ಉಡುಪಿ: ಉಡುಪಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಜನಹಿತ ಸೌಹಾರ್ದ ಸಹಕಾರಿ ನಿಯಮಿತದ ಮಣಿಪಾಲ ಶಾಖೆಯನ್ನು ಫೆ. 20ರ ಬೆಳಗ್ಗೆ 11ಕ್ಕೆ ಮಣಿಪಾಲ ಸಿಂಡಿಕೇಟ್ ಬ್ಯಾಂಕ್ ಪ್ರಧಾನ ಕಚೇರಿ ಬಳಿ ಇರುವ ನಗರಸಭೆ ಕಟ್ಟಡದ ಒಂದನೇ ಮಹಡಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು.ಶಾಸಕ ಕೆ. ರಘುಪತಿ ಭಟ್, ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ನಿರ್ದೇಶಕ ಭಾಸ್ಕರ ಕಾಮತ್, ಸಹಕಾರ ಸಂಘಗಳ ಉಪನಿಬಂಧಕಿ ಕೆ. ನಯನ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸಂಸ್ಥೆಯ ಅಧ್ಯಕ್ಷ ಗೋಪಾಲ್ ಯು. ತಿಳಿಸಿದ್ದಾರೆ.