ಸಾಲ ವಸೂಲಿ ಒಟಿಎಸ್‌ ಮಾನದಂಡಗಳನ್ನು ಮರುಪರಿಶೀಲಿಸಿ: ಆರ್‌ಬಿಐಗೆ ಹೈಕೋರ್ಟ್‌ ಸಲಹೆ


Team Udayavani, Mar 2, 2021, 11:00 PM IST

ಸಾಲ ವಸೂಲಿ ಒಟಿಎಸ್‌ ಮಾನದಂಡಗಳನ್ನು ಮರುಪರಿಶೀಲಿಸಿ: ಆರ್‌ಬಿಐಗೆ ಹೈಕೋರ್ಟ್‌ ಸಲಹೆ

ಬೆಂಗಳೂರು: ಸಾಲ ವಸೂಲಿ ಅಥವಾ ಮರು ಪಾವತಿ ಸಂದರ್ಭದಲ್ಲಿ ಬ್ಯಾಂಕ್‌ಗಳು ನೀಡುವ “ಒನ್‌ ಟೈಮ್‌ ಸೆಟ್ಲ್ ಮೆಂಟ್‌ ಸ್ಕೀಮ್‌’ (ಒಟಿಎಸ್‌) ಮಾನದಂಡಗಳನ್ನು ಮರುಪರಿಶೀಲಿಸುವಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ಹೈಕೋರ್ಟ್‌ ಸಲಹೆ ನೀಡಿದೆ.

ಜೊತೆಗೆ, ಸಾಲ ಮರು ಪಾವತಿಗೆ ರಿಯಾಯಿತಿ ಕೋರಿದ ಅರ್ಜಿದಾರರಿಗೆ ಹೈಕೋರ್ಟ್‌ 2 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಕಂಪನಿ ಪಡೆದುಕೊಂಡಿರುವ ಸಾಲವನ್ನು ಓಟಿಎಸ್‌ ಅಡಿ ಬ್ಯಾಂಕ್‌ ನಿರ್ಧರಿಸಿರುವ ಮೊತ್ತದ ಬದಲಿಗೆ ತಾವು ನಿರ್ಧರಿಸಿರುವ ಮೊತ್ತಕ್ಕೆ ಮರುಪಾವತಿಸಲು ಸಿದ್ದರಿದ್ದು ಅದನ್ನು ಪರಿಗಣಿಸುವಂತೆ ಬ್ಯಾಂಕ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಸಾಲಕ್ಕೆ ಜಾಮೀನುದಾರರಾದ ರಾಜಾಜಿನಗರ ನಿವಾಸಿ ಬಾಲಕಿಶನ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ, ಪಿ.ಎಸ್‌ ದಿನೇಶ್‌ ಕುರ್ಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಸಾಲಗಾರನಿಗೆ ನೀಡಿರುವ ಸಾಲಕ್ಕೆ ಸೂಕ್ತ ಭದ್ರತೆ ಇದೆ ಎಂಬುದು ಸ್ಪಷ್ಟವಾಗಿ ತಿಳಿದ ನಂತರವೂ ಬ್ಯಾಂಕ್‌ಗಳು ಒಟಿಎಸ್‌ ಮೂಲಕ ಶೇ.70 ರಷ್ಟನ್ನು ಮಾತ್ರ ಮರುಪಾವತಿಸಲು ಯಾಕೆ ಅವಕಾಶ ನೀಡುತ್ತವೆ ಎಂಬುದು ಅರ್ಥವಾಗುತ್ತಿಲ್ಲ. ಬ್ಯಾಂಕುಗಳ ಇಂತಹ ಲೆಕ್ಕಾಚಾರ ದೇಶದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಒಟಿಎಸ್‌ ಸೇರಿದಂತೆ ಯಾವುದೇ ವಿಧಾನದ ಮೂಲಕವೂ ಅನಗತ್ಯವಾಗಿ ಸಾಲ ಮನ್ನಾ ಮಾಡುವುದು ನೇರವಾಗಿ ಹಣದುಬ್ಬರಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ :ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

ಅಲ್ಲದೇ, ಬ್ಯಾಂಕುಗಳು ವಹಿವಾಟು ನಡೆಸುವ ಹಣ ಠೇವಣಿದಾರರಿಗೆ ಸೇರಿದ್ದಾಗಿರುತ್ತದೆ. ಹಾಗಿದ್ದೂ ಬ್ಯಾಂಕ್‌ಗಳು ಸಾಲ ವಸೂಲಿ ವೇಳೆ ಒಟಿಎಸ್‌ ಅಡಿ ಸಾಲಗಾರರಿಗೆ ರಿಯಾಯಿತಿ ನೀಡುವುದು ಅಸಮಂಜಸವಾಗಿ ಕಾಣುತ್ತದೆ. ಸಾಲ ವಸೂಲಿಗೆ ಸಂಬಂಧಿಸಿದ ನಿಯಮಗಳು ನೀತಿ ನಿರ್ಣಯ ವಿಷಯವಾಗಿದ್ದರೂ, ದೇಶದ ಆರ್ಥಿಕ ಸುರಕ್ಷತೆ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಆರ್‌ಬಿಐ ಒಟಿಎಸ್‌ ಮಾನದಂಡಗಳನ್ನು ಮರುಪರಿಶೀಲಿಸಬೇಕಿದೆ ಎಂದು ಸಲಹೆ ನೀಡಿದೆ.

ಪ್ರಕರಣದ ಹಿನ್ನೆಲೆ:
ಭಗವಾನ್‌ ಕಾಟನ್‌ ಗಿನ್ನರ್ಸ್‌ ಪ್ರೈ. ಲಿ. ಸಂಸ್ಥೆಗಾಗಿ ಬ್ಯಾಂಕ್‌ ಆಫ್ ಮಹಾರಾಷ್ಟ್ರದಲ್ಲಿ 2014 ರ ಆ.30ರಂದು 1.87 ಕೋಟಿ ಹಾಗೂ ಸೆ.30ರಂದು 8 ಕೋಟಿ ರೂಪಾಯಿ ಸಾಲ ಪಡೆಯಲಾಗಿತ್ತು. ಈ ಸಾಲಕ್ಕೆ ಭದ್ರತೆಯಾಗಿ ರಾಯಚೂರಿನ ಕೈಗಾರಿಕಾ ಪ್ರದೇಶದಲ್ಲಿರುವ 2.9 ಎಕರೆ ಭೂಮಿ ಅಡಮಾನ ಮಾಡಲಾಗಿತ್ತು. ಸಾಲ ಮರುವಾಪತಿಯಾಗದ ಹಿನ್ನೆಲೆಯಲ್ಲಿ 2016ರ ಡಿ. 21ರಂದು ಎರಡೂ ಸಾಲದ ಖಾತೆಗಳನ್ನು ಒಗ್ಗೂಡಿಸಿ ಎನ್‌ಪಿಎ ಎಂದು ಘೋಷಿಸಿದ್ದ ಬ್ಯಾಂಕ್‌ ವಸೂಲಿ ಪ್ರಕ್ರಿಯೆ ಆರಂಭಿಸಿತ್ತು. ಅಡಮಾನ ಮಾಡಿದ್ದ ಆಸ್ತಿ ವಶಕ್ಕೆ ತೆಗೆದುಕೊಳ್ಳುವ ಬ್ಯಾಂಕ್‌ ನಿರ್ಧಾರ ಪ್ರಶ್ನಿಸಿದ್ದ ಕಂಪನಿಯ ಅರ್ಜಿಯನ್ನು 2019ರ ನ.18ರಂದು ಸಾಲ ವಸೂಲಾತಿ ಮಂಡಳಿ ವಜಾ ಮಾಡಿತ್ತು. ಒಟಿಎಸ್‌ ವಿಸ್ತರಿಸುವಂತೆ ಮಾಡಿದ್ದ ಮನವಿಯನ್ನು ಬ್ಯಾಂಕ್‌ ತಿರಸ್ಕರಿಸಿತ್ತು. ಹೀಗಾಗಿ, ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿದೆ.

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.