ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಪಡಿಕ್ಕಲ್‌ ಸತತ ಶತಕ; ಕೇರಳವನ್ನು ಕಾಡಿದ ಕರ್ನಾಟಕ


Team Udayavani, Feb 26, 2021, 11:34 PM IST

Untitled-2

ಬೆಂಗಳೂರು: “ಟಾಪ್‌ ಫಾರ್ಮ್’ನಲ್ಲಿರುವ ಆರಂಭಕಾರ ದೇವದತ್ತ ಪಡಿಕ್ಕಲ್‌ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಸತತ 2ನೇ ಶತಕ ಬಾರಿಸಿದ್ದಾರೆ. ಕರ್ನಾಟಕ ಹ್ಯಾಟ್ರಿಕ್‌ ಗೆಲುವು ಸಾಧಿಸಿದೆ. ಶುಕ್ರವಾರದ ಮುಖಾಮುಖೀಯಲ್ಲಿ ಆರ್‌. ಸಮರ್ಥ್ ಪಡೆ ಕೇರಳವನ್ನು 9 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿತು.

ಕರ್ನಾಟಕದ ಮಾಜಿ ಆಟಗಾರ ರಾಬಿನ್‌ ಉತ್ತಪ್ಪ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡರೂ, ಮುಂದಿನ ಓವರಿನಲ್ಲೇ ಸಂಜು ಸ್ಯಾಮ್ಸನ್‌ (3) ಔಟಾದರೂ ಕೇರಳ 8 ವಿಕೆಟಿಗೆ 277 ರನ್ನುಗಳ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು. ಜವಾಬಿತ್ತ ಕರ್ನಾಟಕ 45.3 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 279 ರನ್‌ ಬಾರಿಸಿ “ಸಿ’ ವಿಭಾಗದ ಅಗ್ರಸ್ಥಾನಿಯಾಯಿತು.

ಪಡಿಕ್ಕಲ್‌ ಪ್ರಚಂಡ ಬ್ಯಾಟಿಂಗ್‌ :

ಪ್ರಚಂಡ ಬ್ಯಾಟಿಂಗ್‌ ಮುಂದುವರಿಸಿದ ಪಡಿಕ್ಕಲ್‌ 126 ರನ್‌ ಬಾರಿಸಿ ಅಜೇಯರಾಗಿ ಉಳಿದರು (138 ಎಸೆತ, 13 ಬೌಂಡರಿ, 2 ಸಿಕ್ಸರ್‌). ನಾಯಕ ಆರ್‌. ಸಮರ್ಥ್ 51 ಎಸೆತ ಎದುರಿಸಿ 62 ರನ್‌ ಮಾಡಿದರು. ಇವರಿಂದ ಆರಂಭಿಕ ವಿಕೆಟಿಗೆ 99 ರನ್‌ ಒಟ್ಟುಗೂಡಿತು. ವನ್‌ಡೌನ್‌ ಬ್ಯಾಟ್ಸ್‌ಮನ್‌ ಕೆ. ಸಿದ್ಧಾರ್ಥ್ ಔಟಾಗದೆ 86 ರನ್‌ ಹೊಡೆದರು (84 ಎಸೆತ, 5 ಬೌಂಡರಿ, 3 ಸಿಕ್ಸರ್‌). ಮುರಿಯದ ದ್ವಿತೀಯ ವಿಕೆಟಿಗೆ 180 ರನ್‌ ಹರಿದು ಬಂತು.

ಪಡಿಕ್ಕಲ್‌ ಒಡಿಶಾ ವಿರುದ್ಧದ ಕಳೆದ ಪಂದ್ಯದಲ್ಲಿ 152 ರನ್ನುಗಳ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಕೂಟದ 4 ಪಂದ್ಯಗಳಿಂದ ಅವರ ರನ್‌ ಗಳಿಕೆ 427ಕ್ಕೆ ಏರಿದೆ.

ಕೇರಳ ಸರದಿಯಲ್ಲಿ ವತ್ಸಲ್‌ ಗೋವಿಂದ್‌ 95, ನಾಯಕ ಸಚಿನ್‌ ಬೇಬಿ 54, ಅಜರುದ್ದೀನ್‌ ಔಟಾಗದೆ 59 ರನ್‌ ಮಾಡಿದರು. ಉತ್ತಪ್ಪ ಅವರನ್ನು ಮೊದಲ ಎಸೆತದಲ್ಲೇ ಕೆಡವಿದ ಮಿಥುನ್‌ ಸಾಧನೆ 52ಕ್ಕೆ 5 ವಿಕೆಟ್‌. ಪ್ರಸಿದ್ಧ್ ಕೃಷ್ಣ 2 ವಿಕೆಟ್‌ ಕಿತ್ತರು.

ರವಿವಾರದ ಕೊನೆಯ ಲೀಗ್‌ ಪಂದ್ಯದಲ್ಲಿ ಕರ್ನಾಟಕ ತಂಡ ರೈಲ್ವೇಸ್‌ ವಿರುದ್ಧ ಆಡಲಿದೆ.

ಸಂಕ್ಷಿಪ್ತ ಸ್ಕೋರ್‌: ಕೇರಳ-8 ವಿಕೆಟಿಗೆ 277 (ವತ್ಸಲ್‌ ಗೋವಿಂದ್‌ 95, ಅಜರುದ್ದೀನ್‌ ಔಟಾಗದೆ 59, ಸಚಿನ್‌ ಬೇಬಿ 54, ಮಿಥುನ್‌ 52ಕ್ಕೆ 5, ಪ್ರಸಿದ್ಧ್ ಕೃಷ್ಣ 65ಕ್ಕೆ 2). ಕರ್ನಾಟಕ-45.3 ಓವರ್‌ಗಳಲ್ಲಿ ಒಂದು ವಿಕೆಟಿಗೆ 279 (ಪಡಿಕ್ಕಲ್‌ ಔಟಾಗದೆ 126, ಸಿದ್ಧಾರ್ಥ್ ಔಟಾಗದೆ 86, ಸಮರ್ಥ್ 62, ಜಲಜ್‌ ಸಕ್ಸೇನಾ 34ಕ್ಕೆ 1).

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.