ಮಧುಮೇಹಿಗಳಿಗೆ ಹೊಸ ರುಚಿ ಕರದಂಟು

ಸಕ್ಕರೆ-ಬೆಲ್ಲ ರಹಿತ ಅಂಜೂರ-ಕರ್ಜೂರ ಮಿಶ್ರಿತ ಕರದಂಟು!­ಮತ್ತೂಂದು ಹೆಜ್ಜೆಯತ್ತ ಅಮೀನಗಡ ವಿಜಯಾ ಕರದಂಟು ಸಂಸ್ಥೆ

Team Udayavani, Feb 25, 2021, 4:01 PM IST

Special Karadantu

ಅಮೀನಗಡ: ದೇಶ-ವಿದೇಶಗಳಲ್ಲೂ ತನ್ನ ವಿಶಿಷ್ಟ ಸ್ವಾದ, ಪೌಷ್ಟಿಕತೆಯೊಂದಿಗೆ ಪ್ರಸಿದ್ಧಿಯಾದ ಅಮೀನಗಡ ಕರದಂಡು ಮತ್ತೂಂದು ಹೊಸ ಹೆಜ್ಜೆಯತ್ತ ಕಾಲಿಟ್ಟಿದೆ. ಮಧುಮೇಹಿಗಳಿಗಾಗಿಯೇ ವಿಶೇಷ ಕರದಂಟು ಸಿದ್ಧಪಡಿಸಿದೆ.

ಕರದಂಟು ಸಿಹಿ ತಿನಿಸು ಮಾತ್ರವಲ್ಲ ಪೌಷ್ಟಿಕ ಆಹಾರ ನೈಸರ್ಗಿಕ ಅಂಟು, ಚುಕ್ಕಿ ಬೆಲ್ಲ, ಶುದ್ದ ತುಪ್ಪ ಹಾಗೂ ಹತ್ತಾರು ಡ್ರೈ ಫ್ರುಟ್ಸ್‌ಗಳ ಮಿಶ್ರಣದಲ್ಲಿ ತಯಾರಾಗುವ ಅಮೀನಗಡ ಕರದಂಟಿಗೆ 114 ವರ್ಷಗಳ ಇತಿಹಾಸವಿದೆ. ಆಧುನಿಕತೆಗೆ ತಕ್ಕಂತೆ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದ್ದು, ಮೊದಲಿನ ರುಚಿಯನ್ನೂ ಕಾಯ್ದುಕೊಳ್ಳಲಾಗಿದೆ. ಪೌಷ್ಟಿಕಾಂಶಗಳನ್ನು ಹೊಂದಿರುವ ಅಮೀನಗಡದ ಪ್ರಸಿದ್ಧ ಕರದಂಟು ಗರ್ಭಿಣಿಯರು, ಬಾಣಂತಿಯರು, ಯುವಕರು ಹಾಗೂ ಮಕ್ಕಳ ಆರೋಗ್ಯಕ್ಕೆ ಉತ್ತಮ ತಿನಿಸು. ಉಡುಪಿಯಿಂದ ಗೋಡಂಬಿ, ಆಂಧ್ರದ ತಾಂಡೂರ್‌ನಿಂದ ಗೇರು ಬೀಜ, ಮಹಾರಾಷ್ಟ್ರದ ಕೊಲ್ಲಾಪುರದಿಂದ ಬೆಲ್ಲ.

ಮುಂಬೈ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಂದ ಬಾದಾಮಿ, ಪಿಸ್ತಾ, ಅಂಜೂರು ಸೇರಿದಂತೆ ಬಹುತೇಕ ಸಾಮಗ್ರಿ ತಂದು ಕರದಂಟಿಗೆ ಬಳಸಲಾಗುತ್ತದೆ. ಬದಲಾವಣೆ ಏನು?: ಸಾವಯವ ಬೆಲ್ಲ, ಕೊಬ್ಬರಿ, ಗೋಡಂಬಿ, ಒಣದ್ರಾಕ್ಷಿ, ಗೇರಬೀಜ, ಬಾದಾಮಿ, ಪಿಸ್ತಾ, ಅಂಜೂರ, ಆಳ್ವಿ, ಗಸಗಸಿ, ಉತ್ತತ್ತಿ, ಆಕ್ರೋಟ್‌, ಜಾಜಿಕಾಯಿ, ಏಲಕ್ಕಿ ಹಾಗೂ ಶುದ್ದ ತುಪ್ಪ ಸೇರಿದಂತೆ ಹಲವಾರು ಪೌಷ್ಟಿಕಾಂಶಗಳಿಂದ  ತಯಾರಿಸಲ್ಪಡುವ ಕರದಂಟು ಪ್ರಿಮಿಯಂ, ಕ್ಲಾಸಿಕ್‌, ಸುಪ್ರೀಂ ಎಂದು ಮೂರು ತರಹದ ಕರದಂಟು ತಯಾರಿಸಿ ಮಾರಾಟ ಮಾಡಲಾಗುತ್ತದೆ.

ಸುಪ್ರೀಂ ಕರದಂಟು ನಾಲ್ಕರಿಂದ ಆರು ತಿಂಗಳು ಬಳಸಲಾಗುತ್ತದೆ. ಆದರೆ ಈಗ ಅಮೀನಗಡ ಪ್ರಸಿದ್ಧ ವಿಜಯಾ ಕರದಂಟು ಒಂದು ಹೆಜ್ಜೆ ಮುಂದೆ ಸಾಗಿ ಸಕ್ಕರೆ, ಬೆಲ್ಲ ರಹಿತವಾದ ಅಂಜೂರ ಮತ್ತು ಕರ್ಜೂರ ಮೂಲಕ ನೂತನ ಸ್ವಾದಿಷ್ಟ ಕರದಂಟು ಸಿದ್ಧಪಡಿಸಿದೆ. ಇದು ಮಧುಮೇಹಿಗಳು, ಹಿಮೋಗ್ಲೋಬಿನ್‌ ನಿಂದ ಬಳಲುತ್ತಿರುವವರಿಗೆ ಪೌಷ್ಟಿಕ ತಿನಿಸು ಎನ್ನುತ್ತಾರೆ ವಿಜಯಾ ಕರದಂಟು ಅಮೀನಗಡ ಮಾಲಿಕ ಸಂತೋಷ ಐಹೊಳ್ಳಿ.

ಅಂಜೂರ ಮತ್ತು ಕರ್ಜೂರ ಮಿಶ್ರಿತ ಮೂಲಕ ಕರದಂಟು ತಯಾರು ಮಾಡಬೇಕು ಎಂಬ ಉದ್ದೇಶ ಮೊದಲಿನಿಂದಲೂ ಇತ್ತು. ನಮ್ಮ ಅಡುಗೆ ಮನೆಯಲ್ಲಿ ಮೊದಲ ಪ್ರಯತ್ನದಲ್ಲಿ ಕಾಲು ಕೆಜಿ ಕರದಂಟು ಸಿದ್ಧಪಡಿಸಲಾಯಿತು. ನಂತರ 10 ಕೆಜಿ, ಈಗ ಸದ್ಯ 30 ಕೆಜಿ ಕರದಂಟು ಮಾಡಿ ಮಾರುಕಟ್ಟೆಗೆ ತಾತ್ಕಾಲಿಕವಾಗಿ ಬಿಡುಗಡೆ ಮಾಡಿದ್ದೇವೆ. ಇದರಲ್ಲಿ ಯಾವುದೇ ರೀತಿಯ ಸಕ್ಕರೆ ಬೆಲ್ಲ, ದ್ರಾಕ್ಷಿ ಮತ್ತು ಕೊಬ್ಬರಿ ಬಳಸುವುದಿಲ್ಲ. ಇದನ್ನು ವಿಶೇಷವಾಗಿ ಮಧುಮೇಹಿಗಳಿಗೆ, ಹೀಮೋಗ್ಲೋಬಿನ್‌ನಿಂದ ಬಳಲುತ್ತಿರುವವರಿಗಾಗಿ ಸಿದ್ಧಪಡಿಸಲಾಗಿದೆ. ಮೈಸೂರಿನ ಆಹಾರ ಇಲಾಖೆಯಲ್ಲಿ ಪರೀಕ್ಷೆಗೆ ಒಳಪಡಿಸಿ ಸಕ್ಕರೆ ಪ್ರಮಾಣ ಎಷ್ಟಿದೆ ಎಂಬುದನ್ನು ಪರೀಕ್ಷಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು.  (ಸಂತೋಷ ಐಹೊಳ್ಳಿ, ಮಾಲಿಕರು, ವಿಜಯಾ ಕರದಂಟು, ಅಮೀನಗಡ)

ಎಚ್‌.ಎಚ್‌. ಬೇಪಾರಿ

 

 

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.