ದುಶ್ಚಟಗಳಿಂದ ದೂರವಿರಲು ಯುವಕರಿಗೆ ಸಲಹೆ
Team Udayavani, Mar 2, 2021, 8:00 PM IST
ಹೂವಿನಹಿಪ್ಪರಗಿ: ಇಂದಿನ ಯುವ ಪೀಳಿಗೆ ಹಿರಿಯರ ಮಾತಿಗೆ ಮನ್ನಣೆ ನೀಡುವ ಜೊತೆಗೆ ದುಶ್ಚಟಗಳಿಂದ ದೂರವಿಬೇಕು ಎಂದು ರಾಷ್ಟ್ರೀಯ ಕಿಶೋರ ಸಂಸ್ಥೆಯ ತಾಲೂಕಿನ ಆಪ್ತ ಸಮಾಲೋಚಕ ಪರಶುರಾಮ ಸೌದಿ ಸಲಹೆ ನೀಡಿದರು.
ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಆರೋಗ್ಯ ಉಪ ಕೇಂದ್ರದಲ್ಲಿ ಸೋಮವಾರ ರಾಷ್ಟ್ರೀಯ ಕಿಶೋರ ಸಂಸ್ಥೆ ಹಮ್ಮಿಕೊಂಡಿದ್ದ ಹದಿಹರೆಯದ ಯುವಕರ ಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಯುವಕರು ಮನೆಯಲ್ಲಿ ತಂದೆ ತಾಯಿಯ ಮಾತಿಗೆ ಬೆಲೆ ನೀಡಬೇಕು. ಸಂಸ್ಕಾರಯುತ ಜೀವನ ಸಾಗಿಸುವ ಮಾರ್ಗದಲ್ಲಿ ನಡೆದರೆ ಭವಿಷ್ಯದಲ್ಲಿ ಜಾವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ ಎಂದು ಹೇಳಿದರು. ಲೈಂಗಿಕ ಶಿಕ್ಷಣದ ಆಪ್ತ ಸಮಾಲೋಚಕ ಆರ್.ಎಸ್. ಲಿಂಗದಳ್ಳಿ ಮಾತನಾಡಿ, ಇಂದಿನ ಹದಿ ಹರಿಯದವರು ತಮ್ಮ ಮನಸ್ಸಿಗೆ ಬಂದಂತೆ ವಿಚಾರಿಸದೆ ಹಿರಿಯರಿಗೆ ಗೌರವಿಸುವ ಮನೋಭಾವ ಬೆಳೆಸಿಕ್ಕೊಳ್ಳಬೇಕು. ಶಿಕ್ಷಣ ಜೊತೆಗೆ ಉತ್ತಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದರು.
ಸಮುದಾಯ ಆರೋಗ್ಯ ಅ ಧಿಕಾರಿ ಡಾ| ಶರಣಬಸು ಗುದ್ದಿ ಮಾತನಾಡಿ, ಹದಿ ಹರಿಯದವರಲ್ಲಿ ದೈಹಿಕ, ಮಾನಸಿಕ, ಬದಲಾವಣೆಗಳು ಮತ್ತು ಲೈಂಗಿಕ ಗುಪ್ತ ಕಾಯಿಲೆ ಮತ್ತು ಸಾಂಕ್ರಾಮಿಕ ರೋಗಗಳು ಪೌಷ್ಟಿಕ ಆಹಾರ ಮತ್ತು ಚರ್ಮ ತೊಂದರೆಗಳ ಬಗ್ಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಶಿವಲಿಂಗ ನೆಗಿನಾಳ, ಶಿಕ್ಷಕರಾದ ಎಂ.ಬಿ. ಜೋಗಿ, ಎಂ.ಎಂ. ಪಠಾಣ, ಎಸ್.ಎಸ್. ತೋಟದ, ಆಂಗನವಾಡಿ ಕಾರ್ಯಕರ್ತೆ ಎಸ್.ಪಿ. ಕೋಲಕಾರ, ಆಶಾ ಕಾರ್ಯಾಕರ್ತೆ ಎಸ್.ಎಸ್.ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ