ಕೋವಿಡ್ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ. ಪಾಟೀಲ್
Team Udayavani, Mar 2, 2021, 11:17 AM IST
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹಿರೇಕೆರೂರಿನ ಸ್ವಗೃಹದಲ್ಲಿ ಸರ್ಕಾರಿ ವೈದ್ಯರಿಂದ ಕೋವಿಡ್ ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಯಿಂದ ಕೋವಿಡ್ ಲಸಿಕೆ ನೀಡುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರಮೋದಿ ಕೋವಿಡ್ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.
ನಮ್ಮ ಭಾರತದಲ್ಲಿಯೇ ತಯಾರಿಸಿದ ಕೋವಿಡ್ ಲಸಿಕೆಗೆ ಪ್ರಶಂಸೆ ವ್ಯಕ್ತವಾಗಿದೆ. ಕೋವಿಡ್ ಸಂಘರ್ಷದ ಸಮಯದಲ್ಲಿ ಕರ್ನಾಟಕ ಹಾಗೂ ಭಾರತ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ನಿರ್ಭೀತಿಯಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಬಿ.ಸಿ ಪಾಟೀಲ್ ಕರೆ ನೀಡಿದರು.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಪಡೆದು ಹೊರಬಂದಾತ ಸಂತ್ರಸ್ತೆಯ ತಂದೆಯನ್ನು ಹತ್ಯೆಗೈದ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ