ಹೇಗಿದ್ದೆ ಹೇಗಾದೆ : ಈ ತಾತ ಶ್ರೀಮಂತ ಭಿಕ್ಷುಕ..!

ಕುಡಿತದ ಚಟ ರಮೇಶ್ ಯಾದವ್ ಅವರನ್ನು ಭಿಕ್ಷುಕನನ್ನಾಗಿ ಮಾಡಿತು

Team Udayavani, Mar 4, 2021, 5:07 PM IST

ನವದೆಹಲಿ : ಮನುಷ್ಯನ ಜೀವನವೇ ಹಾಗೆ, ಎಲ್ಲವನ್ನೂ ಕೊಟ್ಟು ನಂತ್ರ  ಏನೂ ಬಿಡದಂತೆ ಕಿತ್ತಕೊಳ್ಳುತ್ತದೆ. ನಮ್ಮ ಕಣ್ಣ ಮುಂದೆಯೇ ಅದೆಷ್ಟೋ ಇಂತಹ ಉದಾಹರಣೆಗಳು ಇವೆ. ಆದ್ರೆ ಕೋಟ್ಯಾಧಿಪತಿಯಾಗಿದ್ದ ವ್ಯಕ್ತಿ ಒಂದೇ ರಾತ್ರಿಗೆ ಭಿಕ್ಷುಕನಾಗುತ್ತಾನೆ ಅಂದ್ರೆ ನೀವು ನಂಬುತ್ತೀರ? ನಂಬಲೇ ಬೇಕು ಯಾಕಂದ್ರೆ ಇದು ಯಾವುದೋ ಕಾಲ್ಪನಿಕ ಕಥೆಯಲ್ಲ, ಬದಲಿಗೆ ನಿಜ ಕಥೆ.

ಹೌದು ಹಿಂದೊಮ್ಮೆ ಕೋಟಿ ಕೋಟಿ ದುಡ್ಡು, ಐಷಾರಾಮಿ ಕಾರು, ಬಂಗಲೆ, ಆಳು ಕಾಳುಗಳು ಇದ್ದ ರಮೇಶ್ ಯಾದವ್ ಎಂಬ ಶ್ರೀಮಂತ ವ್ಯಕ್ತಿ ತನ್ನ ಮನೆಯವರಿಗೇ ಬೇಡವಾಗಿ ರಾತ್ರೋ ರಾತ್ರಿ ಮನೆಯಿಂದ ದೂಡಲ್ಪಡುತ್ತಾನೆ. ನಂತ್ರ ತಾನು ಭಿಕ್ಷುಕನಾಗಿ ಜೀವನ ಸಾಗಿಸುತ್ತಿರುವ ಸತ್ಯ ಕಥೆ.

ಎರಡು ವರ್ಷಗಳಿಂದ ಮಧ್ಯಪ್ರದೇಶದ ಇಂಧೋರ್‌ನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ರಮೇಶ್ ಯಾದವ್‌ನನ್ನು ಅಲ್ಲಿನ ಎನ್‌ಜಿಒ ಸಂಸ್ಥೆ ಕೇಂದ್ರ ಸರ್ಕಾರದ ದೀನಬಂಧು ಪುನರ್ವಸತಿ ಯೋಜನೆಯಡಿ ನಿರ್ಗತಿಕರಿಗೆ ತೆರೆದಿರುವ ಶಿಬಿರದಲ್ಲಿ ಪತ್ತೆ ಹಚ್ಚಿದೆ. ಈ ವೇಳೆ ರಮೇಶ್ ಯಾದವ್ ಹೇಳಿರುವ ಕಥೆ ಕೇಳಿದ ಅಲ್ಲಿನವರು ಆಶ್ಚರ್ಯ ಚಕಿತರಾಗಿದ್ದಾರೆ. ಹಾಗಾದ್ರೆ ಆ ರಮೇಶ್ ಯಾದವ್ ಏನಾಗಿದ್ರು ಗೊತ್ತಾ..?

ನಿರ್ಗತಿಕರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ರಮೇಶ್ ಅವರನ್ನು ಪ್ರಶ್ನೆ ಮಾಡಿದಾಗ ಆ ಕುಬೇರನ ಜೀವನದ ಸತ್ಯ ಹೊರ ಬಿದ್ದಿದೆ. ರಮೇಶ್ ಓರ್ವ ಶ್ರೀಮಂತ ವ್ಯಕ್ತಿಯಾಗಿದ್ದು ಕುಡಿತದ ದಾಸನಾಗಿರುತ್ತಾನೆ. ಇದ್ರಿಂದ ಬೇಸತ್ತ ಅವರ ಮನೆಯವರೇ ಆತನನ್ನು ಮನೆಯಿಂದ ಹೊರ ಹಾಕುತ್ತಾರೆ. ನಂತ್ರ ಆ ರಮೇಶ್ ಕುಡಿತಕ್ಕಾಗಿ ಎಲ್ಲರ ಬಳಿ ಹಣವನ್ನು ಭಿಕ್ಷೆ ಬೇಡುತ್ತಿದ್ದಾನೆ. ಈ ವಿಚಾರವನ್ನ ಸ್ವತಃ ರಮೇಶ್ ಯಾದವ್‍ ಹೇಳಿದ್ದಾರೆ.

ಇನ್ನ ತನ್ನ ಮನೆಯಲ್ಲಿ ತನಗೆ ಏನೆಲ್ಲ ಬೇಕೋ ಅದೆಲ್ಲ ತನ್ನ ಕೊಠಡಿಯಲ್ಲೇ ಸಿಗುವಂತೆ ವ್ಯವಸ್ಥೆ ಮಾಡಿಸಿಕೊಂಡಿದ್ದನಂತೆ ಈ ರಮೇಶ್. ಈತನಿಂದ ಮಾಹಿತಿ ಪಡೆದ ಎನ್‍ಜಿಒ ಅಧಿಕಾರಿಗಳು ಆತನ ಮನೆಗೆ ಭೇಟಿ ಕೊಟ್ಟಾಗ ರಮೇಶ್ ಹೇಳಿದ ರೀತಿಯಲ್ಲೇ ಮನೆ ಇರುವುದು ಗೊತ್ತಾಗಿ ಆಶ್ಚರ್ಯ ಪಟ್ಟಿದ್ದಾರೆ.

ಮತ್ತೊಂದು ಮಾಹಿತಿ ಅಂದ್ರೆ ರಮೇಶ್ ಮನೆಯವರು ಒಂದು ಮಾತನ್ನು ಹೇಳಿದ್ದು, ರಮೇಶ್ ಈಗಲೂ ಕುಡಿತವನ್ನು ಬಿಟ್ಟರೆ ನಾವು ಮನೆಗೆ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.