ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮತ್ತು ಸಿದ್ದರಾಮಯ್ಯ ದಿಲ್ಲಿಗೆ ತೆರಳುತ್ತಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲು ದಿಲ್ಲಿಗೆ ಆಗಮಿಸುವಂತೆ ಪರಮೇಶ್ವರ್ ಮತ್ತು ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಹೈಕಮಾಂಡ್ ಸೂಚನೆಯಂತೆ ಸೋಮವಾರ ಬೆಳಗ್ಗೆ 7 ಗಂಟೆಗೆ ಇಬ್ಬರು ನಾಯಕರು ಕೂಡ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.