ಶ್ರೀಕಂಠನ ಹುಣ್ಣಿಮೆ ದರ್ಶನಕ್ಕೆ ಭಕ್ತ ಸಾಗರ


Team Udayavani, Feb 28, 2021, 12:32 PM IST

ಶ್ರೀಕಂಠನ ಹುಣ್ಣಿಮೆ ದರ್ಶನಕ್ಕೆ ಭಕ್ತ ಸಾಗರ

ನಂಜನಗೂಡು: ಕೋವಿಡ್ ಹಿನ್ನೆಲೆ 11 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಶ್ರೀಕಂಠೇಶ್ವರನ ದೈನಂದಿನ ಆದಾಯ 5 ಲಕ್ಷ ರೂ. ದಾಟಿದೆ. ಜೊತೆಗೆ ದಾಸೋಹ ಭವನದಲ್ಲಿ 15 ಸಾವಿರಕ್ಕೂ ಅಧಿಕ ಭಕ್ತರು ಪ್ರಸಾದ ಸವಿದಿದ್ದಾರೆ.

ತಿಂಗಳದ ಕೊನೆಯ ಶನಿವಾರ ಮಾಗಿ ಹುಣ್ಣಿಮೆ ಬಂದಿದ್ದು, ನಂಜನಗೂಡು ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಭಕ್ತ ಸಾಗರವೇ ನೆರೆದಿತ್ತು. ಶನಿವಾರ ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಭಾರೀ ಸಂಖ್ಯೆ ಯಲ್ಲಿ ಆಗಮಿಸಿದ್ದರು. ಹುಣ್ಣಿಮೆ ದಿನ ಶ್ರೇಷ್ಠ ಎಂದು ಭಾವಿಸಲಾಗಿದ್ದು,ಪ್ರತಿ ಹುಣ್ಣಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದು ಸಾಮಾನ್ಯವಾಗಿದೆ. ಆದರೆ, 11 ತಿಂಗಳಬಳಿಕ ಇದೇ ಮೊದಲ ಬಾರಿಗೆ ಬಗಿ ನಿಯಮಗಳು ಸಡಿಲವಾಗಿದ್ದರಿಂದ ಇಷ್ಟು ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಸುಮಾರು 25-30 ಸಾವಿರ ಮಂದಿ ಶ್ರೀಕಂಠೇಶ್ವರನ ದರ್ಶನ ಪಡೆದಿದ್ದಾರೆ. ಬೆಳಗ್ಗೆಯಿಂದಲೇ ಸಾಲಗಟ್ಟಿ ನಿಂತಿದ್ದ ಭಕ್ತರು ದರ್ಶನ ಪಡೆಯಲು ತುಸು ಹರಸಾಹಸ ಪಡೆಯಬೇಕಾಯಿತು.

ಶನಿವಾರ ನಸುಕಿನಿಂದಲೇ ದೇಗುಲದ ಸನ್ನಿಧಿಗೆ ಆಗಮಿಸಿದ್ದ ಭಕ್ತರು ಕಪಿಲೆ ನದಿ ಸ್ನಾನಘಟ್ಟದಲ್ಲಿ ಮಿಂದೆದ್ದರು. ಹರಕೆ ಹೊತ್ತಿದ್ದ ಭಕ್ತರು ಮುಡಿ ಸೇವೆಸಲ್ಲಿಸಿ ಹೊಳೆಯಲ್ಲಿ ಪುಣ್ಯಸ್ನಾನ ಮಾಡಿ ನಂಜುಡೇ ಶ್ವರನ ದರ್ಶನ ಪಡೆದು ಧನ್ಯತಾಭಾವ ಮೆರೆದರು. ವಿಶೇಷ ದರ್ಶನ: ಶನಿವಾರ 4 ಸಾವಿರಕ್ಕೂ ಅಧಿಕಭಕ್ತರು ತಲಾ 100 ರೂ. ಟಿಕೆಟ್‌ ಪಡೆದು ವಿಶೇಷ ದರ್ಶನ ಪಡೆದರೆ, 3 ಸಾವಿರಕ್ಕೂ ಹೆಚ್ಚು ಮಂದಿ ತಲಾ 50 ರೂ.ಟಿಕೆಟ್‌ ಪಡೆದಿದ್ದರು. 100 ರೂ.ಟಿಕೆಟ್‌ ಮೊತ್ತವೇ ಸುಮಾರು 4.3 ಲಕ್ಷ ರೂ. ಆಗಿದೆ. 50 ರೂ. ಟಿಕೆಟ್‌ ಮೊತ್ತವು 1.40 ಲಕ್ಷ ರೂ. ಸಂಗ್ರಹವಾಗಿದೆ. ಒಟ್ಟಾರೆ ಶನಿವಾರದ ದೈನಂದಿನ ಆದಾಯ 5 ಲಕ್ಷ ರೂ. ದಾಟಿದೆ.

ಉಳಿದಂತೆ 20,000 ಹೆಚ್ಚು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀಕಂಠೇಶ್ವರನನ್ನು ಕಣ್ತುಂಬಿಕೊಂಡರು. ನಂಜನಗೂಡಿನಲ್ಲಿ ಕೊರೊನಾ ಆರಂಭವಾದ ವರ್ಷದ ನಂತರ ಇದೇ ಮೊದಲ ಬಾರಿ ಬಿಗಿ ನಿಯಮಗಳು ಸಡಿಲವಾಗಿದ್ದು, ಹೀಗಾಗಿ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ದೇಗುಲಕ್ಕೆ ಧಾವಿಸಿತ್ತು.

ಪ್ರಸಾದ ಸ್ವೀಕಾರ: ದೇವಾಲಯದ ವತಿಯಿಂದ ಇದೀಗ ದಾಸೋಹ ಸೇವೆ ಪುನಾರಂಭವಾಗಿದ್ದು, ಶನಿವಾರ 15 ಸಾವಿರಕ್ಕೂ ಹೆಚ್ಚು ಭಕ್ತರು ಕೋವಿಡ್ ಭಯದ ನಡುವೆಯೂ ದಾಸೋಹ ಭವನಕ್ಕೆತೆರಳಿ ಶ್ರೀಕಂಠೇಶ್ವರನ ಪ್ರಸಾದವನ್ನು ಸ್ವೀಕರಿಸಿದ್ದಾರೆ ಎಂದುದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.