ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು


Team Udayavani, Mar 5, 2021, 3:20 AM IST

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

ಮಹಾನಗರ: ಗ್ರಾಮಾಂತರ ಪ್ರದೇಶಗಳಲ್ಲಿ ಡ್ರೋನ್‌ ಬಳಸಿ ಆಸ್ತಿಗಳ ಅಳತೆ ಮಾಡಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ ಸ್ವಾಮಿತ್ವ  ಯೋಜನೆಯಡಿಯಲ್ಲಿ ದ.ಕ. ಜಿಲ್ಲೆಯಲ್ಲಿ ಮಾ.1ರ ವರೆಗೆ 86 ಗ್ರಾಮಗಳಲ್ಲಿ ಮಾರ್ಕಿಂಗ್‌ ಪೂರ್ಣಗೊಂಡಿದೆ. ಈ ಪೈಕಿ 327 ಹ್ಯಾಮ್ಲೆಟ್‌ಗಳಲ್ಲಿ (ಜನವಸತಿ ಪ್ರದೇಶ)10,748 ಆಸ್ತಿಗಳನ್ನು ಗುರುತಿಸಲಾಗಿದೆ.

ಸ್ವಾಮಿತ್ವ  ಯೋಜನೆಯಲ್ಲಿ ರಾಜ್ಯ ದಲ್ಲಿ ಆರಂಭಿಕ ಹಂತದಲ್ಲಿ 16 ಜಿಲ್ಲೆ ಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ದ.ಕ. ಜಿಲ್ಲೆಯು ಒಂದಾಗಿತ್ತು. ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 90 ಗ್ರಾಮಗಳನ್ನು ಆಯ್ಕೆ ಮಾಡಿ ಸೆಪ್ಟಂಬರ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು.

ಜಿಲ್ಲೆಯಲ್ಲಿ ಮಾರ್ಕಿಂಗ್‌ ಮುಗಿದಿರುವ ತಾಣಗಳಲ್ಲಿ ಡ್ರೋನ್‌  ಸರ್ವೇ ಪ್ರಗತಿಯಲ್ಲಿದೆ. ಎರಡು ಡ್ರೋನ್‌ ಗಳು ಸರ್ವೇ ಕಾರ್ಯದಲ್ಲಿ ನಿರತವಾಗಿವೆ. ಸ್ವಾಮಿತ್ವ  ಯೋಜನೆ ಪ್ರಕಾರ ಕನಿಷ್ಟ 10ಕ್ಕಿಂತ ಜಾಸ್ತಿ ಮನೆಗಳು ಒಂದೇ ಕಡೆ ಇರುವ ಪ್ರದೇಶವನ್ನು ಒಂದು ಹ್ಯಾಮ್ಲೆಟ್‌ ಎಂದು ಪರಿಗಣಿಸಲಾಗುತ್ತಿದೆ. ಕಂದಾಯ ಇಲಾಖೆಯ ಭೂಮಾಪಕರು ಮತ್ತು ಗ್ರಾ.ಪಂ. ಅಧಿಕಾರಿಗಳು ಜಂಟಿಯಾಗಿ ಆಯ್ಕೆಯಾಗಿರುವ ಗ್ರಾಮಗಳ ಜನ ವಸತಿ ಪ್ರದೇಶದ ಪ್ರತಿ ಆಸ್ತಿಯನ್ನು ಸಂಬಂಧಿತ ಭೂಮಾಲಕರ ಸಮ್ಮುಖದಲ್ಲಿ ಪರಿಶೀಲಿಸಿ ಗುರುತು ಮಾಡುತ್ತಾರೆ.

ಮಾರ್ಕಿಂಗ್‌ ಮುಗಿದಿರುವ ಗ್ರಾಮಗಳಲ್ಲಿ ಗುರುತಿಸಿರುವ 237 ಹ್ಯಾಮ್ಲೆಟ್‌ಗಳ ಪೈಕಿ 116 ಹ್ಯಾಮ್ಲೆಟ್‌ಗಳಲ್ಲಿ ಡ್ರೋನ್‌  ಸರ್ವೇ ನಡೆಸಲಾಗಿದೆ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ತಾಲೂಕುಗಳಲ್ಲಿ ಈಗಾಗಲೇ ಡ್ರೋನ್‌  ಸರ್ವೇ ಸಂಪೂರ್ಣಗೊಂಡಿದ್ದು, ಸುಳ್ಯದಲ್ಲಿ ಇನ್ನೆರಡು ದಿನಗಳಲ್ಲಿ ಪೂರ್ಣವಾಗಲಿವೆ. ಕಡಬದಲ್ಲಿ ಸೋಮವಾರದಿಂದ ಡ್ರೋನ್‌  ಸರ್ವೇ ಆರಂಭವಾಗಲಿದೆ ಎಂದು ಸ್ವಾಮಿತ್ವ  ಯೋಜನೆಯ ಅನುಷ್ಠಾನದ ಹೊಣೆಯನ್ನು ವಹಿಸಿರುವ ಭೂಮಾಪನ ಇಲಾಖೆ ಮೂಲಗಳು ತಿಳಿಸಿವೆ.

ಮುಂದಿನ ಹಂತವಾಗಿ ಡ್ರೋನ್‌ ಸರ್ವೇಯಲ್ಲಿ ಸೆರೆ ಹಿಡಿದ ಚಿತ್ರಗಳನ್ನು ಸಂಸ್ಕರಿಸಿ ಗುರುತಿಸಲಾದ ಆಸ್ತಿಗಳ ನಕಾಶೆ ತಯಾರಿಸಲಾಗುತ್ತದೆ. ಗ್ರಾ.ಪಂ.ಗಳಲ್ಲಿ ನಮೂದಾಗಿರುವ ದಾಖಲಾತಿಗಳ ಜತೆ ಹೊಂದಾಣಿಕೆ ಮಾಡಿ ಪರಿಶೀಲನೆ ನಡೆಸಲಾಗುತ್ತದೆ. ಬಳಿಕ ಗ್ರಾಮಸ್ಥರ ಜತೆ ಸಭೆ ನಡೆಸಿ ತಕರಾರುಗಳಿದ್ದರೆ ಇತ್ಯರ್ಥಪಡಿಸಿ ಸರಕಾರದ ದಾಖಲಾತಿಗೆ ರವಾನಿಸಲಾಗುತ್ತದೆ. ಆಗ ಹೆಸರು ಹಾಗೂ ಇನ್ನಿತರ ತಿದ್ದುಪಡಿಗೂ ಅವಕಾಶವಿರುತ್ತದೆ. ಅಂತಿಮವಾಗಿ ಆಸ್ತಿ ಮಾಲಕರಿಗೆ ಪ್ರಾಪರ್ಟಿ ಕಾರ್ಡ್‌ ನೀಡಲಾಗುತ್ತದೆ.

ಸ್ವಾಮಿತ್ವ ದ ಯೋಜನೆಯಲ್ಲಿ ಸರ್ವೆ ಹೆಚ್ಚು ನಿಖರವಾಗಿರುವುದರಿಂದ ಆಸ್ತಿ ಮಾಲಕತ್ವ ಬಗ್ಗೆ ಇರುವ ಸಮಸ್ಯೆಗಳು ಮತ್ತು ಗೊಂದಲಗಳು ಬಗೆಹರಿಯಲಿವೆ. ಆಸ್ತಿದಾರರಿಗೆ ಸರಿಯಾದ ನಕ್ಷೆಯೊಂದಿಗೆ ಶಾಸನಬದ್ದ ಆಸ್ತಿ ದಾಖಲೆಗಳನ್ನು ಲಭ್ಯವಾಗುತ್ತವೆ. ಹಕ್ಕು ದಾಖಲೆ ಸಿದ್ದಪಡಿಸುವಿಕೆ, ಆಸ್ತಿಗಳ ವರ್ಗಾವಣೆ ಕಾರ್ಯ ಸುಗಮವಾಗಿ ನಡೆಯುತ್ತವೆ. ಆಸ್ತಿಗಳ ನಿಖರ ಮಾಹಿತಿ ಲಭ್ಯವಾಗುವುದರಿಂದ ತೆರಿಗೆಯನ್ನು ಕರಾರುವಕ್ಕಾಗಿ ನಿರ್ಧರಿಸಲು ಆಡಳಿತ ವ್ಯವಸ್ಥೆಗೂ ಸಹಾಯವಾಗುತ್ತದೆ ಎಂಬುದಾಗಿ ಇಲಾಖೆ ಹೇಳಿದೆ.

ದ.ಕ. ಜಿಲ್ಲೆಯಲ್ಲಿ ಸ್ವಾಮಿತ್ವ  ಯೋಜನೆ ಅನುಷ್ಠಾನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಾರ್ಕಿಂಗ್‌ ಆಗಿರುವ ಗ್ರಾಮಗಳಲ್ಲಿ ಡ್ರೋನ್‌  ಸರ್ವೇ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ 5 ತಾಲೂಕುಗಳಲ್ಲಿ ಪೂರ್ಣಗೊಂಡಿವೆ. ಮುಂದಿನ ವಾರದೊಳಗೆ ಉಳಿದ 2 ತಾಲೂಕುಗಳಲ್ಲಿ ಡ್ರೋನ್‌  ಸರ್ವೇ ಮುಕ್ತಾಯವಾಗಲಿದ್ದು ಬಳಿಕ ನಕ್ಷೆ ಸಿದ್ಧಪಡಿಸುವುದಕ್ಕೆ ಪೂರಕ ಪ್ರಕ್ರಿಯೆಗಳು ನಡೆಯಲಿವೆ.ನಿರಂಜನ್‌,  ಭೂಮಾಪನ ಇಲಾಖೆ ಉಪ ನಿರ್ದೇಶಕರು, ದ.ಕ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.