ರಸ್ತೆ ಅಗಲೀಕರಣಕ್ಕೆ ಗಿಡಗಳು ಅಡ್ಡಿ

ಕ್ರಮ ಕೈಗಗೊಳ್ಳಲು ಅರಣ್ಯ ಇಲಾಖೆಗೆ ಒತ್ತಾಯ! ­ಸುಗಮ ಸಂಚಾರಕ್ಕೂ ತೀವ್ರ ತೊಂದರೆ

Team Udayavani, Mar 4, 2021, 5:53 PM IST

Road

ತೇರದಾಳ: ಸ್ಥಳೀಯ ಪುರಸಭೆ ನಗರೋತ್ಥಾನ ಮೂರನೇ ಹಂತದ ಅನುದಾನದಲ್ಲಿ ಇಲ್ಲಿನ ಅಂಬೇಡ್ಕರ್‌  ವೃತ್ತದಿಂದ ಕುಡಚಿ ರಸ್ತೆಯ ರಾಯಲ್‌ ರೆಸಿಡೆನ್ಸಿ ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಹಾಕಿಕೊಳ್ಳಲಾಗಿದೆ. ಅದರಂತೆ ಕಾಮಗಾರಿಯೂ ಪ್ರಾರಂಭಗೊಂಡಿದೆ. ಆದರೆ ಕಾಮಗಾರಿ ಸ್ಥಳದಲ್ಲಿ ಗಿಡ-ಮರಗಳು ಅಡ್ಡ ಆಗಿದ್ದರಿಂದ ಆ ಸ್ಥಳವನ್ನು ಬಿಟ್ಟು ಮುಂದೆ ಕೆಲಸ ಮಾಡಲಾಗುತ್ತಿದೆ.

ಗಿಡ-ಮರಗಳ ಅಕ್ಕ-ಪಕ್ಕ ರಸ್ತೆಯನ್ನು ಅಗೆದ ಪರಿಣಾಮ ಗಿಡ-ಮರಗಳು ಬಾಗಿವೆ. ಇದರಿಂದ ಯಾವಾಗ ಬೇಕಾದರೂ ಬೀಳುವ ಸಾಧ್ಯತೆ ಇದ್ದು, ಅನಾಹುತಕ್ಕೆ ಕಾದು ಕುಳಿತಂತಾಗಿದೆ. ಗಿಡ-ಮರಗಳು ಬಾಗಿದ ಪರಿಣಾಮ ಆ ಕಡೆಗೆ ವಾಹನಗಳು ಹೋಗಲು ಹಿಂದೇಟು ಹಾಕುತ್ತಿವೆ. ಒಂದಡೆ ವಾಹನಗಳು ಓಡಾಟ ಮಾಡುತ್ತಿರುವುದರಿಂದ ಸಂಚಾರಕ್ಕೂ ತೀವ್ರ ತೊಂದರೆ ಆಗಿದೆ.

ಇನ್ನು ರಸ್ತೆ ಪಕ್ಕದ ಗಿಡ-ಮರಗಳನ್ನು ತೆರವುಗೊಳಿಸುವಂತೆ ಪುರಸಭೆ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಲಿಖೀತವಾಗಿ ಪತ್ರ ಬರೆದಿದ್ದಾರೆ. ಅದರಂತೆ ಅರಣ್ಯ ಇಲಾಖೆ ಒಂದು ಮರಕ್ಕೆ ಹತ್ತು ಸಸಿಗಳನ್ನು ಬೇರೆ ಕಡೆಗೆ ನೆಟ್ಟು ಪ್ರತಿ ಮರಕ್ಕೆ 373 ಹಣ ಅರಣ್ಯ ಇಲಾಖೆಗೆ ಸಂದಾಯ ಮಾಡಬೇಕೆಂದು ತಿಳಿಸಿದೆ. ಒಟ್ಟು 2.27 ಲಕ್ಷ ಹಣವನ್ನು ಪುರಸಭೆ ಪಾವತಿಸಬೇಕಾಗಿದೆ. ಆದರೆ ಪುರಸಭೆ 15 ದಿನಗಳ ಕಾಲಾವಕಾಶ ಕೇಳಿದ್ದು, ಎಸ್‌ಎಫ್‌ಸಿ ಅಥವಾ 14ನೇ ಇಲ್ಲವೇ 15ನೇ ಹಣಕಾಸು ಯೋಜನೆಯಡಿ ಅನುದಾನ ಮೀಸಲಿಟ್ಟು, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಬಳಿಕ ಹಣ ಪಾವತಿಸುವುದಾಗಿ ತಿಳಿಸಿದೆ.

ಅಲ್ಲಿಯವರೆಗೆ ಕಾಮಗಾರಿ ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಕಾಮಗಾರಿ ಮಾಡುವ ಸ್ಥಳದ ಗಿಡ-ಮರಗಳನ್ನು ತೆರವುಗೊಳಿಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪುರಸಭೆ ಲಿಖೀತ ಪತ್ರ ನೀಡಿ ಮನವಿ ಮಾಡಿದೆ. ಆದರೆ ಇದುವರೆಗೆ ಅರಣ್ಯ  ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದರ ಜತೆಗೆ ಗಿಡ-ಮರಗಳು ಬಾಗಿದ್ದರಿಂದ ಅವಘಡ ಸಂಭವಿಸಬಹುದಾಗಿದೆ. ಆದ್ದರಿಂದ ಈ ಬಗ್ಗೆ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.