ಮಲೆನಾಡು ಕಲಾವಿದರ ಆಗರ: ಸಚ್ಚಿದಾನಂದಮೂರ್ತಿ


Team Udayavani, Mar 1, 2021, 4:37 PM IST

Sachidanad murthi

ಶೃಂಗೇರಿ: ಮಲೆನಾಡು ಕಲಾವಿದರ ಮತ್ತು ಸಾಹಿತಿಗಳ ಆಗರವಾಗಿದ್ದು, ಇಲ್ಲಿ ಕಲೆ, ಸಂಸ್ಕೃತಿ ಎಲ್ಲೆಡೆಯೂ ಇದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್‌.ಎಸ್‌. ಸಚ್ಚಿದಾನಂದಮೂರ್ತಿ ಹೇಳಿದರು.

ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರ ಟ್ರಸ್ಟ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗಾಯತ್ರಿ ಸೇವಾ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ವೈಕುಂಠಪುರದಲ್ಲಿ ಆಯೋಜಿಸಿರುವ 17 ನೇ ವರ್ಷದ ಮಲೆನಾಡು ಉತ್ಸವವನ್ನು ವರಲಿನಲ್ಲಿ ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಗರದ ಬದುಕು ಸದಾ ಒತ್ತಡದಿಂದಾಗಿ ಯಾಂತ್ರಿಕವಾಗುತ್ತಾ ನಮ್ಮ ಸಾಂಸ್ಕೃತಿಕ ಪ್ರಜ್ಞೆ ಕೂಡ ಸೃಜನಶೀಲತೆಯನ್ನು ಕಳೆದುಕೊಳ್ಳುತ್ತಿದೆ. ಆದರೆ  ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ಬುದುಕು ದಾಂಗುಡಿ ಇಡುತ್ತಿದ್ದರೂ ಸಂಸ್ಕೃತಿ ಮತ್ತು ಸೌಜನ್ಯ ಗ್ರಾಮದಲ್ಲಿ ಇನ್ನೂ ಉಳಿದು ಬೆಳೆದು ಬರುತ್ತಿದೆ. ನಾಡಿಗೆ ಹಲವು ವಿಶಿಷ್ಟ ವ್ಯಕ್ತಿಗಳು ಈ ಭಾಗದಿಂದ ಸೃಜನಶೀಲರಾಗಿ ಸಾಂಸ್ಕೃತಿಕ ಕ್ರಿಯಾಶೀಲತೆಯಲ್ಲಿ ತೊಡಗಿಕೊಂಡಿದ್ದಾರೆ ಎಂದರು.

ಉತ್ಸವದ ಸಮರ್ಪಣೆಯ ಗೌರವವನ್ನು ಸ್ವೀಕರಿಸಿದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸದಸ್ಯ ಗಾಯತ್ರಿ ಸೇವಾ ಪ್ರತಿಷ್ಠಾನದ ಪ್ರವರ್ತಕ ಡಾ.ರಾಘವೇಂದ್ರ ಭಟ್‌ ಬೆಟ್ಟಗೇರಿ ಮಾತನಾಡಿ, ಮಲೆನಾಡಿನ ಕಟ್ಟಕಡೆಯ ಹಳ್ಳಿಯನ್ನು ತಲುಪಿ ಅಲಲ್ಲಿ ಸಾಂಸ್ಕೃತಿಕ ವಾತಾವರಣ ನಿರ್ಮಿಸುತ್ತಾ ಊರಿಂದ ಊರಿಗೆ ಸಾಗುತ್ತಿರುವ ಮಲೆನಾಡು ಉತ್ಸವವು ನಿತ್ಯೋತ್ಸವವಾಗಲಿ ಎಂದರು.

ಈ ಸಂದರ್ಭ ಕುವೆಂಪು ವಿ.ವಿ ಯ ಸ್ವರ್ಣ ಪದಕ ವಿಜೇತೆ ಶಾಶ್ವತಿಯವರನ್ನು ಯುವ ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಶ್ವತಿ, ಮಕ್ಕಳನ್ನು ಅವರ ಆಯ್ಕೆಯಂತೆ ಓದಲು ಬಿಡಬೇಕು. ಅವರ ಮೇಲೆ ಕಲಿಕೆಯ ವಿಚಾರದಲ್ಲಿ ಉತ್ತಡವನನು ಹೇರಬಾರದು. ಇದರಿಂದ ವಿದ್ಯಾರ್ಥಿಯೊಬ್ಬನ ನೈಜ ಪ್ರತಿಭೆ ಆನಾವರಣಗೊಳ್ಳಲು ನೆರವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶತಾಯುಷಿ ನಾಟಿ ವೈದ್ಯ ಸಿಡ್ಲುಮನೆ ಸುಬ್ಬಣ್ಣ ಹೆಗ್ಗಡೆ ಮಾತನಾಡಿ, ಊರಿನ ಹಬ್ಬವಾಗಿ ಎಲ್ಲರೂ ಒಂದಾಗಿ ಬಾಳಲು ಇಂತಹ ಉತ್ಸವಗಳು ಮಾದರಿಯಾಗಿದ್ದು, ಸಂತಸ ತಂದಿದೆ ಎಂದರು. ಸಮಾರಂಭದಲ್ಲಿ ತಾಪಂ ಉಪಾಧ್ಯಕ್ಷೆ ಚಂದ್ರಾವತಿ, ಕೂತಗೋಡು ಗ್ರಾ.ಪಂ ಅಧ್ಯಕ್ಷೆ ನಯನ, ಸದಸ್ಯೆ ಚಂದ್ರಾವತಿ ಉಪಸ್ಥಿತರಿದ್ದರು.

ನಾಟಕ ಪ್ರದರ್ಶನ: ಮಲೆನಾಡು ಉತ್ಸವದ ಮೊದಲನೆ ದಿನದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮೂರು ಮುತ್ತು ಕಲಾ ತಂಡದವರಿಂದ ಮದುಮಗ ಎಂಬ ಹಾಸ್ಯ ನಾಟಕ ಗ್ರಾಮೀಣ ಪ್ರದೇಶದ ಜನರನ್ನು ನಗೆಗಡಲಲ್ಲಿ ತೇಲಿಸಿತು.

ಮಲೆನಾಡಿನ ಸುಪ್ರಸಿದ್ಧ ಸುಗಮ ಸಂಗೀತ ಕಲಾವಿದ ಅಡಗಂದೂರು ಕೃಷ್ಣಮೂತಿ ಇವರ ಸಂಯೋಜಿತ ಗೀತೆಗಳನ್ನು ಮಂಜುನಾಥ ಮತ್ತು ಸುಂಕದಮಕ್ಕಿ ಗೋಪಾಲಕೃಷ್ಣ ಪ್ರಸ್ತುತಪಡಿಸಿದರು.

ಹಿಮ್ಮೇಳದಲ್ಲಿ ಎಂ.ಕೆ ಶ್ರೀನಿ  ಕೊಪ್ಪ, ರಮೆಶ್‌ ಉಪಾಧ್ಯಾಯ, ಗಾಡಿಕೆರೆ ಸತ್ಯನಾರಾಯಣ ಸಹಕರಿಸಿದರು. ಮಲೆನಾಡ ಉತ್ಸವವು ಪ್ರಗತಿಪರ ಕೃಷಿಕರಾದ ಪಶ್ಚಿಮವಾಹಿನಿ ರಾಮಯ್ಯ, ಗಣೇಶ್‌ ರಾವ್‌ ಮತ್ತು ವೇಬ್ರಂಶ್ರೀ ವೆಂಕಟರಮಣ ಭಟ್‌ ಅವರ ಪ್ರವೇಶದ್ವಾರಗಳನ್ನು ಒಳಗೊಂಡಿದೆ. ಮಲೆನಾಡ ಶೈಲಿಯ ಅಲಂಕಾರವನ್ನು ವೇದಿಕೆ ಮತ್ತು ಹೊರಾಂಗಣಕ್ಕೆ ಮಾಡಲಾಗಿತ್ತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.