ವಸತಿ ರಹಿತರಿಗೆ ಸೌಕರ್ಯ ಕಲ್ಪಿಸಲು ಕ್ರಮ

ಮೂಲ ಸೌಕರ್ಯ ಒದಗಿಸಲು ನಗರಸಭೆ ಶಾಸಕರ ನಿಧಿಯಲ್ಲಿ ಕ್ರಮ ಕೈಗೊಳ್ಳಲಾಗುವುದು

Team Udayavani, Feb 25, 2021, 6:52 PM IST

ವಸತಿ ರಹಿತರಿಗೆ ಸೌಕರ್ಯ ಕಲ್ಪಿಸಲು ಕ್ರಮ

ಯಾದಗಿರಿ: ಜಿಲ್ಲೆಯಲ್ಲಿ 12 ಸಾವಿರ ನಿವೇಶನ ರಹಿತರಿದ್ದು ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಜಮೀನು ಲಭ್ಯವಿಲ್ಲದರಿಂದ 18 ಎಕರೆ ಖಾಸಗಿ ಭೂಮಿ ಖರೀದಿಸಲು ಜಿಲ್ಲಾಡಳಿತ ಪ್ರಕ್ರಿಯೆ ಪ್ರಾರಂಭಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಹೇಳಿದರು.

ನಗರದ ಬಾಬು ಜಗಜೀವನರಾಮ್‌ ಭವನದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ನಿವೇಶನ ರಹಿತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಸಂಘಟನೆ ಕಳೆದ ಮೂರು ವರ್ಷಗಳಿಂದ ನಿವೇಶನ ರಹಿತರಿಗೆ ಭೂಮಿಗಾಗಿ ಹೋರಾಟ ನಡೆಸಿದ್ದು, ಸಮಾವೇಶದಲ್ಲಿ ಸಲ್ಲಿಸಿದ 559 ಕುಟುಂಬಗಳ ಅರ್ಹತೆ ಪಟ್ಟಿ ಪರಿಶೀಲಿಸಿ ಆದಷ್ಟು ಬೇಗ ಮಂಜೂರಾತಿ ನೀಡಲಾಗುವುದು. ಹೀಗಾಗಿ ಜಿಲ್ಲಾಡಳಿತ ಸರ್ಕಾರಿ ಇಲ್ಲವೇ ಖಾಸಗಿ ಭೂಮಿ ಖರೀದಿಸಿ ನೀಡಲು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶಾಸಕರ ಪರವಾಗಿ ಮನವಿ ಸ್ವೀಕರಿಸಿದ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ಈಗಾಗಲೇ ವಾರ್ಡ್‌ವಾರು ಜನರ ಸಮಸ್ಯೆಗಳ ಬಗ್ಗೆ ಜನರ ಜತೆ ಜನ ಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ನಿವೇಶನ ರಹಿತರ ಮತ್ತು ಬಾಡಿಗೆದಾರರ ಸಮಸ್ಯೆ ಮನವರಿಕೆಯಾಗಿದೆ. ಸರ್ಕಾರ ಮಟ್ಟದಲ್ಲಿ ಸ್ಲಂ ಜನರಿಗೆ ಭೂಮಿ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕೊಳಚೆ ಪ್ರದೇಶದಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ನಗರಸಭೆ ಶಾಸಕರ ನಿಧಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಸ್ಲಂನಲ್ಲಿ ನಿವೇಶನ ಇದ್ದವರಿಗೆ ಪ್ರಧಾನಿ ಆವಾಸ್‌ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂದರು. ಸ್ಲಂ ಜನಾಂದೋಲನ ರಾಜ್ಯಾಧ್ಯಕ್ಷ ಎ.ನರಸಿಂಹಮೂರ್ತಿ ಮಾತನಾಡಿ, ನಗರ ಪ್ರದೇಶದಲ್ಲಿ ಶೇ.50 ರಷ್ಟು ಜನರಿಗೆ ಮನೆಗಳಿಲ್ಲದೇ ಬಾಡಿಗೆ ಮನೆಯಲ್ಲಿ ಬದುಕುತ್ತಿರುವುದರಿಂದ ದುಡಿಮೆಯ ಶೇ.30ರಷ್ಟು ಹಣವನ್ನು ಬಾಡಿಗೆಗೆ ಮೀಸಲಿಡಬೇಕಾಗಿದೆ. ಹಾಗಾಗಿ ಜ್ವಲಂತ ಸಮಸ್ಯೆ ಪರಿಗಣಿಸಿ ಜನಸಂಖ್ಯೆಗೆ ಅನುಗುಣವಾಗಿ ನಗರ ಪ್ರದೇಶದಲ್ಲಿ ಭೂಮಿ ನೀಡಬೇಕು. ಕರ್ನಾಟಕ
ಭೂ ಮಂಜೂರಾತಿ ನಿಯಮ 1969 ಕಲಂ 18ಎ ಅನ್ವಯ ಜಿಲ್ಲಾಡಳಿತ ನಿವೇಶನ ರಹಿತರಿಗೆ ಸರ್ಕಾರಿ ಭೂಮಿ ಗುರುತಿಸಿ ನೀಡಲು ಒತ್ತಾಯಿಸಿದರು.

ಪೌರಾಯುಕ್ತ ಬಿ.ಟಿ. ನಾಯಕ, ಕಾರ್ಯಪಾಲಕ ಅಭಿಯಂತರು ಬಕ್ಕಪ್ಪ, ಸ್ಲಂ ವಿಭಾಗೀಯ ಸಂಚಾಲಕ ಜನಾರ್ದನ ಹಳ್ಳಿಬೆಂಚಿ, ಸಂಗೀತಾ ಹಪ್ಪಳ, ಹಣಮಂತ ಶಹಾಪುರಕರ್‌, ರೇಣುಕಾ ಸರಡಗಿ,ಮುನಿಯಪ್ಪ, ಆನಂದ ಚಟ್ಟೆರಕರ್‌ ಇದ್ದರು. ವಿವಿಧ ಕೊಳಚೆ ಪ್ರದೇಶಗಳಿಂದ ನಿವೇಶನ ರಹಿತರ ಪಾಲ್ಗೊಂಡರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.