ಉಳವಿ ಚೆನ್ನಬಸವೇಶ್ವರ ಮಹಾರಥೋತ್ಸವ ನಾಳೆ
ಭಕ್ತಾದಿಗಳಿಗೆ ಟ್ರಸ್ಟ್ ಕಮೀಟಿಯಿಂದ ಕೋವಿಡ್ ಪರೀಕ್ಷೆ
Team Udayavani, Feb 26, 2021, 4:42 PM IST
ಜೋಯಿಡಾ: ವೀರಶೈವರ ಪುಣ್ಯ ಕ್ಷೇತ್ರ ಉಳವಿಯಲ್ಲಿ ಫೆ.27 ರಂದು ಮಹಾರಥೋತ್ಸವ ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಾವಿರಾರು ಸಂಖ್ಯೆಯಲ್ಲಿ ಜನ ಗುಂಪುಗೂಡದಂತೆ ಮುನ್ನೆಚ್ಚರಿಕಾ ಕ್ರಮಕೈಗೊಂಡು ಸರಳರೀತಿಯಲ್ಲಿ ನಡೆಸುವುದಾಗಿ ಟ್ರಸ್ಟ್ಕಮೀಟಿ ಅಧ್ಯಕ್ಷ ಗಂಗಾಧರ ಕಿತ್ತೂರ ತಿಳಿಸಿದ್ದಾರೆ.
ಈಗಾಗಲೆ ದೂರದೂರದಿಂದ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ದೇವರದರ್ಶನಕ್ಕೆ ಸಾಲುಗಟ್ಟಿ ನಿಲ್ಲುವ ಮೂಲಕ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಆದರೆ ದೇವಸ್ಥಾನ ಕಮೀಟಿ ಸರಕಾರದ ಆದೇಶದಂತೆ ಕೊರೋನಾ ನಿಯಮ ಪಾಲನೆಗೆ ಭಕ್ತಾದಿಗಳಲ್ಲಿ ಎಚ್ಚರಿಕೆ ನೀಡುತ್ತಿದ್ದು, ಗುಂಪುಗೂಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಕಂಡುಬಂದಿದೆ.
ಉಳವಿ ಗ್ರಾಪಂ ಚೆನ್ನಬಸವೇಶ್ವರನ ಭಕ್ತಾದಿಗಳಿಗೆ ಜಾತ್ರಾ ಆವರಣದಲ್ಲಿ ಕುಡಿಯವ ನೀರು ಹಾಗೂ ಕಸದ ತೊಟ್ಟಿ ಇಟ್ಟು ಸ್ವತ್ಛತೆ ಕಾಪಾಡಿದೆ. ಉಳವಿ ಜಾತ್ರೆಯಲ್ಲಿ ಬಂದುಹೋಗುವ ಭಕ್ತಾದಿಗಳಿಗೆ ಹಾಗೂ ಎತ್ತುಗಳಿಗೆ ನೀರಿನ ಕೊರತೆ ಆಗದಂತೆ ಗ್ರಾಪಂ ಅಗತ್ಯ ಕ್ರಮಕೈಗೊಂಡಿದೆ. ಉಳವಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಚಕ್ಕಡಿಗಾಡಿ ಎತ್ತುಗಳಿಗೆ ಚಿಕಿತ್ಸೆ, ಔಷಧೋಪಚಾರಕ್ಕೆ ಪಶುಸಂಗೋಪನೆ ಇಲಾಖೆ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರೆ, ಭಕ್ತಾದಿಗಳ ಆರೋಗ್ಯ ತಪಾಸಣೆ ಹಾಗೂ ಕೋವಿಡ್ ಸಂಬಂಧಿ ಮುನ್ನೆಚ್ಚರಿಕಾ ಕ್ರಮಕ್ಕಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ.
ಚೆನ್ನಬಸವೇಶ್ವರರ ಜಾತ್ರೆಗೆ ಆಗಮಿಸುತ್ತಿರುವ ಎಲ್ಲಾ ಭಕ್ತಾದಿಗಳಿಗೆ ಉಳವಿ ಗ್ರಾಪಂ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಬಂದಂತಹ ಭಕ್ತಾದಿಗಳು ಕ್ಷೇತ್ರದಲ್ಲಿ ಸ್ವತ್ಛತೆ ಹಾಗೂ ಕೋವಿಡ್ ನಿಯಮ ಪಾಲಿಸುವಲ್ಲಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ