ರೈತರೊಂದಿಗೆ ಸಂವಾದ ನಡೆಸಿ ಕಾಯ್ದೆ ಜಾರಿಗೊಳಿಸಿ


Team Udayavani, Mar 1, 2021, 1:48 PM IST

ರೈತರೊಂದಿಗೆ ಸಂವಾದ ನಡೆಸಿ ಕಾಯ್ದೆ ಜಾರಿಗೊಳಿಸಿ

ಚಿಕ್ಕಬಳ್ಳಾಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಯಾವುದೇ ಸಮಸ್ಯೆಗಳುಇದ್ದರೂ ಸಹ ಅದನ್ನು ಸಂವಾದದ ಮೂಲಕ ಬಗೆಹರಿಸಬಹುದಾಗಿದೆ. ಲಾಠಿ ಪ್ರಹಾರಮತ್ತು ಫೈರಿಂಗ್‌ ಮಾಡುವುದರಿಂದ ಸಮಸ್ಯೆಗಳು ಪರಿಹಾರ ಆಗುವುದಿಲ್ಲ. ಸಂವಾದ ಮಾಡದೆ ಕೃಷಿ ಕಾಯ್ದೆ ಜಾರಿಗೊಳಿಸಿದ್ದರಿಂದ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ ಎಂದು 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಕೆ.ಅಮರನಾರಾಯಣ್‌ ತಿಳಿಸಿದರು.

8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಸ್ಯೆ ಎಷ್ಟೇ ತೀವ್ರತೆಯಾಗಿದ್ದರೂ ಸಹ ಇತ್ಯರ್ಥ ಮಾಡಬಹುದು. ಅದಕ್ಕಾಗಿ ಸಂವಾದ ಬಹಳ ಮುಖ್ಯವಾಗಿರುತ್ತದೆ ಎಂದರು.

ಸಹಮತ: ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿ ಸಂವಾದಕ್ಕಿದ್ದು, ಹಾವೇರಿಯಲ್ಲಿರಸಗೊಬ್ಬರಕ್ಕಾಗಿ ಹೋರಾಟ ನಡೆಸಿದ ರೈತರ ಮೇಲೆ ಗುಂಡಿನ ದಾಳಿಯಾದರೆ ಅಂದು ದಾವಣಗೆರೆಯಲ್ಲಿ ಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆ ಮಾಡಿದ ಮನವಿಗೆ ರೈತರು ಸಹಮತ ವ್ಯಕ್ತಪಡಿಸಿವಾಪಸ್‌ ತೆರಳಿದರು ಎಂದು ಬೆಳಕಿಗೆ ಚೆಲ್ಲಿದರು.

ದೆಹಲಿ ಘಟನೆ ನಡೆಯುತ್ತಿರಲಿಲ್ಲ: ರೈತರ ಅಭಿವೃದ್ಧಿಗೆಂದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿಲಾಗಿದೆಎನ್ನುತ್ತಾರೆ. ಆದರೆ ರೈತರು ಇದರ ವಿರುದ್ಧಸತತವಾಗಿ ಬೀದಿಗಿಳಿದು ಹೋರಾಟನಡೆಸುತ್ತಿದ್ದಾರೆ. ಜಾರಿಗೊಳಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದರೆ ಬಹುಶಃದೆಹಲಿಯ ಘಟನೆ ನಡೆಯುತ್ತಿರಲಿಲ್ಲಎಂದರು.

ಸಿಲಿಕಾನ್‌ ಸಿಟಿ ಎಂದು ಖ್ಯಾತಿ ಹೊಂದಿರುವ ಬೆಂಗಳೂರು ನಗರ ಪ್ರದೇಶದಲ್ಲಿ ಕಾಂಕ್ರೀಟ್‌ ರಸ್ತೆಗಳನ್ನು ನಿರ್ಮಾಣ ಮಾಡುವತೆಪದಲ್ಲಿ ಗಿಡಮರಗಳನ್ನು ಕಟಾವುಮಾಡುತ್ತಿದ್ದು, ಇದರ ಪರಿಣಾಮವನ್ನುಬೆಂಗಳೂರಿಗರು ಎದುರಿಸುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.

ಗಂಡಾಂತರ: ಕಾವೇರಿ ಕಣಿವೆಯಲ್ಲಿ ನೀರು ಇಲ್ಲದಿದ್ದರೆ ಬೆಂಗಳೂರಿನ ನಿವಾಸಿಗಳು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣ ವಾಗಲಿದೆ. ಪರಿಸರ ನಾಶದಿಂದ ಆಗುತ್ತಿರುವದುಷ್ಪರಿಣಾಮಗಳ ಕುರಿತು ಈಗಾಗಲೇವಿಜ್ಞಾನಿಗಳು ಎಚ್ಚರಿಸಿದ್ದು, ಮುಂದಿನದಿನಗಳಲ್ಲಿ ಬೆಂಗಳೂರಿಗೆ ಗಂಡಾಂತರ ಕಾದಿದೆ ಎಂದು ಪುನರುಚ್ಚರಿಸಿದರು.

ಈ ಸಂದರ್ಭದಲ್ಲಿ ಶಾಂತ ವಿದ್ಯಾ ಸಂಸ್ಥೆಮುಖ್ಯ ಆಡಳಿತಾಧಿಕಾರಿ ಡಾ.ಕೋಡಿರಂಗಪ್ಪ, ಹಿರಿಯ ಸಾಹಿತಿ ಎನ್‌.ಸಂಜೀವಪ್ಪ, ಜಿಲ್ಲಾ ಕಸಪ ಅಧ್ಯಕ್ಷ ಡಾ.ಕೈವಾರ ಶ್ರೀನಿವಾಸ್‌ ಉಪಸ್ಥಿತರಿದ್ದರು.

ಸಮಸ್ಯೆ ಇತ್ಯರ್ಥಕ್ಕೆ ಸಕಾರಾತ್ಮಕ ಸ್ಪಂದನೆ ಅಗತ್ಯ :

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಯೋಜನೆಯಿಂದ ಜನವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಮಸ್ಯೆಯನ್ನು ಬಗೆಹರಿಸಲು ಸಕಾರಾತ್ಮಕವಾಗಿ ಸ್ಪಂದಿಸಬೇಕಾಗಿದೆ ಎಂದು ಸಮ್ಮೇಳನಾಧ್ಯಕ್ಷ ಕೆ. ಅಮರನಾರಾಯಣ ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ಪ್ರತಿಯೊಬ್ಬರು ಗಿಡಮರಗಳನ್ನು ಬೆಳೆಸಿ ಕೋಟಿನಾಟಿ ಅಭಿಯಾನ ಯಶಸ್ವಿಗೊಳಿಸಿ ಕೋಟಿ ಗಿಡಗಳನ್ನು ನಾಟಿ ಮಾಡಿ ಪೋಷಣೆ ಮಾಡಿದರೆ ಮುಂದಿನ 10 ವರ್ಷಗಳಲ್ಲಿಜಿಲ್ಲೆ ಮಳೆನಾಡು ಪ್ರದೇಶವಾಗಲಿದ್ದು, ಈ ಭಾಗದಲ್ಲಿರುವ ನದಿಗಳು ಹರಿದುರೈತರು ಮತ್ತು ಜನಸಾಮಾನ್ಯರುಸಮೃದ್ಧವಾಗಿ ಜೀವನ ನಡೆಸುವುದರಲ್ಲಿ ಅನುಮಾನವಿಲ್ಲ ಎಂದರು.

ಕನ್ನಡ ಭಾಷೆ ವಿಷಯದಲ್ಲಿಮುಕ್ತ ಮನಸ್ಸಿನಿಂದ ಇರಬೇಕು.ಕೇವಲ ಆದೇಶ ದಿಂದ ಕನ್ನಡಭಾಷಾಭಿವೃದ್ಧಿ ಮಾಡುವ ಬದಲಿಗೆ ಇಚ್ಚಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಗಡಿ ಪ್ರದೇಶಗಳಲ್ಲಿರುವ ಸರ್ಕಾರಿಶಾಲೆಗಳನ್ನು ಗಡಿ ಪ್ರದೇಶ ಅಭಿವೃದ್ಧಿಪ್ರಾಧಿಕಾರದಿಂದ ನೆರವು ಪಡೆದು ಅಭಿವೃದ್ಧಿಗೊಳಿಸಬೇಕು. ಕೆ.ಅಮರನಾರಾಯಣ, ಸಮ್ಮೇಳನಾಧ್ಯಕ್ಷ

ಟಾಪ್ ನ್ಯೂಸ್

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.