ಪಿಎಸ್‌ಐ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

ಆರೋಪಿಯನ್ನು ಬಂಧಿಸಲು ತೆರಳಿದಾಗ ಘಟನೆ | ಮಹದೇವಪುರ ಠಾಣೆ ಪಿಎಸ್‌ಐಗೆ ಗಾಯ

Team Udayavani, Mar 5, 2021, 5:04 PM IST

PSi

ಬೆಂಗಳೂರು/ಕೆಜಿಎಫ್: ಕಳ್ಳತನ ಪ್ರಕರಣವೊಂದರಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಆರೋಪಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕೆಜಿಎಫ್ ನಲ್ಲಿ ನಡೆದಿದೆ.

ಘಟನೆಯಲ್ಲಿ ಬೆಂಗಳೂರಿನ ಮಹದೇವಪುರ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಹರಿನಾಥ ಬಾಬು ಗಾಯ ಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆರೋಪಿ ಅಪ್ಪೆನ್‌ (36) ಪತ್ತೆಗಾಗಿ ಮಹದೇವ ಪುರ ಠಾಣೆಯ ಒಂದು ತಂಡ ಮತ್ತು ಸ್ಥಳೀಯ ಪೊಲೀಸರ ಒಂದು ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಆರೋಪಿ ಅಪ್ಪೆನ್‌ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ, ದರೋಡೆ, ಕೊಲೆ ಯತ್ನ ಸೇರಿ ಸುಮಾರು 25-30 ಪ್ರಕರಣಗಳು ದಾಖಲಾಗಿವೆ. ಕೆಜಿಎಫ್ ವಿವಿಧ ಠಾಣೆಯಲ್ಲೂ 20 ಅಪರಾಧ ಪ್ರಕರ ಣಗಳು ದಾಖಲಾಗಿದ್ದು, ರೌಡಿ ಪಟ್ಟಿ ತೆರೆಯಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಕಳ್ಳ ತನ ಎಸಗಿ ತನ್ನ ಸ್ವಂತ ಊರಾದ ಆಂಡರಸನ್‌ ಪೇಟೆ ಬಳಿಯ ಲೂದ್‌ ನಗರಕ್ಕೆ ಹೋಗಿದ್ದ. ಈ ಮಾಹಿತಿ ಮೇರೆಗೆ ಪಿಎಸ್‌ಐ ಹರಿನಾಥ ಬಾಬು ತಮ್ಮ ತಂಡದ ಜತೆ ಆತನ ಮನೆ ಬಳಿ ಹೋಗಿ ಬುಧ ವಾರ ತಡ ರಾತ್ರಿ 1.30ರ ಸುಮಾರಿಗೆ ಹುಡುಕಾಟದಲ್ಲಿ ತೊಡಗಿದ್ದು, ಆತನ ಪುತ್ರನನ್ನು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಕತ್ತಲೆಯಲ್ಲಿ ಬಂದ ಆರೋಪಿ ಮಾರಕಾಸ್ತ್ರದಿಂದ ಸಬ್‌ಇನ್‌ಸ್ಪೆಕ್ಟರ್‌ ಕೈಗೆ ಬೀಸಿದ್ದಾರೆ. ಪರಿಣಾಮ ಪಿಎ ಸ್‌ಐ ಅವರ ಎರಡು ಕೈಗಳಿಗೆ ಗಾಯಗಳಾಗಿವೆ. ಆದರೂ ಆರೋಪಿಗೆ ಬಂಧನವಾಗುವಂತೆ ಸೂಚಿಸಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಆರೋಪಿ ಕತ್ತಲೆಯಲ್ಲಿ ತಲೆ ಮರೆಸಿಕೊಂಡು ಹೋಗಿ ದ್ದಾನೆ. ಕೂಡಲೇ ಸಬ್‌ ಇನ್ಸ್‌ಪೆಕ್ಟರ್‌ ಹರಿನಾಥಬಾಬು ಅವರನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಯಿತು. ಪ್ರಥಮ ಚಿಕಿತ್ಸೆ ಕೊಡಿಸಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸದ್ಯಚಿಕಿತ್ಸೆ ಪಡೆ ದುಕೊಳ್ಳುತ್ತಿದ್ದಾರೆ. ಈ ಸಂಬಂಧವಾಗಿ ಆಂಡರಸನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಅಪ್ಪೆನ್‌ ಮತ್ತು ಮತ್ತೂಬ್ಬ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌, ಡಿವೈಎಸ್ಪಿ ಉಮೇಶ್‌ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಆರೋಪಿ ಬಂಧನಕ್ಕೆ ತಂಡ ರಚನೆ: ಪರಾರಿಯಾಗಿರುವ ಆರೋಪಿ ಅಪ್ಪೆನ್‌ ಸೆರೆ ಹಿಡಿಯಲು ವಿಶೇಷ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.