ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಅಭಿಯಾನ : 9 ಗಂಟೆಯಿಂದ ನೋಂದಣಿ ಪ್ರಾರಂಭ
Team Udayavani, Feb 28, 2021, 9:44 PM IST
ನವದೆಹಲಿ (ಫೆ.28): ದೇಶಾದ್ಯಂತ ನಾಳೆಯಿಂದ (ಮಾರ್ಚ್ 1) 2ನೇ ಹಂತದ ಕೋವಿಡ್ 19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿರುವ ಕೇಂದ್ರ ಸರ್ಕಾರ, ಇಂದು ಲಸಿಕೆ ಪಡೆಯಲು ನೋಂದಣಿಗಾಗಿ ಬಳಕೆದಾರರ ಕೈಪಿಡಿ ಬಿಡುಗಡೆ ಮಾಡಿದೆ.
ಭಾರತದಲ್ಲಿ ಕೋವಿಡ್ ಹರಡುವಿಕೆ ತಡೆಗಟ್ಟುವಲ್ಲಿ ಸರ್ಕಾರ ಕೈಗೊಂಡ ಮುನ್ನೆಚ್ಚರಿಕೆ ಕ್ರಮ ಹಾಗೂ ತಳಮಟ್ಟದ ಕಾರ್ಯಗಳು ಸಹಕಾರಿಯಾಗಿವೆ ಎಂದು ಕೈಪಿಡಿಯಲ್ಲಿ ಸರ್ಕಾರ ಹೇಳಿಕೊಂಡಿದೆ. ನಾಳೆ(ಮಾರ್ಚ್ 1) ಬೆಳಿಗ್ಗೆ 9 ಗಂಟೆಯಿಂದ ಕೋವಿನ್ 2.0 ಪೋರ್ಟಲ್ನಲ್ಲಿ ನೋಂದಣಿ ಕಾರ್ಯ ಶುರುವಾಗಲಿದೆ. ಹೆಚ್ಚಿನ ಮಾಹಿತಿಗಾಗಿ cowin.gov.in ಭೇಟಿ ನೀಡಬಹುದೆಂದು ಕೇಂದ್ರ ಸರ್ಕಾರ ಕೈಪಿಡಿಯಲ್ಲಿ ತಿಳಿಸಿದೆ.
ಆಯುಷ್ಮಾನ್ ಭಾರತ್ (PMJAY) ಯೋಜನೆಯಡಿ 10,000 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು,ಹಾಗೂ ಸಿಜಿಹೆಚ್ಎಸ್ ಯೋಜನೆಯಡಿಯಲ್ಲಿ 600 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು ಮತ್ತು ಆಯಾ ರಾಜ್ಯ ಸರ್ಕಾರದ ಯೋಜನೆಗಳ ಅಡಿಯಲ್ಲಿ ಇತರೆ ಖಾಸಗಿ ಆಸ್ಪತ್ರೆಗಳು ವ್ಯಾಕ್ಸಿನೇಷನ್ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ.
ಇದನ್ನೂ ಓದಿ:ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್
ಈ ಹಂತದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ 1 ಡೋಸ್ಗೆ 250 ರು. ಪಾವತಿಸಬೇಕು.
ಆರು ವಾರಗಳ ಕಾಲ ನಡೆಯಲಿರುವ ಎರಡನೇ ಹಂತದ ಲಸಿಕಾ ಅಭಿಯಾನದಲ್ಲಿ 45 ವರ್ಷ ಮೇಲ್ಪಟ್ಟವರು ಹಾಗೂ 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದೆ. ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರು ಹಾಗೂ 59 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು. ಆದರೆ, ಇವರು ಈ ಹಿಂದೆ ಚಿಕತ್ಸೆ ಪಡೆದ ದಾಖಲೆಗಳನ್ನು ತೋರಿಸಬೇಕು. ಉದಾಹರಣೆಗೆ ಲಸಿಕೆ ಪಡೆಯಲು ಇಚ್ಛಿಸಿದ ವ್ಯಕ್ತಿ ಕಳೆದ ವರ್ಷ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದರೆ ಅದರ ದಾಖಲೆಗಳನ್ನು ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ