ಈ ಬಾರಿಯಾದರೂ ಈಡೇರುವವೇ ಬೇಡಿಕೆ?

ಬಿಎಸ್‌ವೈ ಭರವಸೆ ಕೊಟ್ಟು 2 ವರ್ಷಗಳಾದರೂ ಸುವರ್ಣ ಸೌಧಕ್ಕೆ ಬಂದಿಲ್ಲ ಮುಖ್ಯ ಕಚೇರಿಗಳು

Team Udayavani, Mar 2, 2021, 12:59 PM IST

ಈ ಬಾರಿಯಾದರೂ ಈಡೇರುವವೇ ಬೇಡಿಕೆ?

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತು ಭಾರತೀಯ ಜನತಾ ಪಕ್ಷದಲ್ಲಿ ಗಡಿ ಜಿಲ್ಲೆ ಬೆಳಗಾವಿಗೆ ನಿರೀಕ್ಷೆ ಮಾಡದಷ್ಟು ಸ್ಥಾನಮಾನ, ಅವಕಾಶ ಸಿಕ್ಕಿದೆ. ರಾಜಕಾರಣಿಗಳು ಜಾಕ್‌ಪಾಟ್‌ ಮೇಲೆ ಜಾಕ್‌ಪಾಟ್‌ ಹೊಡೆದಿದ್ದಾರೆ.

ಆದರೆ ಸಾಮಾನ್ಯ ಜನರು ಹಾಗೂ ಹೋರಾಟಗಾರರು ನಿರೀಕ್ಷೆ ಮಾಡಿದ ಮತ್ತು ತಮ್ಮ ಸುದೀರ್ಘ‌ ಬೇಡಿಕೆಗಳಿಗೆ ವರ್ಷದುದ್ದಕ್ಕೂ ಸರ್ಕಾರದ ಕಡೆ ಮುಖ ಮಾಡಿಯೇ ನಿಲ್ಲಬೇಕಾಗಿದೆ.

ಗಡಿ ಭಾಗದ ಪ್ರದೇಶ ಹಾಗೂ ಅಲ್ಲಿನ ಜನರೆಂದರೆ ಸರ್ಕಾರಕ್ಕೆ ಒಂದು ರೀತಿಯ ತಾತ್ಸಾರ ಮನೋಭಾವ. ಬೇಡಿಕೆಗಳಿಗೆ ಸಿಗುವ ಸ್ಪಂದನೆ ಅಷ್ಟಕಷ್ಟೆ ಎಂಬುದು ಮೊದಲಿಂದಲೂ ಕೇಳಿಬರುವ ಆರೋಪ. ಇದು ಯಡಿಯೂರಪ್ಪ ಸರ್ಕಾರದಲ್ಲಿ ಸಹ ಮುಂದುವರಿದಿದೆ. ಬೇಡಿಕೆಗಿಂತ ಹೆಚ್ಚು ರಾಜಕೀಯ ಪ್ರಾತಿನಿಧ್ಯ ಬಿಟ್ಟರೆ ಈಸರ್ಕಾರದಲ್ಲಿ ಸಿಕ್ಕಿದ್ದು ನಿರಾಸೆಯ ಗಂಟು. ಮುಖ್ಯವಾದ ಬೇಡಿಕೆಗಳು ಇನ್ನೂ ಕಾಯಬೇಕಾದ ಹಂತದಲ್ಲೇ ಇವೆ.

ಈಗ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೂಂದು ಬಜೆಟ್‌ ಮಂಡನೆ ಮಾಡಲು ಸಿದ್ದತೆ ಮಾಡಿಕೊಂಡಿರುವಸಂದರ್ಭದಲ್ಲಿ ಬಹು ದಿನಗಳ ಬೇಡಿಕೆ, ಜನರ ನಿರೀಕ್ಷೆಗಳು ಮರಳಿ ಪ್ರಸ್ತಾಪವಾಗಿವೆ. ಸರ್ಕಾರಕ್ಕೆ ನೆನಪುಮಾಡಿಕೊಡುವ ಪ್ರಯತ್ನ ಮಾಡಲಾಗಿದೆ. ತಾವೇ ನೀಡಿದ ಮಾತಿನಂತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ತಕ್ಷಣ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅನುಕೂಲವಾಗುವ ಸರ್ಕಾರದ ಮುಖ್ಯ ಕಚೇರಿಗಳು ಸುವರ್ಣ ವಿಧಾನಸೌಧಕ್ಕೆ ಬರಬೇಕಿತ್ತು.

ಈ ಭಾಗಕ್ಕೆ ಸಂಬಂಧಪಟ್ಟ ನಿರ್ಣಯಗಳು ಇಲ್ಲಿಯೇ ಆಗಬೇಕಿದ್ದವು. ಆದರೆ ಸುವರ್ಣ ವಿಧಾನಸೌಧಕ್ಕೆ ರಾಜ್ಯ ಕಚೇರಿಗಳ ಬದಲು ಕೆಲವೊಂದು ಜಿಲ್ಲಾ ಕಚೇರಿಗಳುಬಂದಿರುವದು ಸರ್ಕಾರದ ನಿರ್ಲಕ್ಷಕ್ಕೆ ನಿದರ್ಶನ ಎಂಬುದು ಕನ್ನಡ ಹೋರಾಟಗಾರರ ಅಸಮಾಧಾನ. ಮರೆತು ಹೋದ ಮಾತುಗಳು; 2018ರಲ್ಲಿ ಉತ್ತರ ಕರ್ನಾಟಕದ ಮಠಾಧೀಶರು ಸುವರ್ಣ ವಿಧಾನಸೌಧಕ್ಕೆ ಸರ್ಕಾರಿ ಕಚೇರಿಗಳ ಸ್ಥಳಾಂತರಕ್ಕೆ ಆಗ್ರಹಿಸಿ ಹೋರಾಟ ನಡೆಸಿದಾಗ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ್ದ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಮೈತ್ರಿ ಸರ್ಕಾರದ ಮುಖ್ಯಮಂತ್ರಿಗಳ ವಿರುದ್ಧ ವಾಗ್ಧಾಳಿ ನಡೆಸಿದ್ದಲ್ಲದೆ ತಮ್ಮ ಸರ್ಕಾರ ಬಂದ ಕೂಡಲೇ ಪ್ರಮುಖ ಕಚೇರಿಗಳ ಸ್ಥಳಾಂತರ ಮಾಡುವ ಮಾತು ಕೊಟ್ಟಿದ್ದರು. ಅಷ್ಟೇಆಲ್ಲ, ಸರ್ಕಾರ ರಚನೆ ಮಾಡಿದ ಬಳಿಕ ಸುವರ್ಣವಿಧಾನಸೌಧದಲ್ಲಿ ಎರಡು ತಿಂಗಳಿಗೊಮ್ಮೆ ಸಚಿವಸಂಪುಟ ಸಭೆ ನಡೆಸುವ ಭರವಸೆ ಸಹ ನೀಡಿದ್ದರು.ಆದರೆ ಈ ಎರಡೂ ಮಾತುಗಳು ಯಡಿಯೂರಪ್ಪಅವರಿಗೆ ಈಗ ನೆನಪಿಲ್ಲ. ಭರವಸೆಗಳು ಎಲ್ಲಿ ಎಡವಿದವು ಎಂಬುದು ಗೊತ್ತಿಲ್ಲ.

ಸುವರ್ಣ ವಿಧಾನಸೌಧವನ್ನು ಉತ್ತರ ಕರ್ನಾಟಕದ ಶಕ್ತಿ ಕೇಂದ್ರವನ್ನಾಗಿ ಮಾಡಲಾಗುವುದು ಎಂದು ಹೇಳಿದ್ದ ಮುಖ್ಯಮಂತ್ರಿಗಳು ಎರಡು ವರ್ಷದಿಂದ ಅದರಕಡೆ ತಿರುಗಿ ನೋಡಿಲ್ಲ. ಪ್ರತಿ ವರ್ಷ ನಿರ್ವಹಣೆಗೆ 8ರಿಂದ 10 ಕೋಟಿ ಖರ್ಚು ಮಾಡುತ್ತಿರುವ ಸರ್ಕಾರಕ್ಕೆ ಸುವರ್ಣ ವಿಧಾನಸೌಧ ಬಿಳಿಆನೆಯಾಗಿ ಬದಲಾಗಿದೆ.

ಜಿಲ್ಲಾ ವಿಭಜನೆ : ಜಿಲ್ಲಾ ವಿಭಜನೆ ಸರ್ಕಾರದ ಮುಂದಿರುವ ದೊಡ್ಡ ಸವಾಲು. ಹಿಂದಿನ ಎಲ್ಲ ಸರ್ಕಾರಗಳು ಈ ವಿಷಯದಲ್ಲಿ ನುಡಿದಂತೆ ನಡೆದುಕೊಂಡಿಲ್ಲ ಎಂಬ ಅಸಮಾಧಾನ ಹೊಸ ಜಿಲ್ಲೆಗಾಗಿ ಕಾಯುತ್ತಿರುವ ಚಿಕ್ಕೋಡಿ ಹಾಗೂ ಗೋಕಾಕ

ಭಾಗದ ಜನರಲ್ಲಿದೆ. ಹೊಸ ಸರ್ಕಾರ ರಚನೆಯಾದಾಗ ಮತ್ತು ಬಜೆಟ್‌ ಸಮಯದಲ್ಲಿ ಈ

ವಿಷಯ ಸಂಪ್ರದಾಯದಂತೆ ಕೇಳಿಬರುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ. ಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಬೇಕು. ಈಗಾಗಲೇ 14ತಾಲೂಕುಗಳಿಂದ ಜಿಲ್ಲಾಡಳಿತದ ಮೇಲೆ ದೊಡ್ಡ ಹೊರೆ ಬಿದ್ದಿದೆ. ಅಥಣಿ ತಾಲೂಕಿನ ಜನರು ಜಿಲ್ಲಾ ಕೇಂದ್ರಕ್ಕೆ ಬರಲು 150 ಕಿಲೋಮೀಟರ್‌ ಕ್ರಮಿಸಬೇಕು. ಇಲ್ಲಿಗೆ ಬಂದರೂ ಕೆಲಸ ಆಗುತ್ತದೆ ಎಂಬ ವಿಶ್ವಾಸ ಇಲ್ಲ. ಈ ಎಲ್ಲ ಕಾರಣದಿಂದ ಹೊಸ ಜಿಲ್ಲೆಗಳನ್ನು ಮಾಡಬೇಕು ಎಂಬಬೇಡಿಕೆ ದಶಕಗಳಿಂದ ಇದೆ. ತಾಂತ್ರಿಕ ಸಮಸ್ಯೆ ಕಾರಣ ಮುಂದೆ ಮಾಡುತ್ತಿರುವ ಸರ್ಕಾರ ಈಗ ಯಾವ ರೀತಿ ಸ್ಪಂದಿಸುತ್ತದೆ ಎಂಬ ಕುತೂಹಲ ಹೋರಾಟಗಾರರಲ್ಲಿದೆ.

ಮುಗಿಯದ ನೀರಿನ ಕನವರಿಕೆ :

ಮಹದಾಯಿ ನ್ಯಾಯಾಧೀಕರಣದ ತೀರ್ಪಿನಿಂದ ಕಳಸಾ-ಬಂಡೂರಿ ಸಮಸ್ಯೆ ಬಗೆಹರಿಯಿತು. ಇನ್ನು ನಮ್ಮ ನೀರಿನ ಬವಣೆ ದೂರವಾಯಿತು ಎಂದು ಸಂತಸಗೊಂಡಿದ್ದ ಮಲಪ್ರಭಾ ನದಿ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ 11 ತಾಲೂಕುಗಳ ಜನರಿಗೆ ಸರ್ಕಾರದ ಉದಾಸೀನ ಮನೋಭಾವ ಮತ್ತೆ ನಿರಾಸೆ ಉಂಟುಮಾಡಿದೆ. ಕಳಸಾ-ಬಂಡೂರಿ ನೀರಿನ ಕನವರಿಕೆ ಮೊದಲಿನ ಹಾಗೆಯೇಮುಂದುವರಿದಿದೆ. ಕಳೆದ ಬಜೆಟ್‌ದಲ್ಲಿ ಕಳಸಾ-ಬಂಡೂರಿ ಕಾಮಗಾರಿಗೆ ಸರ್ಕಾರ 500ಕೋಟಿ ರೂ. ತೆಗೆದಿಡಲಾಗಿದೆ ಎಂದು ಘೋಷಿಸಿದಾಗ ಎಲ್ಲ ಕಡೆ ವಿಜಯೋತ್ಸ ವ ಆಚರಣೆ ಮಾಡಲಾಗಿತ್ತು. ಆದರೆ ಬಜೆಟ್‌ ಬಳಿಕ ಕಳಸಾ ನಾಲಾ ಪ್ರದೇಶದಲ್ಲಿ ಯಾವುದೇ ಸಕಾರಾತ್ಮಕ ಬೆಳವಣಿಗೆಗಳು ನಡೆಯಲೇ ಇಲ್ಲ. ಇದಕ್ಕೆ ಪ್ರತಿಯಾಗಿ ಗೋವಾ ಸರ್ಕಾರದ ಆಕ್ಷೇಪ ಹಾಗೂ ಆರೋಪಗಳು ಕರ್ನಾಟಕ ಸರ್ಕಾರದ ಇಚ್ಛಾಶಕ್ತಿಯನ್ನು ಪ್ರಶ್ನೆ ಮಾಡುವಂತಿವೆ.

 

ಕೇಶವ ಆದಿ

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.