ಮುಂಬಯಿ: ವಸಾಯಿರೋಡ್ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ (ಜಿ. ಎಸ್. ಬಿ) ಸಮಾಜದವರ ಶಾಂತಿಧಾಮ ಸೇವಾ ಸಮಿತಿಯ ಪ್ರಥಮ ಪ್ರತಿಷ್ಠಾ ವರ್ಧಂತ್ಯುತ್ಸವವು ಮೇ 6 ರಂದು ವಿವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.ಧಾರ್ಮಿಕ ಕಾರ್ಯಕ್ರಮವಾಗಿ ಶ್ರೀ ಸತ್ಯನಾರಾಯಣ ಮಹಾಪೂಜೆಯು ವೇದಮೂರ್ತಿ ಗಿರಿಧರ ಭಟ್ ಅವರ ಮಾರ್ಗದರ್ಶನದಲ್ಲಿ ಸಮಿತಿಯ ವಿಶ್ವಸ್ಥರಾದ ಲಕ್ಷಿ¾à ಪ್ರಭು ಮತ್ತು ನರಸಿಂಹ ಪ್ರಭು ಅವರ ಉಪಸ್ಥಿತಿಯಲ್ಲಿ ಜರಗಿತು.ಸಮಾಜ ಬಾಂಧವರಿಂದ ಮತ್ತು ಭಕ್ತಧಿಗಳಿಂದ ಇದೇ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ಮಹಾಮಂಗಳಾರತಿ, ಪರಿವಾರ ದೇವರಿಗೆ ಮಹಾಆರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳು ಜರಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಕ್ತಾದಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.