ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ


Team Udayavani, Feb 27, 2021, 1:58 PM IST

ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ

ಮದ್ದೂರು: ಸರ್ಕಾರದಿಂದ ಬಿಡುಗಡೆಗೊಂಡಿರುವ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ (ಪಿಡಬ್ಲ್ಯುಡಿ ) ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಕೆಲ ಜಿಪಂ ಸದಸ್ಯರು, ಮುಖಂಡರು ಪ್ರತಿಭಟನೆ ನಡೆಸಿದರು.

ಮದ್ದೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಆಗಮಿಸಿದ ಸೋಮನಹಳ್ಳಿ ಜಿಪಂ ಸದಸ್ಯ ಬೋರಯ್ಯ, ಬೆಸಗರಹಳ್ಳಿ ಜಿಪಂ ಸದಸ್ಯ ಮರಿಹೆಗಡೆ ಹಾಗೂ ಚಿಕ್ಕಅರಸಿನಕೆರೆ ಮತ್ತುಕೆಸ್ತೂರು ಜಿಪಂ ವ್ಯಾಪ್ತಿಯ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಅಭಿವೃದ್ಧಿ ಕುಂಠಿತ: ಸಮ್ಮಿಶ್ರ ಸರ್ಕಾರದಲ್ಲಿ ಎಚ್‌ .ಡಿ. ಕುಮಾರಸ್ವಾಮಿ ಅವರುಮುಖ್ಯಮಂತ್ರಿಯಾಗಿದ್ದ ವೇಳೆ ರೇವಣ್ಣ ಅವರು41 ಮಂದಿ ಜಿಪಂ ಸದಸ್ಯರ ಪ್ರತಿ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಆದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಿಡುಗಡೆಯಾದ ಹಣ ಸರ್ಕಾರಕ್ಕೆ ವಾಪಸ್ಸಾಗಿ ಅಭಿವೃದ್ಧಿ ಕುಂಠಿತಗೊಳ್ಳಲು ಕಾರಣವಾಗಿದ್ದಾರೆಂದು ದೂರಿದರು.

ರಾಜಕೀಯ ಕೈವಾಡ: ಸಚಿವ ಗೋವಿಂದ ಕಾರಜೋಳ ಅವರನ್ನು ಜಿಪಂ ಸದಸ್ಯರ ನೇತೃತ್ವದತಂಡ ಭೇಟಿಯಾಗಿ ವಾಪಸ್ಸಾದ ಹಣವನ್ನು ಮತ್ತೆಇಲಾಖೆಗೆ ಕಳುಹಿಸಿದ್ದರೂ ಕೆಲ ಅಧಿಕಾರಿಗಳು 2ವರ್ಷಗಳಿಂದಲೂ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಕೈವಾಡ ಅಡಗಿದೆ ಎಂದು ಆರೋಪಿಸಿದರು.

ತಮ್ಮ ಅವಧಿ ಮುಗಿಯುವ ಹಂತದಲ್ಲಿದ್ದು ಅಷ್ಟರೊಳಗಾಗಿ ಚಾಮನಹಳ್ಳಿ, ಸೋಮನಹಳ್ಳಿ ಜಿಪಂ ಕ್ಷೇತ್ರಗಳಿಗೆ ಬಿಡುಗಡೆಯಾಗಿರುವ ತಲಾ ಒಂದು ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದರಲ್ಲದೇ ಕೆಲಸ ಆರಂಭಿಸದಿದ್ದಲ್ಲಿ ಸಚಿವರ ಮನೆ ಎದುರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ಧರಣಿ ಎಚ್ಚರಿಕೆ: ಸೋಮನಹಳ್ಳಿ ಜಿಪಂ ವ್ಯಾಪ್ತಿಯ ತೈಲೂರು, ಹುಣಸೆಮರದದೊಡ್ಡಿ, ತಿಪ್ಪೂರು, ತೊಪ್ಪನಹಳ್ಳಿ, ನೀಲಕಂಠನಹಳ್ಳಿ, ಕೂಳಗೆರೆಗ್ರಾಮಗಳನ್ನು ಆಯ್ಕೆಮಾಡಿದ್ದು ಅಭಿವೃದ್ಧಿಕಾರ್ಯಗಳಿಗೆ ಅಧಿಕಾರಿಗಳು ಮುಂದಾಗದಿದ್ದಲ್ಲಿಸದಸ್ಯರ ನೇತೃತ್ವದಲ್ಲಿ ನಿರಂತರ ಧರಣಿ ಕೈಗೊಳ್ಳಲಾಗುವುದೆಂದರು.

ತರಾಟೆ: ಗ್ರಾಮಗಳಲ್ಲಿ ಕೈಗೊಳ್ಳುವ ಗುದ್ದಲಿ ಪೂಜೆ ಕಾರ್ಯಕ್ರಮದ ವೇಳೆ ಜಿಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳನ್ನು ಶಿಷ್ಟಾಚಾರ ಉಲ್ಲಂಘಿಸಿ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗುತ್ತಿರುವ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ಇಇ ಮಹದೇವಪ್ಪ ಮಾತನಾಡಿ, ಕೆಲ ಗುತ್ತಿಗೆದಾರರ ವಿಳಂಬದಿಂದಾಗಿ ಕಾಮಗಾರಿಗಳು ನನೆಗುದಿಗೆ ಬೀಳಲು ಕಾರಣವಾಗಿದೆ. ಅವರ ಜತೆ ಚರ್ಚಿಸಿ ಫೆ.27ರಂದು ತಮ್ಮಗಳ ಸಮ್ಮುಖದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿರುವುದಾಗಿ ತಿಳಿಸಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ವೇಳೆ ಮುಖಂಡರಾದ ಹನುಮಂತೇಗೌಡ, ಮನುಕುಮಾರ್‌, ಮಾದೇಶ ಮತ್ತಿತರರಿದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.