ವರ್ಷಾಂತ್ಯದೊಳಗೆ ನಿವಾಸಿಗಳಿಗೆ ಹಕ್ಕು ಪತ್ರ

ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಸರ್ಕಾರದಿಂದ ಮಹತ್ವದ ಆದೇಶ: ತಿಪ್ಪಾರೆಡ್ಡಿ

Team Udayavani, Mar 3, 2021, 6:35 PM IST

Tippareddi

ಚಿತ್ರದುರ್ಗ: ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಈ ವರ್ಷಾಂತ್ಯದ ವೇಳೆಗೆ ನಗರದ ಸುಮಾರು 4849 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಹಕ್ಕುಪತ್ರಕ್ಕೆ ಮನವಿ ಮಾಡುತ್ತಿದ್ದರು. ಆದರೆ, ಈಗ ಆ ಬೇಡಿಕೆ ಈಡೇರುವ ಸಮಯ ಬಂದಿದೆ ಎಂದರು. ಚಿತ್ರದುರ್ಗ ನಗರದಲ್ಲಿ 38 ಘೋಷಿತ ಕೊಳೆಗೇರಿಗಳಿದ್ದು, ಇದರಲ್ಲಿ 22 ಕೊಳೆಗೇರಿಗಳ 95.26 ಎಕರೆ ಪ್ರದೇಶದ ಅಂದಾಜು 4849 ಕುಟುಂಬಗಳಿಗೆ ಹಕ್ಕುಪತ್ರ ದೊರೆಯಲಿದೆ. ಇಷ್ಟೂ ಕುಟುಂಬಗಳಲ್ಲಿ ಸುಮಾರು 35 ರಿಂದ 40 ಸಾವಿರ ಜನಸಂಖ್ಯೆ ಇರಬಹುದು ಎಂದು ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳಿಗೆ ಮೀರದಂತೆ ಜಾಗ ಗುರುತಿಸಿ, ಇತರೆ ಸಮುದಾಯಗಳಿಗೆ 4 ಸಾವಿರ, ಪರಿಶಿಷ್ಟ ಜಾತಿ, ಪಂಗಡ ಹಾಗೂ ವಿಕಲಚೇತನರಿಗೆ 2 ಸಾವಿರ ರೂ. ಶುಲ್ಕ ಪಾವತಿಸಿಕೊಂಡು ಇರುವ ಜಾಗವನ್ನು ಕ್ರಮಬದ್ಧಗೊಳಿಸಲಾಗುವುದು ಎಂದರು.

ನಗರಸಭೆ ವ್ಯಾಪ್ತಿಯಲ್ಲಿರುವ ಕೊಳೆಗೇರಿಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಿಕೊಂಡು, ಚೆಕ್‌ಬಂದಿ ಮತ್ತಿತರೆ ದಾಖಲಾತಿ ಸಿದ್ಧಪಡಿಸಿ ಮುಂದಿನ 8 ತಿಂಗಳಲ್ಲಿ ಹಕ್ಕುಪತ್ರ ವಿತರಣೆಗೆ ಚಾಲನೆ ನೀಡಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.

ಬರಗೇರಿ ಭೋವಿ ಕಾಲೋನಿ, ಸಿಹಿ ನೀರು ಹೊಂಡ, ಹಿಮ್ಮತ್‌ನಗರ, ಜಿ.ಎಚ್‌. ತಿಪ್ಪಾರೆಡ್ಡಿ ನಗರ, ವಿಜಯನಗರ, ಯೂನಿಯನ್‌ ಟಾಕೀಸ್‌ ಹಿಂಭಾಗ, ಜೈನ್‌ ಕಾಲೋನಿಯ ಕೊಳೆಗೇರಿಗಳ ಜಮೀನು ವಿವಾದಗಳಿದ್ದು, ಸದ್ಯಕ್ಕೆ ಇಲ್ಲಿ ಹಕ್ಕುಪತ್ರ ನೀಡುತ್ತಿಲ್ಲ. ಅಗಳೇರಿ, ಕಾಮನಬಾವಿ ಕೊಳೆಗೇರಿಗಳು ಪಹಣಿಯಲ್ಲಿ ಅರಣ್ಯ ಪ್ರದೇಶ ಎಂದು ನಮೂದಾಗಿವೆ. ಇದನ್ನು ಸರಿಪಡಿಸಬೇಕಿದೆ ಎಂದು ತಿಳಿಸಿದರು.

7252 ಅರ್ಹ ಫಲಾನುಭವಿಗಳ ಪತ್ತೆ: ನಗರಸಭೆ ವ್ಯಾಪ್ತಿಯ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ವಸತಿ ನಿವೇಶನ ರಹಿತರಿಗೆ ಜಿ+2 ಮಾದರಿಯಲ್ಲಿ ಮನೆಗಳನ್ನು ಒದಗಿಸಲು ಅರ್ಜಿ ಆಹ್ವಾನಿಸಿದಾಗ 13500 ಅರ್ಜಿಗಳು ಬಂದಿದ್ದವು. ಇದರಲ್ಲಿ ಅರ್ಹರನ್ನು ಗುರುತಿಸಿದ್ದು, 7252 ಫಲಾನುಭವಿಗಳು ಪತ್ತೆಯಾಗಿದ್ದಾರೆ. ಇವರಿಗೆ ವಸತಿ ಕಲ್ಪಿಸಲು ಆಶ್ರಯ ಸಮಿತಿಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದರು.

ಮೊದಲ ಹಂತದಲ್ಲಿ ಮೇಗಳಹಳ್ಳಿಯ ರಿ.ಸ.ನಂ 22 ರಲ್ಲಿ 15.2 ಎಕರೆಯಲ್ಲಿ ಜಿ+2 ಮಾದರಿಯಲ್ಲಿ 1001 ಮನೆ ನಿರ್ಮಾಣ ಮಾಡಲು ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಪ್ರತಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ 6.30 ಲಕ್ಷ ರೂ. ನಿಗ ದಿ ಮಾಡಲಾಗಿದೆ. ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 3.50 ಲಕ್ಷ ರೂ. ಸಹಾಯಧನ, 2.80 ಲಕ್ಷ ರೂ. ಬ್ಯಾಂಕ್‌ ಸಾಲವಾಗಿ ನೀಡಲಾಗುವುದು. ಇತರೆ ವರ್ಗದ ಫಲಾನುಭವಿಗಳಿಗೆ ಸರ್ಕಾರದಿಂದ 2.70 ಲಕ್ಷ ರೂ. ಸಹಾಯ ಧನ, ಉಳಿಕೆ 3.60 ಲಕ್ಷ ರೂ. ಬ್ಯಾಂಕ್‌ ಸಾಲ ದೊರೆಯಲಿದೆ. ಪ್ರತಿ ಫಲಾನುಭವಿ ಆರಂಭದಲ್ಲಿ ವೈಯಕ್ತಿಕ ಉಳಿತಾಯ ಖಾತೆಯಲ್ಲಿ 10 ಸಾವಿರ ರೂ. ಠೇವಣಿಯಾಗಿಡಬೇಕು. ಬ್ಯಾಂಕ್‌ ಸಾಲವನ್ನು ಇಎಂಐ ಮೂಲಕ ಪಾವತಿಸಬೇಕು ಎಂದರು.

ಈ ಯೋಜನೆಗಾಗಿ ಮೊದಲ ಹಂತದಲ್ಲಿ ನಗರಸಭೆ ವ್ಯಾಪ್ತಿಯ 1176 ಫಲಾನುಭವಿಗಳನ್ನು ಗುರುತಿಸಿದ್ದು, ಎಸ್ಸಿ 334, ಎಸ್ಟಿ 134, ಅಲ್ಪ ಸಂಖ್ಯಾತ 125 ಹಾಗೂ ಸಾಮಾನ್ಯ ವರ್ಗದ 583 ಫಲಾನುಭವಿಗಳನ್ನು ಗುರುತಿಸಲಾಗಿದೆ. ಇದೇ ರೀತಿ ಮದಕರಿಪುರ ಬಳಿಯೂ 8 ಎಕರೆ ಜಾಗ ಗುರುತಿಸಿದ್ದು, ಜಿ+2 ಮಾದರಿಯಲ್ಲಿ 600 ಮನೆ ನಿರ್ಮಿಸಲು ಡಿಪಿಆರ್‌ ತಯಾರಿಗೆ ಟೆಂಡರ್‌ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪೌರಾಯುಕ್ತ ಹನುಮಂತರಾಜು, ಇಂಜಿನಿಯರ್‌ಗಳಾದ ಸತೀಶ್‌  ರೆಡ್ಡಿ, ನಾರಾಯಣರೆಡ್ಡಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.