ಬಳ್ಳಾರಿ ಜಿಲ್ಲೆ ವಿಭಜಿಸಿದ ವ್ಯಕ್ತಿ ನಮಗೆ ಬೇಡ
ಸಚಿವ ಆನಂದ್ ಸಿಂಗ್ಗೆ ಶಾಸಕ ಸೋಮಶೇಖರ ರೆಡ್ಡಿ ಟಾಂಗ್
Team Udayavani, Feb 25, 2021, 5:05 PM IST
ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ಕಲಿಸಿದ್ದ ರಾಜಕೀಯ ಪಾಠವನ್ನು ಉಸ್ತುವಾರಿ ಸಚಿವ ಆನಂದ ಸಿಂಗ್ ಸಮರ್ಪಕವಾಗಿ ಸದ್ಬಳಕೆ
ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಸೋಮಶೇಖರ ರೆಡ್ಡಿ ಆರೋಪಿಸಿದ್ದಾರೆ.
ನಗರದ ತಾಳೂರು ರಸ್ತೆಯಲ್ಲಿ ಬುಧವಾರ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವ ಆನಂದ್ಸಿಂಗ್ ಅಲ್ಲೊಂದು ಇಲ್ಲೊಂದು ಮಾತುಗಳನ್ನು ಆಡುವ ಮೂಲಕ ಸದ್ಯ ರಾಜಕೀಯ ಆಟವನ್ನು ಚೆನ್ನಾಗಿ ಆಡುತ್ತಿದ್ದಾರೆ.
ಆನಂದ್ಸಿಂಗ್ ನಮಗೆ ಜಿಲ್ಲೆಯನ್ನು ಬಿಟ್ಟು ಕೊಡೋದಲ್ಲ, ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸುತ್ತೇವೆ. ಜಿಲ್ಲೆ ವಿಭಜನೆ ಮಾಡಿದ್ದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿ ಸಚಿವರಾಗಿ ಇರುವುದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರು ಇರೋದು ಬೇಕಾಗಿಲ್ಲ ಎಂದರು.
ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಲ್ಲಿ ಮಾಜಿ ಸಚಿವ ಜನಾರ್ದನರೆಡ್ಡಿ ಸಮಯದಲ್ಲಿ ಆದ ರೀತಿಯಲ್ಲಿ ಬಳ್ಳಾರಿ ಅಭಿವೃದ್ಧಿ ಆಗಲಿದೆ. ಶ್ರೀರಾಮುಲು ನನ್ನ ತಮ್ಮ. ಅವರು ಬಳ್ಳಾರಿ ಉಸ್ತುವಾರಿ ಆಗುತ್ತಾರೆ ಎಂದರೆ ಬೇಡ ಅನ್ನಲ್ಲ. ಅಯೋಧ್ಯೆಯಲ್ಲಿ
ಶ್ರೀರಾಮ, ಬಳ್ಳಾರಿಯಲ್ಲಿ ರಾಮುಲು ಉಸ್ತುವಾರಿ ವಹಿಸಿಕೊಂಡಲ್ಲಿ ಚೆನ್ನಾಗಿರುತ್ತದೆ. ಬಳ್ಳಾರಿ ವಿಭಜನೆ ವಿರೋಧಿ ಸಿ ನ್ಯಾಯಾಲಯಕ್ಕೆ ಹೋಗುವವರಿಗೆ ನನ್ನ ಬೆಂಬಲವಿದೆ ಎಂದರು.
ಇದಕ್ಕೂ ಮುನ್ನ ಲೊಕೋಪಯೋಗಿ ಇಲಾಖೆ ವತಿಯಿಂದ ನಗರದ ತಾಳೂರು ರಸ್ತೆಯನ್ನು 128 ಅಡಿಗಳ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಸೋಮಶೇಖರರೆಡ್ಡಿಯವರು ಬುಧವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮೊತ್ಕರ್ ಶ್ರೀನಿವಾಸ್ ರೆಡ್ಡಿ, ಕೆಎಂಎಫ್ ನಿರ್ದೇಶಕ ವೀರಶೇಖರ ರೆಡ್ಡಿ, ಶಾಸಕರ ಪುತ್ರ ಜಿ.ಶ್ರವಣ್ ಕುಮಾರ್ ರೆಡ್ಡಿ, ಎಪಿಎಂಸಿ ಸದಸ್ಯ ಕೃಷ್ಣಾರೆಡ್ಡಿ, ಗುತ್ತಿಗೆದಾರ ಸಿದ್ದರಾಮನಗೌಡ, ಶ್ರೀನಿವಾಸಲು, ಉಮೇಶ್, ಗುಡಿಗಂಟೆ ಹನುಮಂತು, ಗುರುಮೂರ್ತಿ, ಪುರುಷೋತ್ತಮ ರೆಡ್ಡಿ ಇದ್ದರು.
ಓದಿ : ಕೋಟ್ಟಾ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ