ಟಿಕ್ ಟಾಕ್ ಸ್ಟಾರ್ ಪೂಜಾ ಆತ್ಮಹತ್ಯೆ ಪ್ರಕರಣ: ಸಚಿವ ಸಂಜಯ್ ರಾಜೀನಾಮೆ
ಪೂಜಾ ಸಾವಿನಲ್ಲಿ ಸಂಜಯ್ ಪಾತ್ರವಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ನಡೆಸಿತು.
Team Udayavani, Feb 28, 2021, 5:54 PM IST
ಮುಂಬೈ : ಟಿಕ್ ಟಾಕ್ ಸ್ಟಾರ್ ಪೂಜಾ ಚವ್ಹಾಣ್ ಆತ್ಮಹತ್ಯೆಯ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಆರೋಪದ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರದ ಅರಣ್ಯ ಸಚಿವ ಶಿವಸೇನೆಯ ಸಂಜಯ್ ರಾಥೋಡ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು (ಫೆ.28) ಮಧ್ಯಾಹ್ನ ತಮ್ಮ ಪತ್ನಿ ಜತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ಮಾಡಿದ ಸಚಿವರು, ಕೆಲ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ರಾಜೀನಾಮೆ ಅಂಗೀಕರಿಸದಂತೆ ಮನವಿ ಮಾಡಿದರು.
ಏನಿದು ಪ್ರಕರಣ ?
ಫೆ.8 ರಂದು 22 ವರ್ಷದ ಪೂಜಾ ಚವ್ಹಾಣ್ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಳು. ಬೀಡ್ ಜಿಲ್ಲೆಯ ಪರ್ಲಿ ಗ್ರಾಮದ ಈಕೆ ಶಿಕ್ಷಣ ಪಡೆಯಲೆಂದು ಪುಣೆಯಲ್ಲಿ ತಂಗಿದ್ದರು. ಟಿಕ್ ಟಾಕ್ ನಲ್ಲಿ ಸ್ಟಾರ್ ಪಟ್ಟ ಪಡೆದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ರಹಸ್ಯವಾಗಿಯೇ ಉಳಿದಿದೆ. ಆದರೆ, ಪೂಜಾ ಆತ್ಮಹತ್ಯೆಯ ಪ್ರಕರಣದಲ್ಲಿ ಸಚಿವ ಸಂಜಯ್ ರಾಥೋಡ್ ಅವರ ಹೆಸರು ತಳುಕು ಹಾಕಿಕೊಂಡಿದೆ.
ಆತ್ಮಹತ್ಯೆ ಘಟನೆ ನಂತರ ರಾಥೋಡ್ ಜತೆಗಿನ ಪೂಜಾಳ ಕೆಲ ಖಾಸಗಿ ಫೋಟೊಗಳು ಹಾಗೂ ಆಡಿಯೋ ಕ್ಲಿಪ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಆತ್ಮಹತ್ಯೆಗೆ ಮುನ್ನ ಪೂಜಾಳಿಗೆ ಸಚಿವ ಸಂಜಯ್ ಹಲವು ಬಾರಿ ಕರೆ ಮಾಡಿದ್ದ. ಅವಳ ಸಾವಿನಲ್ಲಿ ಸಂಜಯ್ ಪಾತ್ರವಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ನಡೆಸಿತ್ತು.
ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಂಜಯ್ ರಾಥೋಡ್ ಅವರ ರಾಜೀನಾಮೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!