ರಾಣಿಬೆನ್ನೂರ: 1.57 ಕೋಟಿ ರೂ.ಉಳಿತಾಯ ಬಜೆಟ್‌


Team Udayavani, Mar 2, 2021, 1:39 PM IST

ರಾಣಿಬೆನ್ನೂರ: 1.57 ಕೋಟಿ ರೂ.ಉಳಿತಾಯ ಬಜೆಟ್‌

ರಾಣಿಬೆನ್ನೂರ: ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಅವರು ಸೋಮವಾರ 2021-22ನೇ ಸಾಲಿನ 1.57.29 ಕೋಟಿ ರೂ. ಉಳಿತಾಯ ಬಜೆಟ್‌ ಮಂಡಿಸಿದರು.

ನಗರಸಭೆ ಸಾಮಾನ್ಯ ಸಭೆಯಲ್ಲಿ ಬಜೆಟ್‌ ಮಂಡಿಸಿದ ಅವರು, ಬಜೆಟ್‌ನ ಪ್ರಾರಂಭಿಕ ಶಿಲ್ಕು 584.27ಲಕ್ಷ ರೂ.ಗಳಷ್ಟಿದ್ದು, ನಿರೀಕ್ಷಿತ ರಾಜಸ್ವ ಸ್ವೀಕಾರದಿಂದ3144.96ಲಕ್ಷ ರೂ., ಬಂಡವಾಳದಿಂದ 1757.95ಲಕ್ಷ ರೂ., ಅಸಮಾನ್ಯ ಸ್ವೀಕೃತಿಯಿಂದ 2270.25ಲಕ್ಷ ರೂ.ಸೇರಿದಂತೆ ಒಟ್ಟು 7173.16ಲಕ್ಷ ರೂ. ಆದಾಯ ಮೂಲಗಳನ್ನು ನಿರೀಕ್ಷಿಸಲಾಗಿದೆ ಎಂದರು.

ರಾಜಸ್ವ ಪಾವತಿಯಿಂದ 2655.96 ಲಕ್ಷ ರೂ., ಬಂಡವಾಳಪಾವತಿಯಿಂದ 2567.74ಲಕ್ಷ ರೂ., ಅಸಾಮಾನ್ಯ ಪಾವತಿಯಿಂದ 2376.44ಲಕ್ಷ ರೂ. ಸೇರಿದಂತೆ ಒಟ್ಟು 7600.14 ಲಕ್ಷ ರೂ. ನಿರೀಕ್ಷಿಸಲಾಗಿದೆ. ಇದರಿಂದ ಈಬಾರಿ 157.29 ಲಕ್ಷ ರೂ. ಉಳಿತಾಯ ಬಜೆಟ್‌ ಆಗಿದೆ ಎಂದರು.

ಈ ಬಾರಿ ಆದಾಯದ ಮೂಲಗಳಾದ ಆಸ್ತಿ ತೆರಿಗೆಯಿಂದ 409.13ಲಕ್ಷ ರೂ., ಮಳಿಗೆ ಬಾಡಿಗೆಯಿಂದ 267.12ಲಕ್ಷ ರೂ., ನೀರಿನಕಂದಾಯದಿಂದ 300 ಲಕ್ಷ ರೂ., ಅಭಿವೃದ್ಧಿ ಕರದಿಂದ 250 ಲಕ್ಷ ರೂ., ಎಸ್‌ಎಫ್‌ಸಿ ವೇತನ, ವಿದ್ಯುತ್‌, ಮುಕ್ತನಿಧಿ ಅನುದಾನದಿಂದ ಒಟ್ಟು 1408.50 ಲಕ್ಷ ರೂ., ಇತರೆ ಮೂಲಗಳಿಂದ ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ ಎಂದರು.

ರಸ್ತೆ ಅಭಿವೃದ್ಧಿ ಹಾಗೂ ರಸ್ತೆ ಬದಿ ಚರಂಡಿಗೆ 915.21 ಲಕ್ಷ ರೂ., ಬೀದಿದೀಪ ವ್ಯವಸ್ಥೆಗೆ 150 ಲಕ್ಷ ರೂ., ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ 20ಲಕ್ಷ ರೂ., ನೀರು ಸರಬರಾಜಿಗೆ 221.99ಲಕ್ಷ ರೂ.,ಉದ್ಯಾನವಗಳ ಅಭಿವೃದ್ಧಿಗೆ 606.40ಲಕ್ಷ ರೂ., 15ನೇ ಕೇಂದ್ರ ಹಣಕಾಸು ಆಯೋಗದ ಸಾಮಾನ್ಯ ಮೂಲಅನುದಾನ 727.95ಲಕ್ಷ ರೂ. ಸೇರಿದಂತೆ ಒಟ್ಟು1932.85ಲಕ್ಷ ರೂ. ನಿರೀಕ್ಷಿಸಲಾಗಿದೆ.

ಇದೇ ಪ್ರಥಮ ಬಾರಿಗೆ ಬಜೆಟ್‌ ಮಂಡಿಸಲು ಅಧ್ಯಕ್ಷರು ಕೈಯಲ್ಲಿ ಸೂಟಕೇಸ್‌ ತರುವ ಮೂಲಕ ಸದಸ್ಯರ ಗಮನ ಸೆಳೆದರು. ನಗರಸಭೆ ಉಪಾಧ್ಯಕ್ಷೆಕಸ್ತೂರಿ ಚಿಕ್ಕಬಿದರಿ, ಶಾಸಕ ಅರುಣಕುಮಾರ ಪೂಜಾರ, ಪೌರಾಯುಕ್ತ ಡಾ.ಎನ್‌.ಮಹಾಂತೇಶ, ಎಇಇ ಕೃಷ್ಣಮೂರ್ತಿ, ಶಂಕರ, ವಾಣಿಶ್ರೀ, ಮಧು ಸಾತೇನಹಳ್ಳಿಸೇರಿದಂತೆ ಸರ್ವ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು, ಸಿಬ್ಬಂದಿ ಮತ್ತಿತರರು ಇದ್ದರು. ಬಜೆಟ್‌ ಕುರಿತು ಪರ ಹಾಗೂ ವಿರೋಧ ಪಕ್ಷದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಸಭೆಗೂ ಮುನ್ನ ಸಿಸಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ವಿಷಯಗಳನ್ನುದೃಢೀಕರಿಸಬಾರದು. ಮುಂದಿನ ಸಭೆಗೆ ತರಬೇಕೆಂದುಪುಟ್ಟಪ್ಪ ಮರಿಯಮ್ಮನವರ, ಲಿಂಗರಾಜ ಕೋಡಿಹಳ್ಳಿ,ಶೇಖಪ್ಪ ಹೊಸಗೌಡ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಆಡಳಿತ ಪಕ್ಷದ ಪ್ರಕಾಶ ಬುರಡಿಕಟ್ಟಿ, ಪ್ರಕಾಶಪೂಜಾರ, ಮಲ್ಲಣ್ಣ ಅಂಗಡಿ ಸೇರಿದಂತೆ ಮತ್ತಿತರರು ಅಂತಹ ಪ್ರಮಾದವೇನೂ ಆಗಿಲ್ಲ. ಎಲ್ಲ ವಿಷಯಗಳು ದೃಢೀಕರಣವಾಗಲಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.