ಕರಾವಳಿಗರನ್ನು ಸೆಳೆಯುತ್ತಿರುವ ಇ-ವಾಹನ : ಒಂದೇ ವರ್ಷ 450 ವಾಹನಗಳು ರಸ್ತೆಗೆ


Team Udayavani, Mar 2, 2021, 11:30 AM IST

ಕರಾವಳಿಗರನ್ನು ಸೆಳೆಯುತ್ತಿರುವ ಇ-ವಾಹನ : ಒಂದೇ ವರ್ಷ 450 ವಾಹನಗಳು ರಸ್ತೆಗೆ

ಮಂಗಳೂರು: ತೈಲ ಬೆಲೆ ಏರಿಕೆಯಿಂದ ಪಾರಾಗುವ ಮತ್ತು ಸಬ್ಸಿಡಿಯ ಲಾಭ ಪಡೆಯುವ ಉದ್ದೇಶದಿಂದ ಪರಿಸರ ಸ್ನೇಹಿ ಎಲೆಕ್ಟ್ರಿಕ್‌ ವಾಹನಗಳತ್ತ ಕರಾವಳಿಗರು ದೃಷ್ಟಿ ಹರಿಸುತ್ತಿದ್ದಾರೆ. ಕರಾವಳಿಯಲ್ಲಿ ಒಂದೇ ವರ್ಷದಲ್ಲಿ 450 ಇ- ವಾಹನಗಳು ರಸ್ತೆಗಿಳಿದಿವೆ.

ಎಲೆಕ್ಟ್ರಿಕ್‌ ವಾಹನ ಖರೀದಿಗೆ ಕೇಂದ್ರ, ರಾಜ್ಯ ಸರಕಾರಗಳು ವಿಶೇಷ ಒತ್ತು ನೀಡುತ್ತಿದ್ದು, ಇ-ವಾಹನ ನೀತಿಯನ್ನು ಜಾರಿಗೆ ತಂದ ಮೊದಲಿಗನಾಗಿ ಕರ್ನಾಟಕ ಗುರುತಿಸಿಕೊಂಡಿದೆ.

2020ರ ಜ. 1ರಿಂದ 2021ರ ಫೆ. 24ರ ವರೆಗೆ ರಿಕ್ಷಾ, ಕಾರು, ದ್ವಿಚಕ್ರ ವಾಹನ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 284 ಮತ್ತು ಉಡುಪಿ ಜಿಲ್ಲೆಯಲ್ಲಿ 166 ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿವೆ. ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಸುಮಾರು 90 ಸಾವಿರ ರೂ.ಗಳಿಗೆ ದೊರಕುತ್ತಿದ್ದು, ಒಮ್ಮೆ ಚಾರ್ಜ್‌ ಮಾಡಿದರೆ ಸುಮಾರು 100 ಕಿ.ಮೀ. ಕ್ರಮಿಸುವ ಸಾಮರ್ಥ್ಯ ಹೊಂದಿವೆ.

ಆಗಬೇಕಿರುವುದೇನು?
ಎಲೆಕ್ಟ್ರಿಕ್‌ ವಾಹನಗಳ ಖರೀದಿ ಇನ್ನಷ್ಟು ಹೆಚ್ಚಬಹುದಾಗಿದ್ದರೂ ಕೆಲವು ಕೊರತೆಗಳು ಅಡ್ಡಿಯಾಗಿವೆ. ಸಾಮಾನ್ಯ ಆಟೋಗಳನ್ನು ಎಲೆಕ್ಟ್ರಿಕ್‌ ವಾಹನಗಳಾಗಿ ಪರಿವರ್ತಿಸಲು ಸುಮಾರು 1 ಲಕ್ಷ ರೂ. ವ್ಯಯವಾಗುತ್ತದೆ. ಬ್ಯಾಟರಿ ಬೆಲೆ ದುಬಾರಿ; ಹೀಗಾಗಿ ಸರಕಾರವು ದ್ವಿಚಕ್ರ ವಾಹನಗಳಿಗೆ ನೀಡುತ್ತಿರುವ 20ರಿಂದ 25 ಸಾವಿರ ರೂ. ಸಬ್ಸಿಡಿ ಹೆಚ್ಚಿಸಬೇಕಿದೆ. ಪೆಟ್ರೋಲ್‌ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್‌ ವಾಹನಗಳ ವೇಗ ಕಡಿಮೆ ಎನ್ನುತ್ತಾರೆ ಗ್ರಾಹಕರು.

ಪರಿವರ್ತನೆಯತ್ತ ಮನ
ಪೆಟ್ರೋಲ್‌ ಚಾಲಿತ ಸ್ಕೂಟರ್‌ಗಳನ್ನು ಎಲೆಕ್ಟ್ರಿಕ್‌ಗೆ ಪರಿವರ್ತಿಸಬಹುದಾಗಿದ್ದು, ಕೆಲವರು ಮುಂದೆ ಬರುತ್ತಿದ್ದಾರೆ ಎಂದು ನಗರದ ಎಲೆಕ್ಟ್ರಿಕ್‌ ಅಂಗಡಿ ಮುಖ್ಯಸ್ಥ ಸದಾನಂದ ಹೇಳಿದ್ದಾರೆ.

ಎರಡೇ ತಿಂಗಳು; 111 ನೋಂದಣಿ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎಲೆಕ್ಟ್ರಿಕ್‌ ವಾಹನ ನೋಂದಣಿ ಹೆಚ್ಚಾಗುವ ಸಾಧ್ಯತೆ ಇದೆ. 2021ರ ಜ. 1ರಿಂದ ಫೆ. 24ರ ಅವಧಿಯಲ್ಲಿ ನೋಂದಣಿ ವಿವರ ಇಂತಿದೆ.

ಚಾರ್ಜಿಂಗ್‌ ಪಾಯಿಂಟ್‌
ರಾಜ್ಯ ಸರಕಾರವು ಇ-ಸಂಚಾರವನ್ನು ಉತ್ತೇಜಿಸುವ ಸಲುವಾಗಿ ಬೆಸ್ಕಾಂ ಮೂಲಕ ಬೆಂಗಳೂರಿನ ವಿವಿಧೆಡೆ ಡಿ.ಸಿ. ಫಾಸ್ಟ್‌ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಿದೆ. ಮಂಗಳೂರಿನಲ್ಲಿಯೂ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಖಾಸಗಿ ಸಂಸ್ಥೆಯೊಂದರ ಕೇಂದ್ರ ಈಗಾಗಲೇ ಕಾರ್ಯಾಚರಿಸುತ್ತಿದೆ.

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.