ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವಯೋಜಿತ ಸಿದ್ಧತೆ ಇರಲಿ


Team Udayavani, Mar 3, 2021, 2:59 PM IST

ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವಯೋಜಿತ ಸಿದ್ಧತೆ ಇರಲಿ

ಚಾಮರಾಜನಗರ: ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಸ್ವ ಪ್ರಯತ್ನ, ಸಾಮರ್ಥ್ಯ ಪರಿಶ್ರಮದಿಂದ ಅಗಾಧ ಸಾಧನೆ ಮಾಡಬೇಕು. ಅನಗತ್ಯ ಸಂಗತಿಗಳ ಬಗ್ಗೆ ಗಮನ ಹರಿಸಬಾರದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಕಿವಿಮಾತು ಹೇಳಿದರು.

ನಗರದ ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಜಿನಿವಾದ ವಿಶ್ವ ವ್ಯಾಪಾರ ಸಂಘಟನೆಯ ಭಾರತದ ಕಾಯಂ ಪ್ರತಿನಿಧಿಯಾಗಿರುವ ಭಾರತೀಯ ವಿದೇಶಾಂಗ ಸೇವೆಯ ಹಿರಿಯ ಅಧಿಕಾರಿ ಪಿ.ಎಸ್‌. ಗಂಗಾಧರ್‌ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವ ಯೋಜಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಅಧ್ಯಯನದ ಮೇಲೆ ಏಕಾಗ್ರತೆ ಇರಬೇಕು.ಆತ್ಮಸ್ಥೈರ್ಯದಿಂದ ನಿಮ್ಮಲ್ಲಿ ಅಂತರ್ಗತವಾಗಿರುವ ವಿದ್ವತ್ತಿನ ಮೇಲೆ ನಂಬಿಕೆಯಿಟ್ಟು ಮುನ್ನಡೆದರೆಸಾಧನೆ ಮಾಡಬಹುದೆಂದರು.

ಸಾಧಕರ ಸಾಧನೆಗಳು ಅನುಭವಗಳು ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿ ಗಳಿಗೆ ನೆರವಾಗಬೇಕು. ಈ ಉದ್ದೇಶಕ್ಕಾಗಿಯೇಚಾಮರಾಜನಗರ ಜಿಲ್ಲೆಯವರೇ ಆದ ಜಿನಿವಾದವಿಶ್ವ ವ್ಯಾಪಾರ ಸಂಘಟನೆಯ ಭಾರತದ ಉಪಕಾಯಂ ಪ್ರತಿನಿಧಿಯಾಗಿರುವ ಭಾರತೀಯವಿದೇಶಾಂಗ ಸೇವೆಯ ಅಧಿಕಾರಿ ಪಿ.ಎಸ್‌.ಗಂಗಾಧರ್‌ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಅಭ್ಯರ್ಥಿಗಳಿಗೆನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಂದೆಯೂ ನಿರಂತರವಾಗಿ ಸಲಹೆ ಮಾರ್ಗದರ್ಶನ ಅಗತ್ಯವಿದೆ. ಹೀಗಾಗಿ ಆನ್‌ಲೈನ್‌ ಮೂಲಕ ಜಿಲ್ಲೆಯ ಯುವಜನರೊಂದಿಗೆ ಸಂಪರ್ಕ ಸಾಧಿಸಿ ಪರೀಕ್ಷೆಗೆ ಮಾರ್ಗದರ್ಶನ ಮಾಡುವವೆಬ್‌ಸೈಟ್‌ ಪೋರ್ಟಲ್‌ ಸ್ಥಾಪಿಸಿದ್ದಲ್ಲಿ ಜಿಲ್ಲಾಡಳಿತ ದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಜಿನಿವಾದ ವಿಶ್ವವ್ಯಾಪಾರ ಸಂಘಟನೆಯ ಭಾರತದ ಉಪ ಕಾಯಂ ಪ್ರತಿನಿಧಿಯಾಗಿರುವ ಭಾರತೀಯ ವಿದೇಶಾಂಗಸೇವೆಯ ಅಧಿಕಾರಿ ಪಿ.ಎಸ್‌. ಗಂಗಾಧರ್‌,ನಾಗರಿಕ ಸೇವಾ ಪರೀಕ್ಷೆ ಬರೆಯಲು ಯಾವುದೇ ಅಂಜಿಕೆ ಬೇಡ. ನಿಮ್ಮ ಗುರಿ ಉದ್ದೇಶಉನ್ನತವಾಗಿರಲಿ. ನಿಮ್ಮಲ್ಲಿರುವ ಸಾಮರ್ಥ್ಯದ ಬಗ್ಗೆ ಅಪನಂಬಿಕೆ ಬಿಟ್ಟು ಮನಸ್ಥಿತಿಯ ಅಡೆತಡೆಗಳನ್ನು ಭೇದಿಸಿ ಹೊರಬಂದರೆ ಉನ್ನತ ಹುದ್ದೆ ಅಲಂಕರಿಸಬಹುದು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೃಷ್ಣಮೂರ್ತಿ ಹನೂರು, ಡಾ.ಬಿ.ಆರ್‌. ಅಂಬೇಡ್ಕರ್‌ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪೊ›. ಶಿವಬಸವಯ್ಯ ಇತರರು ಹಾಜರಿದ್ದರು.

 ಯಶಸ್ಸು ಕೈಗೆ ಸಿಗದ ವಸ್ತುವೇನಲ್ಲ :

ನಾನೂ ಸಹ ಕನ್ನಡ ಮಾಧ್ಯಮದಲ್ಲಿಯೇ ಓದಿದ್ದೇನೆ. ನಿಮ್ಮಂತೆಯೇ ವಿದ್ಯಾರ್ಥಿ ಜೀವನ ಕಳೆದಿದ್ದೇನೆ. ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸುಕೈಗೆ ಸಿಗದ ವಸ್ತುವೇನಲ್ಲ. ಸರಿಯಾದ ಮಾರ್ಗದರ್ಶನ, ಓದಿನೆಡೆಗೆ ಆಸಕ್ತಿ, ವಿಷಯಗಳಆಯ್ಕೆ, ಕೇಂದ್ರೀಕೃತ ಗಮನವಿದ್ದಲ್ಲಿ ಪರೀಕ್ಷೆಯಲ್ಲಿ ಯಶಸ್ವಿಯಾಗಬಹುದು ಎಂದು ವಿದೇಶಾಂಗ ಸೇವೆಯ ಅಧಿಕಾರಿ ಪಿ.ಎಸ್‌. ಗಂಗಾಧರ್‌ ಸಲಹೆ ಮಾಡಿದರು. ಇದೇ ವೇಳೆನಾಗರಿಕ ಸೇವಾ ಪರೀಕ್ಷೆಗಾಗಿ ಜಿಲ್ಲೆಯ ಅಭ್ಯರ್ಥಿಗಳಿಗಾಗಿ ಮಾರ್ಗದರ್ಶನ ಮಾಡುವ ಸದುದ್ದೇಶದ ಕಾರ.ಗಳಿಗೆ ತಾವು ಸಕ್ರಿಯವಾಗಿ ತೊಗಿಕೊಳ್ಳಲು ಸಿದ್ಧರಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.