ಶಿಕ್ಷಕರ ಅಲೆದಾಟ ತಪ್ಪಿಸಲು ಅದಾಲತ್‌

ಬೆಳಗಾವಿ ವಿಭಾಗ ಮಟ್ಟದ ಶಿಕ್ಷಣ ಸ್ಪಂದನ ಕಾರ್ಯಕ್ರಮ ಉದ್ಘಾಟನೆ

Team Udayavani, Mar 2, 2021, 12:35 PM IST

ಶಿಕ್ಷಕರ ಅಲೆದಾಟ ತಪ್ಪಿಸಲು ಅದಾಲತ್‌

ಧಾರವಾಡ: ರಾಜ್ಯದ ಶಾಲಾ ಶಿಕ್ಷಕರ ಅನಗತ್ಯ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಆಯಾ ಶೈಕ್ಷಣಿಕವಲಯ ವ್ಯಾಪ್ತಿಯಲ್ಲಿ ಶಿಕ್ಷಣ ಅದಾಲತ್‌ಯೋಜಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ ಕುಮಾರ್‌ ಹೇಳಿದರು.

ನಗರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಆಯುಕ್ತಾಲಯವು ಡಯಟ್‌ ಆವರಣದಲ್ಲಿ ಆಯೋಜಿಸಿದ್ದ ಬೆಳಗಾವಿ ವಿಭಾಗಮಟ್ಟದ ಶಿಕ್ಷಣ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಾಠ ಮಾಡಬೇಕಾದ ಶಿಕ್ಷಕರು ತಮ್ಮ ಕಚೇರಿ ಕೆಲಸಗಳಿಗೆ ಅನಗತ್ಯವಾಗಿ ಅಲೆದಾಡುತ್ತಿರುವಪರಿಸ್ಥಿತಿ ಇದೆ. ಇದಕ್ಕಾಗಿ ಬೆಂಗಳೂರು, ಮೈಸೂರು,ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಇಂಥ ಶಿಕ್ಷಣ ಅದಾಲತ್‌ಗಳನ್ನು ನಡೆಸಲಾಗುವುದು.ಇಂಥದ್ದೊಂದು ಅದಾಲತ್‌ಗೆ ಅರ್ಜಿ ಕರೆದಾಗ 71 ಸಾವಿರ ಅರ್ಜಿಗಳು ಮೊಬೈಲ್‌ ಆ್ಯಪ್‌ ಮೂಲಕವೇಬಂದಿದೆ ಎಂದರು.

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಸಂಬಂ ಧಿತ ದೂರು, ಮನವಿಗಳ ಶೀಘ್ರ ವಿಲೇವಾರಿಗಾಗಿ ರಾಜ್ಯದ ಎಲ್ಲಕಂದಾಯ ವಿಭಾಗಗಳಲ್ಲಿ ಶಿಕ್ಷಣ ಸ್ಪಂದನ ಹಾಗೂ ಶಿಕ್ಷಣ ಸ್ಪಂದನದಡಿ ಕಡತ ವಿಲೇವಾರಿ ಅಭಿಯಾನ ಆಯೋಜಿಸಲಾಗುವುದು. ಶಿಕ್ಷಣ ಸ್ಪಂದನ ಒಂದು ಕಾರ್ಯಕ್ರಮವಾಗದೇ ಅದು ದಿನನಿತ್ಯದ ಕಾರ್ಯವಾಗಬೇಕು. ಶಿಕ್ಷಕರ ಸಮಸ್ಯೆ ದೂರುಗಳಿಗೆಸ್ಪಂದಿಸಲು ವಿಭಾಗಮಟ್ಟದಲ್ಲಿ ಶಿಕ್ಷಣ ಸ್ಪಂದನ ಕಾರ್ಯಕ್ರಮ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದರು.

ಪ್ರಾಮಾಣಿಕತೆ ಎನ್ನುವುದು ಇಂದು ಅಪಹಾಸ್ಯದ ಮಾತಾಗಿದೆ. ಆದರೆ ಅದು ಗೌರವದಸಂಕೇತವಾಗಬೇಕು. ಪ್ರತಿಯೊಬ್ಬರು ಇಲಾಖೆಯಲ್ಲಿಹೆಮ್ಮೆ, ಅಭಿಮಾನ, ಆತ್ಮ ವಿಶ್ವಾಸದಿಂದ ಕೆಲಸ ಮಾಡಬೇಕು. ಕೋವಿಡ್‌ ಸಂದರ್ಭದಲ್ಲಿ ಆರ್ಥಿಕಸಂಕಷ್ಟವಿದ್ದರೂ ಸರಕಾರ ಸರಕಾರಿ ನೌಕರರಿಗೆಸಕಾಲದಲ್ಲಿ ಯಾವುದೇ ಕಡಿತವಿಲ್ಲದೆ ಸಂಪೂರ್ಣಸಂಬಳ ನೀಡಿದೆ. ಇದು ಸರಕಾರದ ಬದ್ಧತೆ. ಅದರಂತೆತಮ್ಮ ಪಾಲಿನ ಕರ್ತವ್ಯಗಳನ್ನು ಪ್ರಾಮಾಣಿಕತೆ, ಬದ್ಧತೆಯಿಂದ ಮಾಡಬೇಕು ಎಂದರು.

ಶಿಕ್ಷಣ ಇಲಾಖೆಯಿಂದ ಸಮಾಜದಲ್ಲಿ ಶಕ್ತಿ ತುಂಬುವ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವಕೆಲಸವಾಗಬೇಕು. ಮಕ್ಕಳು ಪರೀಕ್ಷೆಗಳನ್ನುಯಾವುದೇ ಭಯ, ಆತಂಕಗಳಿಲ್ಲದೆ ಖುಷಿಯಿಂದ ಆತ್ಮವಿಶ್ವಾಸದಿಂದ ಎದುರಿಸುವ ವಾತಾವರಣಬೆಳಸಬೇಕು. ಸಮಾಜದಲ್ಲಿ ಗೌರವ ಭಾವನೆಹೆಚ್ಚಿಸುವಂತಹ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಮಾತನಾಡಿ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿಕೆಲಸಗಳು ವಿನಾಕಾರಣ ವಿಳಂಬವಾಗುತ್ತಿದೆ. ಆಭಾಗದ ಶಾಸಕರನ್ನು ಭೇಟಿಯಾಗದಿದ್ದರೆ ಕೆಲಸವೇಆಗಲ್ಲ ಎಂಬ ಸ್ಥಿತಿ ಇದೆ. ಇದು ಬೋಧನೆ ಮೇಲೆಪರಿಣಾಮ ಬೀರುತ್ತಿದೆ. ನಿಂತೇ ಹೋಗಿದ್ದ ಶಿಕ್ಷಣಅದಾಲತ್‌ ಮರಳಿ ಆರಂಭಿಸುವ ಒತ್ತಾಯವಿತ್ತು.ಕನಿಷ್ಠ ಎರಡು ವರ್ಷಗಳಿಗೆ ಒಮ್ಮೆಯಾದರೂ ಇಂತಹ ಅದಾಲತ್‌ ನಡೆಯಬೇಕು ಎಂದರು.

ವಿಧಾನ ಪರಿಷತ ಸದಸ್ಯ ಹನಮಂತ ನಿರಾಣಿ ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಆರ್‌. ಸ್ನೇಹಲ್‌, ಸ್ಲಿಪ್‌ ಸಂಸ್ಥೆಯನಿರ್ದೇಶಕ ರಘುವೀರ, ಡಿಡಿಪಿಐಗಳಾದ ಎಂ.ಎಲ್‌.ಹಂಚಾಟೆ, ಆರ್‌.ಎಸ್‌. ಮುಳ್ಳೂರ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು. ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಸ್ವಾಗತಿಸಿದರು. ವಿದ್ಯಾ ನಾಡಿಗೇರ ನಿರೂಪಿಸಿದರು. ನಿರ್ದೇಶಕಿ ಮಮತಾ ನಾಯಕ ವಂದಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.