“ದಯವಿಟ್ಟು ಗಮನಿಸಿ’ ಈ ವಾರ ರಾಜ್ಯಾದ್ಯಂತ ತೆರೆಗೆ: ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Oct 19, 2017, 6:09 PM IST
ಕೃಷ್ಣ ಕ್ರಿಯೇಷನ್ಸ್ ಲಾಂಛನದಲ್ಲಿ ಕೃಷ್ಣ ಸಾರ್ಥಕ್ ಅವರು ನಿರ್ಮಿಸಿರುವ “ದಯವಿಟ್ಟು ಗಮನಿಸಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ಆಟಗಾರ’ ಚಿತ್ರಕ್ಕೆ ಹಾಡು ಹಾಗೂ ಸಂಭಾಷಣೆ ಬರೆದಿದ್ದ, ಪ್ರಸ್ತುತ “ಆಕೆ’ ಚಿತ್ರಕ್ಕೆ ಸಂಭಾಷಣೆ ಬರೆದಿರುವ ರೋಹಿತ್ ಪದಕಿ ಚೊಚ್ಚಲ ನಿರ್ದೇಶನದ ಚಿತ್ರ “ದಯವಿಟ್ಟು ಗಮನಿಸಿ’. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರೋಹಿತ್ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತವಿದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕಿರಣ್ ಕುಮಾರ್ ಅವರ ಸಂಕಲನವಿದೆ. ರಘು ಮುಖರ್ಜಿ, ವಸಿಷ್ಠ ಸಿಂಹ, ಅವಿನಾಶ್, ಶತಮರ್ಷಣ, ಪೂರ್ಣಚಂದ್ರ, ರಾಜೇಶ್ ನಟರಂಗ, ಪ್ರಕಾಶ್ ಬೆಳವಾಡಿ, ಸಂಯುಕ್ತ ಹೊರನಾಡು, ಸಂಗೀತಾ ಭಟ್, ಸುಕೃತ ವಾಗ್ಲೆ, ಶಿಲ್ಪ, ಭಾವನಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮೇಘನಾರಾಜ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ