ಹಸುಗಳನ್ನೇ ಮಾರಾಟ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರು!


Team Udayavani, Feb 26, 2021, 7:10 AM IST

ಹಸುಗಳನ್ನೇ ಮಾರಾಟ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರು!

ಕಾರ್ಕಳ: ಇಲ್ಲಿನ ನೀರೆ ಬೈಲೂರಿನ ವೃದ್ಧೆ ಸುಜಾತಾ ಪ್ರಭು ಅವರು ಹೈನುಗಾರಿಕೆಯನ್ನೇ ಮಾಡಿ ಮಕ್ಕಳನ್ನು ಎಂಜಿನಿಯರಿಂಗ್‌ ಓದಿಸಿದ ಸಾಧನೆ ಮಾಡಿದ್ದಾರೆ.

ಬೈಲೂರಿನ ಸುಬ್ರಾಯ ಪ್ರಭು- ಸುಜಾತಾ ದಂಪತಿಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು. ಅತ್ಯಲ್ಪ ಕೃಷಿ ಭೂಮಿಯಿದೆ. ಮಲ್ಲಿಗೆ ಕೃಷಿ ಮಾಡಿ ಜೀವನ ಸಾಗಿಸುತ್ತಿದ್ದರು. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ದಂಪತಿ ನೋಡಿಕೊಂಡಿದ್ದರು. ಹಿರಿಯ ಇಬ್ಬರು ಪುತ್ರಿಯರಲ್ಲಿ ಒಬ್ಬಳು ಶಿಕ್ಷಕಿ ಯಾದರೆ, ಇನ್ನೊಬ್ಬಳಿಗೆ ನರ್ಸಿಂಗ್‌ ಶಿಕ್ಷಣ ಕೊಡಿಸಿದ್ದರು.

2014ರಲ್ಲಿ ಸುಬ್ರಾಯ ಪ್ರಭುಗಳು ಅನಾರೋಗ್ಯದಿಂದ ನಿಧನ ಹೊಂದಿದರು. ನಿಧರಾಗುವ ಹೊತ್ತಿಗೆ ಕಿರಿಯರಿಬ್ಬರು ಪುತ್ರಿಯರಲ್ಲಿ ಒಬ್ಟಾಕೆ ಎಸೆಸೆಲ್ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆ ಬರೆಯುತ್ತಿದ್ದರು. ಪತಿಯ ನಿಧನದ ಬಳಿಕ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿತ್ತು. ಅವರ ಚಿಕಿತ್ಸೆಗೆ ವ್ಯಯಿಸಿದ್ದ 25 ಲಕ್ಷ ರೂ. ಸಾಲದ ಹೊರೆಯೊಂದಿಗೆ, ಮಕ್ಕಳ ಶಿಕ್ಷಣದ ಹೊರೆಯಿತ್ತು. ಆದರೆ ಅವರು ಕಂಗೆಡಲಿಲ್ಲ.

ಕಿರಿಯ ಮಕ್ಕಳು ಎಂಜಿನಿಯರಿಂಗ್‌ ಸೇರಿದಾಗ ಮಲ್ಲಿಗೆ ಹೂವು ಕಟ್ಟಲು ಜನರಿಲ್ಲದೆ, ಹೈನುಗಾರಿಕೆ ಅವಲಂಬಿಸಿದರು. ಅವರ ವಿದ್ಯಾಭ್ಯಾಸಕ್ಕೆ ಹಾಲು ಮಾರಾಟದಿಂದ ಬಂದ ಆದಾಯ ಅವಲಂಬಿಸಿದರು.

1.5 ಕಿ.ಮೀ. ನಿತ್ಯ ನಡಿಗೆ
ಅಶ್ವಿ‌ನಿ ಬೆಂಗಳೂರಿನ ಬಿಎಂಎಸ್‌ ಕಾಲೇಜಿನಲ್ಲಿ ಕೆಮಿಕಲ್‌ ಎಂಜಿನಿಯರಿಂಗ್‌ ಮಾಡಿದ್ದರೆ, ಕೃತಿಕಾ ಸುಳ್ಯದ ಕೆವಿಜಿ ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ಪೂರೈಸಿದ್ದಾರೆ. ಸರಕಾರಿ ಸೀಟು ಲಭಿಸಿದರೂ ಹಾಸ್ಟೆಲ್‌ ಇತ್ಯಾದಿ ಶುಲ್ಕ ಸೇರಿ ತಲಾ 6 ಲಕ್ಷ ರೂ. ವೆಚ್ಚವಾಗಿದೆ. ನಾಲ್ಕೈದು ಹಸುಗಳಿದ್ದ ಇವರು ನಿತ್ಯ 1.5 ಕಿ.ಮೀ. ನಡೆದು ಬೈಲೂರು ಡೈರಿಗೆ ಹಾಲು ಹಾಕುತ್ತಿದ್ದರು.

ಶಿಕ್ಷಣಕ್ಕಾಗಿ ಹಸು ಮಾರಾಟ
ವೃದ್ಧೆ ಸುಜಾತಾ ಅವರಿಗೆ ಈಗ 62ರ ಇಳಿವಯಸ್ಸು, 90ರ ವಯಸ್ಸಿನ ಅಜ್ಜಿ ಕೂಡ ಇದ್ದಾರೆ. ಅವರು ಕೂಡ ಕೈಲಾದಷ್ಟು ನೆರವು ನೀಡುತ್ತ ಬಂದಿದ್ದಾರೆ. ಇದೀಗ ಸಹಜವಾಗಿ ಆರೋಗ್ಯ ಸಮಸ್ಯೆ ಎದುರಾಗಿದೆ. ಜಾನುವಾರು ಪೋಷಣೆ ಸಾಧ್ಯವಾಗದೆ 1 ವರ್ಷದ ಹಿಂದೆ 5 ಹಸುಗಳನ್ನೂ ಮಾರಿ, ಮಕ್ಕಳ ಅಂತಿಮ ವರ್ಷದ ಶುಲ್ಕ 2 ಲಕ್ಷ ರೂ. ಪಾವತಿಸಿ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಉದ್ಯೋಗದ ನಿರೀಕ್ಷೆಯಲ್ಲಿ ಮಕ್ಕಳು
ಎಂಜಿನಿಯರಿಂಗ್‌ ಪೂರೈಸಿದ ಮಕ್ಕಳಲ್ಲಿ ಒಬ್ಟಾಕೆ ಗುತ್ತಿಗೆ ನೆಲೆಯಲ್ಲಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದರೆ, ಇನ್ನೊಬ್ಟಾಕೆ ಮನೆಯಲ್ಲಿದ್ದಾರೆ. ಇವರು ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಕಷ್ಟದ ಸಂದರ್ಭದಲ್ಲಿ ಕುಟುಂಬದಲ್ಲಿ ಹಲವು ಮಂದಿ ದಾನಿಗಳು ನೆರವು ನೀಡಿದ್ದಾರೆ.

ವಿಮಾನದಲ್ಲಿ ಕರೆದೊಯ್ಯುವಾಸೆ
ತಂದೆ ತಾಯಿ ನನಗಾಗಿ ತ್ಯಾಗ ಮಾಡಿದ್ದಾರೆ. ಅವರ ಋಣ ತೀರಿಸಬೇಕಿದೆ. ನಿರೀಕ್ಷಿತ ಉದ್ಯೋಗ ದೊರೆತಲ್ಲಿ ಅನಂತರ ಕಷ್ಟಪಟ್ಟು ಇಂಜಿನಿಯರಿಂಗ್‌ ಶಿಕ್ಷಣ ಕೊಡಿಸಿದ ತಾಯಿಯನ್ನು ಒಮ್ಮೆ ವಿಮಾನದಲ್ಲಿ ಕರೆದುಕೊಂಡು ಹೋಗುವ ಆಕಾಂಕ್ಷೆ ನನ್ನ ಕನಸಾಗಿದೆ.

-ಅಶ್ವಿ‌ನಿ

ಸಮಾಜಕ್ಕೆ ನೆರವಾಗುವ ಬಯಕೆ
ಉದ್ಯೋಗದ ಜತೆಗೆ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಕಾಂಕ್ಷೆ ಇದೆ. ಸಮಾಜದಲ್ಲಿರುವ ಬಡ ಕುಟುಂಬದ ಪ್ರತಿಭಾವಂತ ಹೆಣ್ಣುಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯಲು ಬಯಸಿದರೆ ಅವರಿಗೆ ಮಾರ್ಗದರ್ಶನ ನೀಡುವುದರ ಜತೆಗೆ ಶಿಕ್ಷಣದ ಖರ್ಚನ್ನೂ ಭರಿಸುವ ಚಿಂತನೆಯಿದೆ.

-ಕೃತಿಕಾ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.