ಕ್ರಿಕೆಟ್‌ ಪಟು ಛಾಯಾಗೆ ಸೈಕ್ಲಿಂಗ್‌ನಲ್ಲಿ ಕಂಚಿನ ಪದಕ

| ಕೋವಿಡ್‌; ಹೆಚ್ಚು ಅಭ್ಯಾಸ ಮಾಡದಿದ್ದರೂ ಮೊದಲ ಯತ್ನದಲ್ಲೇ ಸಾಧನೆ ಮೆರೆದ ಬಾಲೆ

Team Udayavani, Feb 23, 2021, 5:02 PM IST

ಕ್ರಿಕೆಟ್‌ ಪಟು ಛಾಯಾಗೆ ಸೈಕ್ಲಿಂಗ್‌ನಲ್ಲಿ ಕಂಚಿನ ಪದಕ

ಗದಗ: ಇತ್ತೀಚಿನ ವರ್ಷಗಳಲ್ಲಿ ಬಹುತೇಕರು ಕ್ರಿಕೆಟಿಗರಾಗುವಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ವರ್ಷಗಳ ಕಾಲ ತಪಸ್ಸಿನಂತೆ ಸಾಧನೆ ಮಾಡುತ್ತಾರೆ. ಆದರೆ, ಕ್ರಿಕೆಟ್‌ಗಿಂತ ತನಗೆ ಸೈಕ್ಲಿಂಗ್‌ ಲೇಸು ಎಂಬುದನ್ನರಿತ ಬಾಲಕಿಯೊಬ್ಬಳು ಸೈಕ್ಲಿಂಗ್‌ ಅಭ್ಯಾಸದಲ್ಲಿ ತೊಡಗಿದ ಒಂದೇ ವರ್ಷದಲ್ಲಿ ರಾಜ್ಯ-ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ವಿಜಯಪುರದ ಛಾಯಾ ನಾಗನಾಥ ನಾಗಶೆಟ್ಟಿ ಎಂಬ ಬಾಲಕಿ 17ನೇ ರಾಷ್ಟ್ರೀಯ ಮೌಂಟೇನ್‌ ಬೈಕ್‌ ಸೈಕ್ಲಿಂಗ್‌ಚಾಂಪಿಯನ್‌ ಶಿಪ್‌ನಲ್ಲಿ 14 ವರ್ಷದೊಳಗಿನ ಟೈಮ್‌ಟ್ರಾಯಲ್ಸ್‌ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆಮೆರೆದಿದ್ದಾರೆ. ವಿಜಯಪುರದ ಬಿ.ವಿ.ದರ್ಬಾರ್‌ ಹೈಸ್ಕೂಲ್‌8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಛಾಯಾ, ಕಳೆದ ಐದು ವರ್ಷಗಳಿಂದ ಕ್ರಿಕೆಟ್‌ ಹಾಗೂ ಫಿಟ್‌ನೆಸ್‌ಗಾಗಿ ಅಥ್ಲೆಟಿಕ್ಸ್‌ನಲ್ಲಿ ತೊಡಗಿದ್ದಾರೆ.

ಛಾಯಾ 5ನೇ ತರಗತಿಯಲ್ಲಿದ್ದಾಗಲೇ ಸೈಕ್ಲಿಂಗ್‌ ವಿಭಾಗದಲ್ಲಿ ವಸತಿ ಶಾಲೆಗೆ ಪ್ರವೇಶ ಸಿಕ್ಕಿದ್ದರೂ ಕ್ರಿಕೆಟ್‌ ಮೇಲಿನ ಒಲವಿನಿಂದಕ್ರೀಡಾ ಶಾಲೆಗೆ ಸೇರಿರಲಿಲ್ಲ. ವರ್ಷಗಳಿಂದ ಕ್ರಿಕೆಟ್‌ ಅಭ್ಯಾಸ ಮಾಡಿದರೂ ನಿರೀಕ್ಷಿತ ಫಲ ಸಿಗದಿದ್ದರಿಂದ ತಂದೆ ನಾಗನಾಥ ಅವರು ಸೈಕ್ಲಿಂಗ್‌ಗೆ ಸೇರುವಂತೆ ಸಲಹೆ ನೀಡಿದ್ದರು. ಅದರಂತೆ ಕಳೆದ ವರ್ಷದಿಂದ ಸೈಕ್ಲಿಂಗ್‌ ಅಭ್ಯಾಸದಲ್ಲಿ ತೊಡಗಿದ್ದ ಛಾಯಾ, 7ನೇ ತರಗತಿಗೆ ಕ್ರೀಡಾಶಾಲೆಗೆ ಪ್ರವೇಶ ಪಡೆದಿದ್ದರು.

ಆದರೆ ಪ್ರಸಕ್ತ ಸಾಲಿನಲ್ಲಿ ಕೋವಿಡ್‌ನಿಂದ ಹೆಚ್ಚು ಅಭ್ಯಾಸ ಮಾಡಲಾಗದಿದ್ದರೂ, ಛಾಯಾ ಅವರ ಸೈಕ್ಲಿಂಗ್‌ ಪ್ರತಿಭೆಯಿಂದ ಕೆಲವೇ ತಿಂಗಳು ಕಾಲ ಅಭ್ಯಾಸ ನಡೆಸಿ ಮೊದಲ ಪ್ರಯತ್ನದಲ್ಲೇ ರಾಜ್ಯ-ರಾಷ್ಟ್ರ ಮಟ್ಟದ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾಳೆ. ಈ ಬಾರಿ 17ನೇ ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಅಲ್ಲದೇ, ಛಾಯಾ ಅವರ ಅಂಕಗಳನ್ನಾಧರಿಸಿ ಅಂತಾರಾಷ್ಟ್ರೀಯ ಸ್ಪರ್ಧೆಗೂ ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ ತರಬೇತುಗಾರ್ತಿ ಅಲ್ಕಾ ಪಡತರೆ

ನಾನು ಕ್ರಿಕೆಟ್‌ನಲ್ಲಿ ಎಷ್ಟೇ ಶ್ರಮ ವಹಿಸಿದರೂ ನಿರೀಕ್ಷಿತ ಫಲ ಸಿಗಲಿಲ್ಲ. ಆದರೆ, ನನ್ನೊಳಗಿನ ಸೈಕ್ಲಿಸ್ಟ್‌ ಇಲ್ಲಿಯ ವರೆಗೆ ಕರೆ ತಂದಿದೆ. ಮೊದಲಪ್ರಯತ್ನದಲ್ಲೇ ಕಂಚು ಬಂದಿದ್ದುಸಂತಸವಾಗುತ್ತಿದೆ. ಮುಂದೆ ಸೈಕ್ಲಿಂಗ್‌ ನಲ್ಲೇ ಹೆಚ್ಚಿನ ಶ್ರಮ ವಹಿಸಿ ಅಭ್ಯಾಸ ಮಾಡುತ್ತೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರುಲು ಪ್ರಯತ್ನಿಸುತ್ತೇನೆ. – ಛಾಯಾ ನಾಗಶೆಟ್ಟಿ,ಕಂಚಿನ ಪದಕ ಪಡೆದ ಸೈಕ್ಲಿಸ್ಟ್‌

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.