ಯಾರನ್ನು ಕೇಳಿ ಮೈತ್ರಿ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ್ದೇನೆ


Team Udayavani, Feb 28, 2021, 12:27 PM IST

ಯಾರನ್ನು ಕೇಳಿ ಮೈತ್ರಿ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ್ದೇನೆ

ಮೈಸೂರು: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ಬಳಿಕ ಕಾಂಗ್ರೆಸ್‌ ಒಡೆದ ಮನೆಯಾಗಿದ್ದು, ಸಿದ್ದರಾಮಯ್ಯ ಅವರ ಸೂಚನೆ ಧಿಕ್ಕರಿಸಿದ ಆರೋಪದ ಮೇಲೆ ಶಾಸಕ ತನ್ವೀರ್‌ ಸೇಠ್ ವಿರುದ್ಧ ಕಾಂಗ್ರೆಸ್‌ ನಾಯಕರು ಗರಂ ಆಗಿದ್ದಾರೆ. ಈ ನಡುವೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ತನ್ವೀರ್‌ ಸೇಠ್ ಬೇಸರ ಹೊರ= ಹಾಕಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್ ರಮೇಶ್‌ ಕುಮಾರ್‌ ಅವರು ಯಾರನ್ನು ಕೇಳಿ ಮೈತ್ರಿ ಮಾಡಿಕೊಂಡಿದ್ದೀರಿ ಎಂಬ ಮೂಲ ಪ್ರಶ್ನೆ ಎತ್ತಿದ್ದಾರೆ. ಅವರ ಪ್ರಶ್ನೆಗೆ ನಿನ್ನೆಯೇ ಉತ್ತರ ನೀಡಿದ್ದೇನೆ. ಸಿದ್ದರಾಮಯ್ಯನವರೇ ಮೈತ್ರಿಗೆ ಮುಂದಾಗಿ ಎಂದು ಸೂಚನೆ ನೀಡಿದ್ದರು. ಮೇಯರ್‌ ಸ್ಥಾನ ಲಭಿಸುವಂತೆ ನೋಡಿಕೊಳ್ಳಿ ಎಂದಿದ್ದರು. ಅವರ ಪ್ರಶ್ನೆಗೆ ಉತ್ತರ ಲಭಿಸಿದೆ ಎಂದು ಕೊಳ್ಳುತ್ತೇನೆ, ದ್ವಂದ್ವ ನೀತಿ ನೀವು ಸೃಷ್ಟಿಸಿ ನನ್ನ ಮೇಲೆ ಯಾಕೆ ಆರೋಪ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಮಗು ಗಂಡಾದರೇನು, ಹೆಣ್ಣಾದರೇನು: ಉಪ ಮೇಯರ್‌ ಸ್ಥಾನಕ್ಕೆ ಯಾಕೆ ಒಪ್ಪಿಕೊಂಡಿರಿ, ನಾವು ಕೇಳಿದ್ದು ಮೇಯರ್‌ ಸ್ಥಾನ ಎನ್ನುತ್ತಾರೆ. ಮಗು ಬೇಕೆಂದು ನಿರ್ಧಾರ ಮಾಡಿದ ಮೇಲೆ ಗಂಡಾದರೇನು? ಹೆಣ್ಣಾದರೇನು ಸ್ವೀಕರಿಸಬೇಕಷ್ಟೆ. ಇವೆರಡರಲ್ಲಿ ನೀವು ಯಾವುದನ್ನು ಸ್ವೀಕರಿಸುತ್ತೀರಿ, ಯಾವುದನ್ನು ಬಿಡುತ್ತೀರಿ. ಈ ಸಂಸ್ಕೃತಿ, ದ್ವಂದ್ವ ನೀತಿಯನ್ನು ನೀವು ಸೃಷ್ಟಿ ಮಾಡಿಕೊಂಡು ನನ್ನ ಮೇಲೆ ಆರೋಪ ಮಾಡುತ್ತಿದ್ದೀರಿ. ನಾನು ಪಕ್ಷದಸಿದ್ಧಾಂತಕ್ಕೆ ಚ್ಯುತಿ ಬರುವ ಕೆಲಸ ಮಾಡಿಲ್ಲ. ನಮ್ಮ ಮುಂದೆ ಇದ್ದದ್ದು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ಮಾತ್ರ. ಅದನ್ನು ನಾವು ಸಾಧಿಸಿದ್ದೇವೆ. ಕೊನೆ ಕ್ಷಣದಲ್ಲಿ ಮಾಡಿದರೂ ಅಂದಮೇಲೆ ಯಾರ ಶಕ್ತಿ ಎಷ್ಟಿದೆ ಎಂಬುದನ್ನು ಅವರೇ ಬಿಂಬಿಸಿದ್ದಾರೆ. ಎಲ್ಲ ವಿಚಾರಗಳನ್ನು ಇಲ್ಲಿ ವಿಶ್ಲೇಷಣೆ ಮಾಡಲು ಆಗಲ್ಲ. ಹೆಚ್ಚಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆ ಮಾಡುವಂತಹ ವಿಚಾರವೂ ಅಲ್ಲ. ಪಕ್ಷ ನನಗೆ ವರದಿ ಕೇಳಿದೆ. ವರದಿ ಕೊಡಲು ಸಿದ್ಧ ಮಾಡಿಕೊಂಡಿದ್ದೇನೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದರ ನಂತರ ನನ್ನ ಸ್ಪಷ್ಟನೆ ನೀಡುತ್ತೇನೆ ಎಂದು ತಿಳಿಸಿದರು.

ಈ ಪ್ರಶ್ನೆಗೆ ನನ್ನ ಬಳಿ ಉತ್ತರ ಇಲ್ಲ.. :

ನಿಮ್ಮ ನಿರ್ಧಾರದಿಂದ ಸಿದ್ದರಾಮಯ್ಯನವರ ಪ್ರತಿಷ್ಠೆ ಹಾಳಾಯಿತು ಎಂಬ ಮಾತು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ತನ್ವೀರ್‌ ಸೇಠ್ ಈ ಪ್ರಶ್ನೆಗೆ ನನ್ನ ಬಳಿ ಉತ್ತರ ಇಲ್ಲ. ಪಕ್ಷದ ಅಧ್ಯಕ್ಷರು ಬೆಂಗಳೂರಿಗೆ ಬರಲು ಹೇಳಿದ್ದು, ಸೋಮವಾರ ವರದಿ ಸಮೇತ ಅವರನ್ನು ಭೇಟಿ ಮಾಡುತ್ತೇನೆ. ಎಲ್ಲ ವಿದ್ಯಮಾನಗಳನ್ನು ಚರ್ಚಿಸುತ್ತೇನೆ. ನಾನು ನನ್ನ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಬದ್ಧನಾಗಿದ್ದು, ನನ್ನ ಮೇಲೆ ಯಾವ ಕ್ರಮ ತೆಗೆದುಕೊಂಡರೂ ಸಿದ್ಧನಿದ್ದೇನೆ. ಬಹುಮಾನ ಕೊಡುತ್ತಾರೋ ಅಥವಾ ಶಿಕ್ಷೆ ಕೊಡುತ್ತಾರೋ ಅಥವಾ ಮತ್ತೂಬ್ಬರ ಮಾತಿಗೆ ನನ್ನ ಬಲಿ ಮಾಡುತ್ತಾರೋ ಎಲ್ಲದಕ್ಕೂ ನಾನು ಸಿದ್ಧವಿದ್ದೇನೆ ಎಂದು ತಿಳಿಸಿದರು.

ವೈಯಕ್ತಿಕವಾಗಿ ನನ್ನ ಮೇಲೆ ಕೆಲವು ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಹಣಕಾಸಿನ ವ್ಯವಹಾರ ನಡೆದಿದೆ, ಪಕ್ಷೇತರ ಅಭ್ಯರ್ಥಿಗಳನ್ನು ನಾನು ಕಳುಹಿಸಿಕೊಟ್ಟಿದ್ದೇನೆ, ಮತ್ತೂಂದು ಪಕ್ಷದ ನಾಯಕರನ್ನು ಖುಷಿ ಪಡಿಸುವ ಕೆಲಸ ಮಾಡಿದ್ದೇನೆ. ನಮ್ಮ ಪಕ್ಷದ ನಾಯಕರಿಗೆ ಅವಮಾನ ಮಾಡಲು ಮತ್ತೂಬ್ಬರೊಂದಿಗೆ ಕೈಜೋಡಿಸಿದ್ದೇನೆ ಎಂಬ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಈ ಕುರಿತು ಸತ್ಯ ಸಂಗತಿಗಳು ಹೊರ ಬರುವವರೆಗೆ ಹೋರಾಟ ಮುಂದುವರಿಯಲಿದೆ. ತನ್ವೀರ್‌ ಸೇಠ್ ಶಾಸಕ

ಟಾಪ್ ನ್ಯೂಸ್

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.