ನಿಲ್ಲದ ಕೋವಿಡ್ ಮಹಾ ಮಾರುತ


Team Udayavani, Feb 27, 2021, 7:00 AM IST

ನಿಲ್ಲದ ಕೋವಿಡ್  ಮಹಾ ಮಾರುತ

ಮುಂಬಯಿ/ ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಸತತ 2ನೇ ದಿನವೂ 8 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್‌ಗಳು ದೃಢಪಟ್ಟಿದೆ. ಗುರುವಾರದ 24 ಗಂಟೆಗಳಲ್ಲಿ 8,702 ಮಂದಿಗೆ ಹೆಮ್ಮಾರಿ ತಗುಲಿದ್ದು, 56 ಸೋಂಕಿತರು ಜೀವತೆತ್ತಿದ್ದಾರೆ. 119 ದಿನಗಳ ಅನಂತರ ಮುಂಬಯಿ ಒಂದರಲ್ಲೇ 1,145 ಪ್ರಕರಣ ದಾಖಲಾಗಿದೆ.

ಸಚಿವರಿಗೆ ಕಂಟಕ: ಮಹಿಳೆ ಆತ್ಮಹತ್ಯೆ ಪ್ರಕರಣ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ದರ್ಶನ ಕೊಟ್ಟಿದ್ದ ಸಚಿವ, ಶಿವಸೇನೆ ಮುಖಂಡ ಸಂಜಯ್‌ ರಾಥೋಡ್‌ಗೆ ಕಂಟಕ ಎದುರಾಗಿದೆ. ಕರಾಂಜದ ಪೊಹರಾದೇವಿ ದೇಗುಲಕ್ಕೆ ಸಚಿವ ಭೇಟಿ ನೀಡಿದ್ದ ವೇಳೆ, ಒಬ್ಬ ಅರ್ಚಕ ಸೇರಿದಂತೆ 18 ಭಕ್ತರಿಗೆ ಪಾಸಿಟಿವ್‌ ದೃಢಪಟ್ಟಿರುವುದು ತಿಳಿದುಬಂದಿದೆ. 8 ಜಿಲ್ಲೆಗಳಲ್ಲಿನ ಲಾಕ್‌ಡೌನ್‌ ಅನ್ನು ರಾಜ್ಯಾದ್ಯಂತ ವಿಸ್ತರಿಸಲು ಸರಕಾರ ಹಿಂದೇಟು ಹಾಕುತ್ತಿದೆ. ಬದಲಾಗಿ, ರೈಲು- ಬಸ್‌ಗಳ ಸಂಖ್ಯೆ ಕಡಿತಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ- ತರಗತಿಗಳನ್ನು ಆನ್‌ಲೈನ್‌ ಮೂಲಕ ಮುಂದುವರಿಸಲು ನಿರ್ಧರಿಸಿದೆ.

ಬ್ರೆಜಿಲ್‌ಗೆ 2 ಕೋಟಿ ವ್ಯಾಕ್ಸಿನ್‌ :

ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆಯ 2 ಕೋಟಿ ಡೋಸ್‌ಗಳ ಖರೀದಿ ಒಪ್ಪಂದಕ್ಕೆ ಬ್ರೆಜಿಲ್‌ ಆರೋಗ್ಯ ಸಚಿವಾಲಯ ಸಹಿ ಹಾಕಿದೆ. ಮಾರ್ಚ್‌ ಅಥವಾ ಮೇ ವೇಳೆಗೆ ಭಾರತ ಲಸಿಕೆ ಪೂರೈಸಲಿದೆ. ಒಪ್ಪಂದದ ಒಟ್ಟು ಮೊತ್ತ 21.15 ಕೋಟಿ ರೂ. ಆಗಿದ್ದು, ಮಾರ್ಚ್‌ನಲ್ಲಿ ಮೊದಲ 80 ಲಕ್ಷ ಡೋಸ್‌ಗಳು ಬ್ರೆಜಿಲ್‌ ತಲುಪಲಿದೆ.

ಕೋವಿಡ್ ಪತ್ತೆಗೆ ಚಿಪ್‌ ರೆಡಿ :

ಕೋವಿಡ್ ಸೋಂಕು ದೃಢಪಡಿಸಲು ವಿಜ್ಞಾನಿಗಳು ಸ್ಟಾಂಪ್‌ ಗಾತ್ರದ ಚಿಪ್‌ ಸಿದ್ಧಗೊಳಿಸಿದ್ದು, ಸ್ಮಾರ್ಟ್‌ಫೋನ್‌ ಮೂಲಕ ಕೇವಲ 55 ನಿಮಿಷಗಳಲ್ಲಿ ಇದು ಫ‌ಲಿತಾಂಶ ಪ್ರಕಟಿಸುತ್ತದೆ. ಚಿಪ್‌ನಲ್ಲಿನ ಎಲೆಕ್ಟ್ರೊಕೆಮಿಕಲ್‌ ಸೆನ್ಸಾರ್‌ ಬಯೋಮಾರ್ಕರ್‌ಗೆ ಅಂಟಿಕೊಂಡ ವ್ಯಕ್ತಿಯ ರಕ್ತದ ಕಣವನ್ನು ಸ್ಕ್ಯಾನ್‌ ಮಾಡುವ ಮೂಲಕ ಕೊರೊನಾ ವೈರಾಣುವನ್ನು ದೃಢಪಡಿಸುತ್ತವೆ ಅಮೆರಿಕದ ರೈಸ್‌ ವಿವಿಯ ವಿಜ್ಞಾನಿಗಳ ಸಮರ್ಥನೆ.

ಮತ್ತೆ ಎದ್ದ ಕೋವಿಡ್ ಭೀತಿ :

ಕೇರಳ: ಗುರುವಾರದ 24 ಗಂಟೆಗಳಲ್ಲಿ 3,677 ಪ್ರಕರಣಗಳು ದೃಢಪಟ್ಟಿವೆ.

ಒಡಿಶ್ಸಾ: ಕೇರಳ, ಕರ್ನಾಟಕ ಸೇರಿದಂತೆ 12 ರಾಜ್ಯಗಳ ಪ್ರಯಾಣಿಕರಿಗೆ ಸ್ಕ್ರೀನಿಂಗ್‌ ಕಡ್ಡಾಯ: ಒಡಿಸ್ಸಾ

ರಾಜಸ್ಥಾನ: ಮಹಾರಾಷ್ಟ್ರ, ಕೇರಳದಿಂದ ಆಗಮಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದೆ.

ತಮಿಳುನಾಡು: ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಒಂದು ವಾರ ಕ್ವಾರಂಟೈನ್‌

ಮೋದಿ ಕೊಂಡಾಡಿದ ಡಬ್ಲ್ಯುಎಚ್‌ಒ :

“ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವದ 60ಕ್ಕೂ ಅಧಿಕ ರಾಷ್ಟ್ರಗಳಿಗೆ ಲಸಿಕೆ ಪೂರೈಸಿದೆ. ಜಗತ್ತಿನ ಇತರ ರಾಷ್ಟ್ರಗಳೂ ಭಾರತವನ್ನು ಅನುಸರಿಸಬೇಕು’ ಎಂದು ಡಬ್ಲ್ಯುಎಚ್‌ಒ ಪ್ರಧಾನ ನಿರ್ದೇಶಕ ಟೆಡ್ರಾಸ್‌ ಅಧಾನಾಮ್‌ ಘೆಬ್ರೆಯೆಸುಸ್‌ ಟ್ವೀಟ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.