Tuesday, May 21, 2013
Last Updated: 4:12:09 PM IST
  • ನಾನೆಲ್ಲಿರುವೆ:
  • ಮುಖಪುಟ ರಾಜ್ಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಸಚಿವ-ಶಾಸಕರ ರಾಜಿನಾಮೆ ಸಮರ್ಥಿಸಿದ ಯಡ್ಡಿ
    • ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ .

      • Udayavani | May 13, 2012

        ಬೆಂಗಳೂರು: ಕೆಲವು ಸಚಿವರು ಹಾಗೂ ಶಾಸಕರು ರಾಜಿನಾಮೆ ಪತ್ರ ನೀಡಿರುವುದನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

        'ಮುಖ್ಯಮಂತ್ರಿ ಸದಾನಂದಗೌಡರು ಮಾಡಿರುವ ಅವಮಾನದಿಂದ ಬೇಸತ್ತು ಕೆಲವು ಸಚಿವರು ಹಾಗೂ ಶಾಸಕರು ನನಗೆ ರಾಜಿನಾಮೆ ಪತ್ರ ನೀಡಿದ್ದಾರೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

        ಭಾನುವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಅಹವಾಲುಗಳನ್ನು ಆಲಿಸಲು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸುತ್ತಿದ್ದರೂ ಅದಕ್ಕೆ ಮುಖ್ಯಮಂತ್ರಿಗಳು ಆದ್ಯತೆ ನೀಡುವುದಕ್ಕೆ ಬೇಸರಗೊಂಡಿದ್ದಾರೆ. ಕಳೆದ ಎಂಟು ತಿಂಗಳಿಂದ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ ಎಂದು ಹರಿಹಾಯ್ದರು.

        ತಮ್ಮ ಸಂಪುಟದ ಸಚಿವರ ವಿರುದ್ದ ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರಿಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ದೂರು ನೀಡಿರುವುದು ಅವರಿಗೆ ನೋವು ತಂದಿದೆ. ಈ ಕಾರಣಕ್ಕಾಗಿಯೇ ಆ ಸಚಿವರು ರಾಜಿನಾಮೆ ನೀಡಿದ್ದಾರೆ ಎಂದರು.

        ತಾವೂ ರಾಜಿನಾಮೆ ನೀಡುವಿರಾ ಅಥವಾ ಬಿಜೆಪಿಯನ್ನೇ ತೊರೆಯುವಿರಾ ಎಂಬಿತ್ಯಾದಿ ಸುದ್ದಿಗಾರರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಲು ಬಯಸದ ಯಡಿಯೂರಪ್ಪ, ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದಷ್ಟೇ ಹೇಳಿದರು.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      • ಈ ವಿಭಾಗದಲ್ಲಿಯೂ ಇದೆ
      image
      • Copyright @ 2009 Udayavani.All rights reserved.
      • Designed & Hosted By 4cplus