು ಪುಸ್ತಕದ ಮಧ್ಯದಲ್ಲಿ ನವಿಲುಗರಿಯನ್ನು ಇಟ್ಟು, ಅದು ಯಾವಾಗ ಮರಿ ಹಾಕುತ್ತದೆ ಎಂದು ಕಾಯುವ ಕಾಲವೊಂದಿತ್ತು. ಬೇಗ ಮರಿ ಹಾಕಲೆಂದು ಸ್ವಲ್ಪ ಪೌಡರನ್ನು ಕೂಡ ಹಾಕಿ ಇಡುತ್ತಿದ್ದೆವು. ನಿಮಗೂ ನೆನಪಿದೆಯಾ? ಮತ್ತೆ… ಕಾಡಿನಲ್ಲಿ ಬೆಳೆಯುವ ಗಿಡ ಅದರ ಹೆಸರು ಕಾಡುಬಸಳೆ ಇರಬಹುದೇನೊ, ಸರಿಯಾಗಿ ಗೊತ್ತಿಲ್ಲ… ಆ ಗಿಡದ ಎಲೆಗಳನ್ನು ತಂದು ಪುಸ್ತಕದ ಮಧ್ಯದಲ್ಲಿ ಇಟ್ಟು, ಅದಕ್ಕೆ ಬೇರು ಬರುತ್ತದೆ, ಮತ್ತು ಅದರಿಂದ ಇನ್ನೊಂದು ಎಲೆ ಬೆಳೆಯುತ್ತದೆ ಎನ್ನುವ ನಂಬಿಕೆ. ಹೇಳಿದ ಹಾಗೆ ಬೇರು ಬರುತ್ತಿದ್ದದ್ದು ನೆನಪಿದೆ. 

ಸ್ಲೇಟಲ್ಲಿ ಎರಡು ಬದಿ ಬರೆದುಕೊಂಡು ಹೋದರೆ, ಹೋಗುವಾಗ ಜೋರು ಮಳೆ ಬಂದು ಬರೆದಲ್ಲಾ ಅಳಿಸಿ ಹೋಗುತ್ತಿತ್ತು. ಹೀಗಾಗಿ ಶಾಲೆಯಲ್ಲಿ ಟೀಚರ್‌ಗಳ ಬೈಗುಳ, ಸ್ಲೇಟಲ್ಲಿ ಬರೆಯದೆ ಬಂದವರಿಗೆ ಮಳೆ ಒಂದು ವರದಾನ. ಬರೆದೇ ತರುವುದಿಲ್ಲ, ಇನ್ನು ಕ್ಲಾಸಲ್ಲಿ ಟೀಚರ್‌ ಕೇಳಿದರೆ ಬರುವಾಗ ಮಳೆ ಬಂತು ಹಾಗಾಗಿ ಬರೆದದ್ದು ಅಳಿಸಿ ಹೋಯಿತು ಎಂದು ಹೇಳುತಿದ್ದದ್ದು ಇನ್ನೂ ನೆನಪಿದೆ.  ಮಳೆಗೆ ಅದೇನೊ ಶಾಲಾ ಮಕ್ಕಳ ಮೇಲೆ ತುಂಬಾ ಪ್ರೀತಿ. ಯಾವಾಗ ಗೇಮ್ಸ… ಕ್ಲಾಸ್‌ ಇದೆ, ಅದೇ ಸಮಯಕ್ಕೆ ಸರಿಯಾಗಿ ಮಳೆ ಬರುತ್ತಿತ್ತು. ಶಾಲೆಗೆ ಹೋಗುವ ಸಮಯ ಮತ್ತು ಶಾಲೆಯಿಂದ ಮನೆಗೆ ಬರುವ ಸಮಯಕ್ಕೆ ಸರಿಯಾಗಿ ಜೋರು ಮಳೆ ಬರುತ್ತಿತ್ತು. ಇಡೀ ದಿನ ಇಲ್ಲದ ಮಳೆ ಅದೇ ಸಮಯದಲ್ಲಿ ಬರುವುದೆಂದರೆ ಶಾಲಾ ಮಕ್ಕಳ ಮೇಲೆ ಇರುವ ಪ್ರೀತಿ ಅಲ್ಲದೆ ಇನ್ನೇನು? ಜೋರು ಗಾಳಿ-ಮಳೆ ಬಂದಾಗ ಕೆಲವರ ಕೊಡೆಗಳು ಹಾರಿಹೋಗುತ್ತಿದ್ದವು. ತಮ್ಮ ಕೊಡೆಯನ್ನು ಹಿಡಿದು ತರಲು ಹರಸಾಹಸ ಪಡುತ್ತಿದ್ದದ್ದು ಈಗ ನೆನಪಿಸಿಕೊಂಡರೆ ನಗು ಬರ್ತಿದೆ. ಇನ್ನು ಕೆಲವರ ಕೊಡೆ ಗಾಳಿಗೆ ತಾವರೆ ಆಗುತ್ತಿತ್ತು, ಅಂದರೆ ಆಕಾಶಕ್ಕೆ ಮುಖ ಮಾಡಿರುತ್ತಿತ್ತು. ಅದನ್ನು ಸರಿಮಾಡಲು ಒಂದಷ್ಟು ಸಮಯ ಬೇಕಾಗುತ್ತಿತ್ತು. ಕೊಡೆ ಸರಿಯಾಗುವ ಸಮಯಕ್ಕೆ ನಾವು ಪೂರ್ತಿ ಒದ್ದೆಯಾಗುತ್ತಿದ್ದೆವು. ರೈನ್ಕೋಟ್‌ ಹಾಕಿದವರಿಗೆ ಅದನ್ನು ಹಾಕುವುದು ಮತ್ತು ತೆಗೆಯುವುದೇ ದೊಡ್ಡ ಸಾಹಸವಾಗುತ್ತಿತ್ತು. ಅವರಿಗೆ ರೈನ್ಕೋಟ್‌ ಒಂದೇ ಸಾಕಾಗುತ್ತಿರಲಿಲ್ಲ, ಅದರ ಜೊತೆಗೆ ಒಂದು ಕೊಡೆ ಇದ್ದೇ ಇರುತ್ತಿತ್ತು.

ಇತ್ತೀಚಿಗೆ ಒಮ್ಮೆ ನಾನು ಜೋರು ಗಾಳಿ-ಮಳೆಯಲ್ಲಿ ಸಿಕ್ಕಿಹಾಕಿಕೊಂಡಾಗ ಎಲ್ಲಾ ಹಳೆಯ ನೆನಪುಗಳು ಒಟ್ಟೊಟ್ಟಿಗೆ ಬಂದವು. ನೀವು ನಿಮ್ಮ ಕನಸಿನ ಲೋಕಕ್ಕೆ ಹೋಗಿದ್ದರೆ ಕನಸು ಕಂಡಿದ್ದು ಸಾಕು ಮಾರ್ರೆ… ವಾಪಸ್‌ ಬನ್ನಿ ವಾಸ್ತವಕ್ಕೆ.

ರಕ್ಷಿತ ಪ್ರಭು, ಪಾಂಬೂರು

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.