ಅಧ್ಯಾತ್ಮದ ಜೀರ್ಣೋದ್ಧಾರದಿಂದ ಸಂಸ್ಕಾರಯುತ ಬಾಳು: ರಘುನಾಥ ಕೆ. ಕೊಟ್ಟಾರಿ


Team Udayavani, Feb 28, 2021, 6:56 PM IST

ಅಧ್ಯಾತ್ಮದ ಜೀರ್ಣೋದ್ಧಾರದಿಂದ ಸಂಸ್ಕಾರಯುತ ಬಾಳು: ರಘುನಾಥ ಕೆ. ಕೊಟ್ಟಾರಿ

ಮುಂಬಯಿ: ಧರ್ಮ ಮತ್ತು ರಾಷ್ಟ್ರದ ಭವಿಷ್ಯದ ರಕ್ಷಣೆಗೆ ಯುವ ಪೀಳಿಗೆಯಲ್ಲಿ  ಪೂರ್ವಜರ ಆದರ್ಶ ಜೀವನದ ಅರಿವು ಮೂಡಿಸಬೇಕು. ಮಕ್ಕಳಲ್ಲಿ ಆಧ್ಯಾತ್ಮದ ಜ್ಞಾನವನ್ನು ರೂಢಿಸುವುದರೊಂದಿಗೆ ಧರ್ಮ ರಕ್ಷಣೆಯ ನಿಟ್ಟಿನಲ್ಲಿ ಈ ದೇವಸ್ಥಾನದ ಸಮಿತಿ ಶ್ರಮಿಸುತ್ತಿದೆ. ಸಚ್ಚಾರಿತ್ರÂದ ಕಲಶಾಭಿಷೇಕ ಮತ್ತು ಅಧ್ಯಾತ್ಮದ ಜೀರ್ಣೋದ್ಧಾರ ಆದಾಗಲೇ ಸಂಸ್ಕಾರಯುತ ಬಾಳು ಸಾಧ್ಯ. ಆದ್ದರಿಂದ ಯುವ ಪೀಳಿಗೆಗೆ ಎಲ್ಲ ಆಚರಣೆಗಳನ್ನು ತಿಳಿಯುವ ಧರ್ಮಾಚರಣೆ ಪದ್ಧತಿ ತಿಳಿ ಹೇಳಿದಾಗಲೇ ಸಮಗ್ರ ಜೀವರಾಶಿಯ ಉದ್ಧಾರ ಸಾಧ್ಯ ಎಂದು ಮಲಾಡ್‌ ಪೂರ್ವದ ಕುರಾರ್‌ ವಿಲೇಜ್‌ನ ಶ್ರೀ ದುರ್ಗಾಪರಮೇಶ್ವರೀ ಸಮಿತಿಯ ಅಧ್ಯಕ್ಷ ರಘುನಾಥ ಕೆ. ಕೊಟ್ಟಾರಿ ತಿಳಿಸಿದರು.

ಮಲಾಡ್‌ ಪೂರ್ವದ ಕುರಾರ್‌ ವಿಲೇಜ್‌ ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ಸಮಿತಿ ಸಂಚಾಲಕತ್ವದ ಶ್ರೀ ದುರ್ಗಾಪರಮೇಶ್ವರೀ ಮಂದಿರದಲ್ಲಿ ನಡೆದ ಮಂದಿರದ 43ನೇ ವಾರ್ಷಿಕೋತ್ಸವದಲ್ಲಿ  ಮಾತನಾಡಿದ ಅವರು, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮಹಾನಗರದಲ್ಲಿನ ಭಕ್ತರ ಪುಣ್ಯಕ್ಷೇತ್ರವಾಗಿದೆ. ಕಳೆದ ಸುಮಾರು ನಾಲ್ಕೂವರೆ ದಶಕಗಳಿಂದ ಇಲ್ಲಿ ತುಳುನಾಡ ವೈಭವದ ಸಂಸ್ಕೃತಿ, ಸಂಪ್ರದಾಯಗಳೊಂದಿಗೆ ಭ್ರಮಾರಂಭಿಕೆಯ ಆರಾಧನೆಯನ್ನು ಶಾಸ್ತ್ರೋಕ್ತವಾಗಿ ನಡೆಸಲಾಗುತ್ತಿದೆ. ಆ ಮೂಲಕ ಅದೆಷ್ಟೋ ಭಕ್ತರು ಶ್ರೀ ದುರ್ಗೆಯ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ ಎಂದು ತಿಳಿಸಿ, ಶುಭ ಹಾರೈಸಿದರು.

14 ವಾರ್ಷಿಕ ಪುನಃಪ್ರತಿಷ್ಠಾಪನ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಬೆಳಗ್ಗೆಯಿಂದ ಸಂಪ್ರೋಕ್ಷಣೆ, ಪ್ರಧಾನ ಹೋಮ, ನವಕಲಶಾರಾಧನೆ, ಕಲಶಾಭಿಷೇಕ, ಮಹಾ ಮಂತ್ರಾಕ್ಷತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಬ್ರಹ್ಮಶ್ರೀ ಶಂಕರನಾರಾಯಣ ತಂತ್ರಿ ಡೊಂಬಿವಲಿ ಅವರ ಪ್ರಧಾನ ಪೌರೋಹಿತ್ಯದಲ್ಲಿ ನಡೆಸಲಾಯಿತು. ಮಂದಿರದ ಪ್ರಧಾನ ಅರ್ಚಕ ಸೂಡ ರಾಘವೇಂದ್ರ ಭಟ್‌ ಅವರು ಮಂದಿರದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿದ್ದ ಪ್ರೇಮನಾಥ ಎಸ್‌. ಸಾಲ್ಯಾನ್‌ ಮತ್ತು ಕವಿತಾ ಪ್ರೇಮನಾಥ್‌ ದಂಪತಿಯನ್ನು ವಿಶೇಷವಾಗಿ ಹಾಗೂ ಮತ್ತಿತರ ಗಣ್ಯರನ್ನು ಮಹಾ ಪ್ರಸಾದವನ್ನಿತ್ತು ಗೌರವಿಸಿದರು. ಪುರೋಹಿತ ವರ್ಗದವರು ವಿವಿಧ ಪೂಜೆಗಳನ್ನು ನಡೆಸಿ ಭಕ್ತರನ್ನು ಹರಸಿದರು.

ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಎಸ್‌. ಬಿ. ಕೋಟ್ಯಾನ್‌ ಪ್ರಾರ್ಥನೆಗೈದರು. ಗಿರೀಶ್‌ ಬಿ. ಸುವರ್ಣ ಮತ್ತು ನೀಶಾ ಗಿರೀಶ್‌ ದಂಪತಿ ಪೂಜಾವಿಧಿಗಳ ಯಜಮಾನತ್ವ ವಹಿಸಿದ್ದರು. ಮಹಿಳಾ ಮಂಡಳಿಯ ಸದಸ್ಯೆಯರಿಂದ ಮತ್ತು ಭಕ್ತರಿಂದ ಭಜನ ಕಾರ್ಯಕ್ರಮ ನಡೆಯಿತು.

ಸಮಿತಿಯ ಅಧ್ಯಕ್ಷ ರಘುನಾಥ ಕೆ. ಕೊಟ್ಟಾರಿ ಮತ್ತು ಆಶಾ ರಘುನಾಥ್‌ ದಂಪತಿ, ಸಮಿತಿಯ ಗೌರವ ಕೋಶಾಧಿಕಾರಿ ಬಾಬು ಎಂ. ಸುವರ್ಣ ಮತ್ತಿತರ ಪದಾಧಿಕಾರಿಗಳ, ಕಾರ್ಯಕಾರಿ ಸಮಿತಿಯ ಸದಸ್ಯರು, ವಿಶೇಷ ಆಮಂತ್ರಿತ ಸದಸ್ಯರು, ಸಲಹೆಗಾರರು, ಮಹಿಳಾ ಮಂಡಳಿಯ ಸದಸ್ಯೆಯರು, ಸದಸ್ಯರು ವಿವಿಧ ಪೂಜಾ ಸೇವೆಗಳನ್ನು ನೆರವೇರಿಸಿದರು. ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ತೀರ್ಥಪ್ರಸಾದ ಸ್ವೀಕರಿಸಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮತ್ತು ಶ್ರೀ ಗಣಪತಿ ದೇವರ ಕೃಪೆಗೆ ಪಾತ್ರರಾದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ವಿವಿಧ ಪೂಜಾ ಕಾರ್ಯಗಳು ನಡೆದವು.

ಚಿತ್ರ – ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.