ಶ್ರೀನಗರ: ಸಂಸತ್ ಮೇಲಿನ ದಾಳಿ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಯೋತ್ಪಾದಕ ಮಹಮದ್ ಅಫjಲ್ ಗುರುಗೆ ಆದಷ್ಟು ಬೇಗ ಗಲ್ಲು ಶಿಕ್ಷೆಯಾಗಲಿ ಎಂದು ಇಡೀ ದೇಶ ಬಯಸುತ್ತಿದ್ದರೆ, ಅತ್ತ ಜಮ್ಮು ಮತ್ತು ಕಾಶ್ಮೀರದ ಶಾಸಕರೊಬ್ಬರು ಆತನಿಗೆ ಕ್ಷಮಾದಾನ ನೀಡಿ ಎಂಬ ಬೇಡಿಕೆ ಇಟ್ಟಿದ್ದಾರೆ. ಇನ್ನೂ ಅಚ್ಚರಿಯೆಂದರೆ ಈ ಬೇಡಿಕೆಯನ್ನು ಅವರು ಇಟ್ಟಿದ್ದು, ಯುಪಿಎನ ರಾಷ್ಟ್ರಪತಿ ಅಭ್ಯರ್ಥಿ ಪ್ರಣಬ್ ಮುಖರ್ಜಿ ಅವರ ಮುಂದೆ!ಪ್ರಣಬ್, ರಾಷ್ಟ್ರಪತಿ ಚುನಾವಣೆಯಲ್ಲಿ ಶಾಸಕರ ಬೆಂಬಲ ಕೋರುವ ನಿಟ್ಟಿನಲ್ಲಿ ಇಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಅವರನ್ನು ಭೇಟಿಯಾದ ಕುಪ್ವಾರಾ ಜಿಲ್ಲೆಯ ಲ್ಯಾನ್ಗೆàಟ್ ಕ್ಷೇತ್ರದ ಪಕ್ಷೇತರ ಶಾಸಕ ಶೇಖ್ ಅಬ್ದುಲ್ ರಶೀದ್, ನೀವು ಈ ದೇಶದ ರಾಷ್ಟ್ರಪತಿ ಆದ ಕೂಡಲೇ ಅಫjಲ್ ಗುರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ಮಾನ್ಯ ಮಾಡಬೇಕು ಎಂದು ಕೋರಿ ಮನವಿ ಸಲ್ಲಿಸಿದ್ದಾರೆ.